AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ: ಮುಂದೇನಾಯ್ತು?

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಗೆ ಓರ್ವ ವ್ಯಕ್ತಿ 25 ಲಕ್ಷ ರೂ ನೀಡಿ ಯಾಮಾರಿರುವಂತಹ ಘಟನೆ ಗದಗಿನಲ್ಲಿ ನಡೆದಿದೆ. ಈ ವಿಚಾರವಾಗಿ ದೂರು ನೀಡಲು ಹೋದ ವ್ಯಕ್ತಿಗೆ ರೋಣ ಸಿಪಿಐ ಬೆದರಿಕೆ ಹಾಕಿ 15 ಲಕ್ಷ ರೂ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ: ಮುಂದೇನಾಯ್ತು?
ರಾಘವೇಂದ್ರ ರಾಠೋಡ, ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Apr 27, 2025 | 11:32 AM

Share

ಗದಗ, ಏಪ್ರಿಲ್ 27: ದೂರು ನೀಡಲು ಬಂದ ವ್ಯಕ್ತಿಯನ್ನು ಬೆದರಿಸಿದ (Threatens) ಸಿಪಿಐ, ಆತನಿಂದಲೇ 15 ಲಕ್ಷ ರೂ ಬೇಡಿಕೆ ಇಟ್ಟಿರುವಂತಹ ಘಟನೆ ನಗರಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ಸಿಪಿಐ (CPI) ಸಿದ್ದಪ್ಪ ಬೀಳಗಿ ವಿರುದ್ಧ ಗಜೇಂದ್ರಗಡದ ರಾಘವೇಂದ್ರ ರಾಠೋಡ ಎಂಬಾತ ಗಂಭೀರ ಆರೋಪ ಮಾಡಿದ್ದಾರೆ. ಈಗಾಗಲೇ ಹೆದರಿಸಿ 3 ಲಕ್ಷ ರೂ. ಹಣ ವಸೂಲಿ‌ ಮಾಡಿದ್ದು, ಉಳಿದ ಹಣಕ್ಕಾಗಿ ನಿತ್ಯ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ SP ಕಚೇರಿಗೆ ಲಿಖಿತ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದ್ದಾರೆ. ಸದ್ಯ ಸಿದ್ದಪ್ಪ ಬೀಳಗಿ ಕಿರುಕುಳಕ್ಕೆ ರಾಘವೇಂದ್ರ ಕಂಗಾಲಾಗಿದ್ದಾರೆ.

ಘಟನೆ ‌ಹಿನ್ನಲೆ

ರಾಘವೇಂದ್ರ ರಾಠೋಡಗೆ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿ ಪರಿಚಯವಾಗಿದ್ದಾಳೆ. ದಿನಕಳೆದಂತೆ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಬಳಿಕ ಕಷ್ಟ ಹೇಳಿಕೊಂಡ ಯುವತಿಗೆ ರಾಘವೇಂದ್ರ ಹಂತ ಹಂತವಾಗಿ ಬರೋಬ್ಬರಿ 25 ಲಕ್ಷ ರೂ ನೀಡಿದ್ದಾರೆ. ಬಳಿಕ ಹಣ ವಾಪಸ್ ಕೇಳಿದರೆ ಯುವತಿ ನೀಡಿಲ್ಲ. ಹೀಗಾಗಿ ರಾಘವೇಂದ್ರ ಆತ್ಮಹತ್ಯೆ ಯತ್ನಿಸಿದ್ದರು.

ಇದನ್ನೂ ಓದಿ: ಗದಗ: ಮಾಜಿ ಪ್ರೇಮಿಯಿಂದ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್, ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ

ಇನ್ನು ಹಣ ಪಡೆದ ಯುವತಿ ಸಿಪಿಐ ಸಿದ್ದಪ್ಪ ಬೀಳಗಿ ಸಂಬಧಿಕಳಂತೆ. ಈ ವಿಚಾರಕ್ಕೆ ದೂರು ನೀಡಲು ಬಂದ ರಾಘವೇಂದ್ರಗೆ ಸಿಪಿಐನಿಂದ ಬೆದರಿಕೆ ಹಾಕಿ, ಹಲ್ಲೆ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದ ದೃಶ್ಯ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಹಿತಿ ಹಕ್ಕಿನಡಿ ಸಿಸಿಟಿವಿ ದೃಶ್ಯಗಳು ನೀಡುವಂತೆ ಕೇಳಿದ್ದೇನೆ ಎಂದಿದ್ದಾರೆ. ಆಗ ನಿನ್ನ ಮೇಲೆ ರೇಪ್ ಕೇಸ್ ಹಾಕಿಸ್ತಿನಿ ಅಂತ ಸಿಪಿಪಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ.

ಬೆದರಿಕೆ ಹಾಕಿ ಲಂಚ ಪಡೆದಿದ್ರೆ‌ ಸಿಪಿಐ ವಿರುದ್ಧ ಕ್ರಮ ಎಂದ ಎಸ್​​ಪಿ ಬಿಎಸ್ ನೇಮಗೌಡ

ಘಟನೆ ಬಗ್ಗೆ ಗದಗ ಎಸ್​​ಪಿ ಬಿಎಸ್ ನೇಮಗೌಡ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಈ ವಿಷಯದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಬೆದರಿಕೆ, ಲಂಚ ಪಡೆದಿರುವ ಆರೋಪ ಸುಳ್ಳು. ಆ ಮಹಿಳೆಗೆ ನೀಡಿದ ಹಣ ಕೊಡಿಸುವಂತೆ ನಮ್ಮ ಅಧಿಕಾರಿಗಳಿಗೆ ದುಂಬಾಲು ಬಿದ್ದಿದ್ದ. ಹಣ ಕೊಡಿಸದ ಕಾರಣ ಅಧಿಕಾರಿಗಳ ವಿರುದ್ಧ ಆರೋಪ ಮಾಡುತ್ತಿದ್ದಾನೆ. ಈ ಬಗ್ಗೆ ನರಗುಂದ ಡಿವೈಎಸ್​​ಪಿ ನೇತೃತ್ವದಲ್ಲಿ ತನಿಖೆ ಮಾಡಿಸುತ್ತೇನೆ. ಒಂದು ವೇಳೆ ಸಿಪಿಐ ಬೆದರಿಕೆ ಹಾಕಿ, ಲಂಚ ಪಡೆದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ