ಅಕ್ಕಿ ಕಳ್ಳರ ವಿರುದ್ಧ ಸಮರ ಸಾರಿದ ಆಹಾರ ಇಲಾಖೆ, ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್​​

ಬಡವರ ಹೊಟ್ಟೆ ಸೇರುವ ಮುನ್ನವೇ ಅನ್ನಭಾಗ್ಯ ಅಕ್ಕಿ ಕಳ್ಳರ ಪಾಲಾಗುತ್ತಿದೆ. ಗದಗ ಜಿಲ್ಲೆಯಲ್ಲೇ ಎಗ್ಗಿಲ್ಲದೇ ಅಕ್ರಮ ಅನ್ನಭಾಗ್ಯ ಅಕ್ಕಿ ಸಾಗಾಟ ನಡೆದಿದ್ದು, ವಾರದಲ್ಲೇ 4 ಬಾರಿ ಅನ್ನಭಾಗ್ಯ ಅಕ್ಕಿ ಸೀಜ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಅಕ್ಕಿ ಕಳ್ಳರ ವಿರುದ್ಧ ಆಹಾರ ಇಲಾಖೆ ಸಮರ ಸಾರಿದೆ.

ಅಕ್ಕಿ ಕಳ್ಳರ ವಿರುದ್ಧ ಸಮರ ಸಾರಿದ ಆಹಾರ ಇಲಾಖೆ, ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್​​
ಅನ್ನಭಾಗ್ಯ
Edited By:

Updated on: Oct 23, 2023 | 8:00 AM

ಗದಗ, (ಅಕ್ಟೋಬರ್ 23): ಅನ್ನಭಾಗ್ಯ (Anna Bhagya Scheme )..ಇದು ಸಿಎಂ ಸಿದ್ದರಾಮಯ್ಯ(Siddaramaiah) ಅವರ ಮಹತ್ವಾಕಾಂಕ್ಷಿ ಯೋಜನೆ. ಬಡವರು ಹಸಿವಿನಿಂದ ಬಳಲಬಾರದು ಅಂತ ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದಾರೆ. ಬಡವರ ಹೊಟ್ಟೆ ಸೇರುತ್ತೋ ಇಲ್ವೋ ಗೋತ್ತಿಲ್ಲ ಕಳ್ಳರ ಹೊಟ್ಟೆಯನ್ನ ಮಾತ್ರ ತುಂಬಿಸ್ತಿದೆ. ಅಕ್ಕಿ ಕಳ್ಳರಿಗೆ ಶಾಕ್​ ನೀಡಲು ಗದಗ ಜಿಲ್ಲಾಡಳಿತ(Gadag district administration) ಸಿದ್ಧವಾಗಿದೆ.

ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್​​

ಬಡ ಜನರ ಹಸಿವಿನಿಂದ ಬಳಲಬಾರದು ಎಂದು ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಜಾರಿ ತಂದಿದ್ದಾರೆ. ಆದ್ರೆ, ಈ ಯೋಜನೆ ಗದಗ ಜಿಲ್ಲೆಯಲ್ಲಿ ಸಂಪೂರ್ಣ ಹಳ್ಳಹಿಡಿದಿದೆ. ಗದಗ-ಬೆಟಗೇರಿ ಅವಳಿ ನಗರದಲ್ಲೇ ಒಂದು ವಾರದಲ್ಲಿ 4 ಅಕ್ರಮ ಅಕ್ಕಿ ಸಾಗಾಟ ಕೇಸ್ ದಾಖಲಾಗಿವೆ. ದಂಧೆಕೋರರು ಯಾವುದೇ ಭಯವಿಲ್ಲದೇ ರಾಜಾರೋಷವಾಗಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಿಸುತ್ತಿದ್ದಾರೆ. ಅಕ್ಕಿ ಸಿಗದೇ ಬೇಸತ್ತ ಜನರು ಪೊಲೀಸರಿಗೆ ದೂರು ನೀಡಿದ್ರು. ಇದ್ರಿಂದ ಎಚ್ಚೆತ್ತ ಅಧಿಕಾರಿಗಳು ದಾಳಿ ನಡೆಸಿ ಅಕ್ಕಿಯನ್ನ ಜಪ್ತಿ ಮಾಡಿದ್ದಾರೆ. ಅಕ್ರಮ ಅಕ್ಕಿ ದಂಧೆ ತಡೆಗೆ ಆಹಾರ ಇಲಾಖೆ ಮಾಸ್ಟರ್ ಪ್ಲ್ಯಾನ್​ ಮಾಡಿದೆ.

ಇನ್ನೂ ನಾಲ್ಕು ಕೇಸ್​​​ನಲ್ಲಿ 100 ಕ್ಕೂ ಕ್ವಿಂಟಲ್ ಅಕ್ಕಿಯನ್ನ ವಶಕ್ಕೆ ಪಡೆಯಲಾಗಿದೆ. ವಿಜಯಕುಮಾರ ಮಟ್ಟಿ, ವೀರಣ್ಣ ಬಡಿಗೇರಿ, ಶಿವಾನಂದ ಬಡಿಗೇರಿ, ಖಾಜಾಹುಸೇನ್ ದಂಧೆಕೋರರ ವಿರುದ್ಧ ದೂರು ದಾಖಲಾಗಿದೆ. ಇತ್ತ ಆಹಾರ ಇಲಾಖೆಯೂ ಅಕ್ರಮ ಅಕ್ಕಿ ದಂಧೆಕೋರರ ಪಟ್ಟಿ ರೆಡಿ ಮಾಡ್ತಿದ್ದು, ಗೂಂಡಾ ಕಾಯ್ದೆ ಅಥವಾ ಗಡಿಪಾರು ಮಾಡುವಂತೆ ಡಿಸಿಗೆ ಶಿಫಾರಸು ಮಾಡುತ್ತಿದೆ.

ಕಳೆದ ಬಾರಿ ಅಕ್ರಮ ಅಕ್ಕಿ ದಂಧೆಕೋರನೊಬ್ಬ ಡಿಸಿ, ಎಸ್ಪಿಗೂ ನಾನೂ ಕೇರ್ ಮಾಡಲ್ಲ. ಯಾರಿಗೆ ಹೇಳುತ್ತೀರಿ ಹೇಳಿ ಎಂದು ಅವಾಜ್ ಹಾಕಿರೋ ವಿಡಿಯೋ ಫುಲ್ ವೈರಲ್ ಆಗಿತ್ತು. ಅಕ್ರಮ ಅಕ್ಕಿ ದಾಸ್ತಾನು ಮಾಹಿತಿ ನೀಡಿದವರಿಗೆ ಬೆದರಿಕೆ ಕೂಡ ಹಾಕಿದ್ದರು. ಇನ್ನಾದ್ರೂ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ಮಾಡಬೇಕಿದೆ.

ಗದಗ ಜಿಲ್ಲೆಯಲ್ಲೇ ಮಾತ್ರವಲ್ಲದೇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲೂ ಸಹ ಅನ್ನಭಾಗ್ಯ ಅಕ್ಕಿ ಎಗ್ಗಿಲ್ಲದೇ ಸಾಗಾಟ ನಡೆಯುತ್ತಿದ್ದು, ಇದಕ್ಕೆ ಆಹಾರ ಇಲಾಖೆ ಕಡಿವಾಣ ಹಾಕಿಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us