AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ನಡುರಸ್ತೆಯಲ್ಲೇ ಕೆಟ್ಟುನಿಂತ ಕೆಎಸ್​ಆರ್​ಟಿಸಿ ಬಸ್​; ಪ್ರಯಾಣಿಕರು, ಪೊಲೀಸರೇ ತಳ್ಳಿ ಸ್ಟಾರ್ಟ್​

ಗದಗ ನಗರದ ಪುಟ್ಟರಾಜ್ ಗವಾಯಿಗಳ ಬಸ್ ನಿಲ್ದಾಣದಿಂದ ಮುಳಗುಂದ ಪಟ್ಟಣಕ್ಕೆ ಬಸ್ ಪ್ರಯಾಣಿಕರನ್ನು ಕರೆದ್ಯೊಯುತ್ತಿತ್ತು. ಪುಟ್ಟರಾಜ್ ಗವಾಯಿಗಳ ಸರ್ಕಲ್​ನಲ್ಲಿ ಬಸ್ ಏಕಾಏಕಿ ಬಂದ್ ಆಗಿದೆ. ಬಳಿಕ ಚಾಲಕ ಬಸ್ ಸ್ಟಾರ್ಟ್ ಮಾಡಲು ಸಾಕಷ್ಟು ಪ್ರಯತ್ನ ಪಟ್ಟು ಕೊನೆಗೆ ಪೊಲೀಸ್ ಸಿಬ್ಬಂದಿ, ಪ್ರಯಾಣಿಕರು ಸೇರಿ ಬಸ್ ತಳ್ಳಿ ಸ್ಟಾರ್ಟ್​ ಮಾಡಿದ ಘಟನೆ ನಡೆದಿದೆ.

Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 06, 2024 | 3:54 PM

ಗದಗ, ಜ.06: ಜಿಲ್ಲೆಯ ಸಾರಿಗೆ ಇಲಾಖೆಯ ಮತ್ತೊಂದು ಅಸಲಿ ಮುಖವಾಡ ಕಳಿಚಿದೆ. ಕಳೆದ ತಿಂಗಳ ಗದಗ (Gadag) ಜಿಲ್ಲೆಯಲ್ಲಿನ ಬ್ರೇಕ್, ಕ್ಲಚ್ ಇಲ್ಲದ ಅಪಾಯಕಾರಿ ಡಕೋಟ್ ಬಸ್(Bus)​ಗಳ ಕುರಿತು ಟಿವಿ9 ವಿಸ್ತೃತ ವರದಿ ಮಾಡಿತ್ತು. ಈಗ ಬಸ್​ಗಳ ಕಂಡಿಷನ್ ಮತ್ತಷ್ಟು ಹದಗೆಟ್ಟು ಹೋಗಿವೆ. ಪ್ರಯಾಣಿಕನ್ನು ಹೊತ್ತೊಯುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ಗಳು ನಡುರಸ್ತೆಯಲ್ಲೇ ಕೆಟ್ಟು ನಿಲ್ಲುತ್ತಿವೆ. ಅದರಂತೆ ಇಂದು ಗದಗ ನಗರದ ನಡುರಸ್ತೆಯಲ್ಲೇ ಸರ್ಕಾರಿ ಬಸ್ ಕೆಟ್ಟು ನಿಂತಿದೆ. ಪ್ರಯಾಣಿಕರು, ಪೊಲೀಸರು, ಸಾರ್ವಜನಿಕರೇ ಬಸ್ ತಳ್ಳಿದ್ದಾರೆ.

ಗದಗ ನಗರದ ಪುಟ್ಟರಾಜ್ ಗವಾಯಿಗಳ ಬಸ್ ನಿಲ್ದಾಣದಿಂದ ಮುಳಗುಂದ ಪಟ್ಟಣಕ್ಕೆ ಬಸ್ ಪ್ರಯಾಣಿಕರನ್ನು ಕರೆದ್ಯೊಯುತ್ತಿತ್ತು. ಪುಟ್ಟರಾಜ್ ಗವಾಯಿಗಳ ಸರ್ಕಲ್​ನಲ್ಲಿ ಬಸ್ ಏಕಾಏಕಿ ಬಂದ್ ಆಗಿದೆ. ಬಳಿಕ ಚಾಲಕ ಬಸ್ ಸ್ಟಾರ್ಟ್ ಮಾಡಲು ಸಾಕಷ್ಟು ಪ್ರಯತ್ನ ಪಟ್ಟು ಸ್ಟಾರ್ಟ್ ಆಗಲೇ ಇಲ್ಲ. ಇದ್ರಿಂದ ಸಿಗ್ನಲ್​ನಲ್ಲಿ ಬಸ್ ಕೆಟ್ಟು ನಿಂತಿದ್ದು, ಟ್ರಾಫಿಕ್ ಸಮಸ್ಯೆಯಾಗಿತ್ತು.

ಇದನ್ನೂ ಓದಿ:ಚಾಲಕ ಸ್ಟೇರಿಂಗ್ ತಿರುಗಿಸುತ್ತಿದ್ದರೂ ಚಕ್ರಗಳು ತಿರುಗಲೇ ಇಲ್ಲ! ಗದಗ ಸಾರಿಗೆ ಇಲಾಖೆ‌ಯಲ್ಲಿ ಮತ್ತೊಂದು ಅಧ್ವಾನ

ಆಗ ಪೊಲೀಸ್ ಸಿಬ್ಬಂದಿ, ಪ್ರಯಾಣಿಕರು ಸೇರಿ ಬಸ್ ತಳ್ಳಿದ್ದಾರೆ. ಡಕೋಟಾ ಬಸ್ ,ತಳ್ಳು ಗೋವಿಂದಾ ತಳ್ಳು ಎಂದು ತಳ್ಳಿದ್ದಾರೆ. ಆಗ ಟ್ರಾಫಿಕ್ ನಲ್ಲಿ ಬೈಕ್ ಸವಾರರು ಡಕೋಟಾ ಬಸ್ ಗಳ ಅಸಲಿಯತ್ತು ಪ್ರಸಾರ ಮಾಡಿ ಎಂದುಕೊಂಡು ತೆರಳಿದ್ದಾರೆ. ಸರ್ಕಾರ ಬಸ್​ಗಳ ರಿಪೇರಿ ಗೆಸಾಕಷ್ಟು ಹಣ ಇದೆ ಎಂದು ಹೇಳುತ್ತಿದೆ. ಆದ್ರೆ, ಗದಗ ಜಿಲ್ಲೆಯ ಸಾರಿಗೆ ಇಲಾಖೆ ಅಧಿಕಾರಿಗಳು ಮಾತ್ರ ರಿಪೇರಿಗೆ ಹಣವೇ ಇಲ್ಲ. ಏನ್ ಮಾಡೋಣ ಅಂತಿದ್ದಾರೆ. ಹೀಗಾಗಿ ಗಂಡ-ಹೆಂಡಿರ ನಡುವೆ ಕೂಸು ಬಡvಆಯ್ತು ಎಂಬಂತೆ ಪ್ರಯಾಣಿಕರು, ಚಾಲಕರು ಸಫರ್ ಆಗ್ತಾಯಿದ್ದಾರೆ.

ಬಸ್​ಗಲ ಕಂಡಿಷನ್ ಇಲ್ಲದಿದ್ರೂ ಅಧಿಕಾರಿಗಳು ಬಸ್​ಗಳು ರಸ್ತೆ ಇಳಿಸುತ್ತಿದ್ದಾರೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಏನಾದ್ರೂ ದುರಂತ ಆದ್ರೆ, ಹೊಣೆ ಯಾರು ಎಂದು ಪ್ರಶ್ನೆ ಮಾಡುತ್ತಿದ್ದಾರೆ. ದುರಂತ ನಡೆಯುವ ಮುನ್ನವೇ ಇನ್ನಾದರೂ ಸಾರಿಗೆ ಇಲಾಖೆ, ಜಿಲ್ಲಾಡಳಿತ ಎಚ್ಚೆತ್ತುಕೊಂಡು ಡಕೋಟಾ ಬಸ್​ಗಳಿಗೆ ಮುಕ್ತಿ ನೀಡಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Sat, 6 January 24

Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ