AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಶುದ್ಧ ನೀರಿನ ಹರಿಕಾರ ಎಚ್​ಕೆ ಪಾಟೀಲ್ ತವರು ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ

ಕಳೆದ ಬಾರಿ ಸರಿಯಾಗಿ ಮಳೆ ಬಾರದ ಪರಿಣಾಮ ಕರ್ನಾಟಕದ ಹಲವೆಡೆ ಬರಗಾಲ ಉಂಟಾಗಿದೆ. ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ ಉಂಟಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಕೆಲವು ಪ್ರದೇಶದಲ್ಲಿ ಬೋರ್​ವೆಲ್​ಗಳಲ್ಲಿ ನೀರು ಖಾಲಿಯಾಗಿದೆ. ಇದೀಗ ಶುದ್ಧ ನೀರಿನ ಹರಿಕಾರ ಎಚ್ ಕೆ ಪಾಟೀಲ್ ತವರು ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ.

ಗದಗ: ಶುದ್ಧ ನೀರಿನ ಹರಿಕಾರ ಎಚ್​ಕೆ ಪಾಟೀಲ್ ತವರು ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ
ಗದಗ: ಶುದ್ಧ ನೀರಿನ ಹರಿಕಾರ ಎಚ್​ಕೆ ಪಾಟೀಲ್ ತವರು ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: Rakesh Nayak Manchi|

Updated on: Mar 01, 2024 | 9:23 AM

Share

ಗದಗ, ಮಾ.1: ಕಳೆದ ಬಾರಿ ಸರಿಯಾಗಿ ಮಳೆ ಬಾರದ ಪರಿಣಾಮ ಕರ್ನಾಟಕದ ಹಲವೆಡೆ ಬರಗಾಲ ಉಂಟಾಗಿದ್ದು, ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ ಉಂಟಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದೆ. ಇದೀಗ ಶುದ್ಧ ನೀರಿನ ಹರಿಕಾರ ಎಚ್ ಕೆ ಪಾಟೀಲ್ (HK Patil) ತವರು ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ (Drinking Water) ಹಾಹಾಕಾರ ಶುರುವಾಗಿದೆ. ಗದಗ ತಾಲೂಕಿನ ಮುಳಗುಂದ ಪಟ್ಟಣದ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಜನರು ಗೋಳಾಡುತ್ತಿದ್ದಾರೆ.

ಮುಳಗುಂದ ಪಟ್ಟಣದ ಹಲವು ಪ್ರದೇಶಗಳಲ್ಲಿ ಬರಗಾಲ ಉಂಟಾಗಿದ್ದು, ಕುಡಿಯಲು ನೀರು ಸಿಗದ ಹಿನ್ನೆಲೆ ಮಹಿಳೆಯರು ಖಾಲಿ ಕೊಡಗಳನ್ನು ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಫ್ಲೋರೈಡಯುಕ್ತ ನೀರು ಕುಡಿಯುವ ಕೆಟ್ಟ ಸ್ಥಿತಿ ಬಂದಿದೆ. ಮಂಡಿ ನೋವಿನಿಂದ ಜನರು ನರಳಾಡುತ್ತಿದ್ದೇವೆ ಎಂದು ಸಮಸ್ಯೆ ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Drinking Water Problem: ಯಶವಂತಪುರದಲ್ಲಿ ಕುಡಿಯುವ ನೀರಿಗೆ ತತ್ವಾರ: ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹಾಹಾಕಾರ

ಎಚ್​ಕೆ ಪಾಟೀಲ್ ವಿರುದ್ಧ ಜನಾಕ್ರೋಶ

ನಮ್ಮ ಶಾಸಕ ಎಚ್ ಕೆ ಪಾಟೀಲ್ ನಮ್ಮ ಸಮಸ್ಯೆಯೇ ಕೇಳಲಿಲ್ಲ. ಅವರ ಮುಖವೇ ನೋಡಿಲ್ಲ. ಪೋಸ್ಟರ್, ಟಿವಿಯಲ್ಲಿ ಮಾತ್ರ ನೋಡಿದ್ದೇವೆ. ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಬರುತ್ತಾರೆ. ಆದರೆ ಸಮಸ್ಯೆ ಯಾರೂ ಕೇಳುತ್ತಿಲ್ಲ ಅಂತ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ.

10-15 ದಿನಕ್ಕೊಮ್ಮ ನೀರು ಬರುತ್ತದೆ. ಅದು ಸವಳು ನೀರಾಗಿದ್ದು, ಕುಡಿಯಲು ಯೋಗ್ಯವಿಲ್ಲ. ಇಂಥ ನೀರು ಕುಡಿದು ಹೊಟ್ಟೆ ನೋವು, ಮಂಡಿ ನೋವಿನಿಂದ ಒದ್ದಾಡುತ್ತಿದ್ದೇವೆ. ಕ್ಷೇತ್ರದ ಜನರು ಕುಡಿಯುವ ನೀರಿಗಾಗಿ ಗೋಳಾಡುತ್ತಾ ಇದ್ದರೂ ಶಾಸಕರು, ಸ್ಥಳೀಯ ನಾಯಕರು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ ಎಂದು ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್