AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಶುದ್ಧ ನೀರಿನ ಹರಿಕಾರ ಎಚ್​ಕೆ ಪಾಟೀಲ್ ತವರು ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ

ಕಳೆದ ಬಾರಿ ಸರಿಯಾಗಿ ಮಳೆ ಬಾರದ ಪರಿಣಾಮ ಕರ್ನಾಟಕದ ಹಲವೆಡೆ ಬರಗಾಲ ಉಂಟಾಗಿದೆ. ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ ಉಂಟಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಕೆಲವು ಪ್ರದೇಶದಲ್ಲಿ ಬೋರ್​ವೆಲ್​ಗಳಲ್ಲಿ ನೀರು ಖಾಲಿಯಾಗಿದೆ. ಇದೀಗ ಶುದ್ಧ ನೀರಿನ ಹರಿಕಾರ ಎಚ್ ಕೆ ಪಾಟೀಲ್ ತವರು ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ.

ಗದಗ: ಶುದ್ಧ ನೀರಿನ ಹರಿಕಾರ ಎಚ್​ಕೆ ಪಾಟೀಲ್ ತವರು ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ
ಗದಗ: ಶುದ್ಧ ನೀರಿನ ಹರಿಕಾರ ಎಚ್​ಕೆ ಪಾಟೀಲ್ ತವರು ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Mar 01, 2024 | 9:23 AM

Share

ಗದಗ, ಮಾ.1: ಕಳೆದ ಬಾರಿ ಸರಿಯಾಗಿ ಮಳೆ ಬಾರದ ಪರಿಣಾಮ ಕರ್ನಾಟಕದ ಹಲವೆಡೆ ಬರಗಾಲ ಉಂಟಾಗಿದ್ದು, ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ ಉಂಟಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದೆ. ಇದೀಗ ಶುದ್ಧ ನೀರಿನ ಹರಿಕಾರ ಎಚ್ ಕೆ ಪಾಟೀಲ್ (HK Patil) ತವರು ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ (Drinking Water) ಹಾಹಾಕಾರ ಶುರುವಾಗಿದೆ. ಗದಗ ತಾಲೂಕಿನ ಮುಳಗುಂದ ಪಟ್ಟಣದ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಜನರು ಗೋಳಾಡುತ್ತಿದ್ದಾರೆ.

ಮುಳಗುಂದ ಪಟ್ಟಣದ ಹಲವು ಪ್ರದೇಶಗಳಲ್ಲಿ ಬರಗಾಲ ಉಂಟಾಗಿದ್ದು, ಕುಡಿಯಲು ನೀರು ಸಿಗದ ಹಿನ್ನೆಲೆ ಮಹಿಳೆಯರು ಖಾಲಿ ಕೊಡಗಳನ್ನು ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಫ್ಲೋರೈಡಯುಕ್ತ ನೀರು ಕುಡಿಯುವ ಕೆಟ್ಟ ಸ್ಥಿತಿ ಬಂದಿದೆ. ಮಂಡಿ ನೋವಿನಿಂದ ಜನರು ನರಳಾಡುತ್ತಿದ್ದೇವೆ ಎಂದು ಸಮಸ್ಯೆ ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Drinking Water Problem: ಯಶವಂತಪುರದಲ್ಲಿ ಕುಡಿಯುವ ನೀರಿಗೆ ತತ್ವಾರ: ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹಾಹಾಕಾರ

ಎಚ್​ಕೆ ಪಾಟೀಲ್ ವಿರುದ್ಧ ಜನಾಕ್ರೋಶ

ನಮ್ಮ ಶಾಸಕ ಎಚ್ ಕೆ ಪಾಟೀಲ್ ನಮ್ಮ ಸಮಸ್ಯೆಯೇ ಕೇಳಲಿಲ್ಲ. ಅವರ ಮುಖವೇ ನೋಡಿಲ್ಲ. ಪೋಸ್ಟರ್, ಟಿವಿಯಲ್ಲಿ ಮಾತ್ರ ನೋಡಿದ್ದೇವೆ. ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಬರುತ್ತಾರೆ. ಆದರೆ ಸಮಸ್ಯೆ ಯಾರೂ ಕೇಳುತ್ತಿಲ್ಲ ಅಂತ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ.

10-15 ದಿನಕ್ಕೊಮ್ಮ ನೀರು ಬರುತ್ತದೆ. ಅದು ಸವಳು ನೀರಾಗಿದ್ದು, ಕುಡಿಯಲು ಯೋಗ್ಯವಿಲ್ಲ. ಇಂಥ ನೀರು ಕುಡಿದು ಹೊಟ್ಟೆ ನೋವು, ಮಂಡಿ ನೋವಿನಿಂದ ಒದ್ದಾಡುತ್ತಿದ್ದೇವೆ. ಕ್ಷೇತ್ರದ ಜನರು ಕುಡಿಯುವ ನೀರಿಗಾಗಿ ಗೋಳಾಡುತ್ತಾ ಇದ್ದರೂ ಶಾಸಕರು, ಸ್ಥಳೀಯ ನಾಯಕರು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ ಎಂದು ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!