AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಬರಕ್ಕೆ ಗದಗ ಜಿಲ್ಲೆಯ ಜನ ವಿಲವಿಲ: ಹಿಂಗಾರು, ಮುಂಗಾರು ಬೆಳೆಯೂ ಇಲ್ಲದೇ ಕಂಗಾಲು

ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ಮೆಣಸಿನಕಾಯಿ, ಈರುಳ್ಳಿ ಸೇರಿ 66 ಸಾವಿರ ಹೇಕ್ಟರ್ ನಲ್ಲಿ ಹಾನಿಯಾಗಿದ್ದು, ಒಟ್ಟು ಮೊತ್ತ 61ಕೋಟಿ ರೂ. ಒಟ್ಟಾರೆ ಗದಗ ಜಿಲ್ಲೆಯಲ್ಲಿ 258.59 ಕೋಟಿ ರೂ. ಹಾನಿಯಾಗಿದೆ. ಹಾನಿಯ ಸಮಗ್ರ ವರದಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿದೆ ಅಂತ ಕೃಷಿ ಇಲಾಖೆ ಜಂಟಿ ನಿರ್ದಶಕಿ ತಾರಾಮಣಿ ತಿಳಿಸಿದ್ದಾರೆ.

ಭೀಕರ ಬರಕ್ಕೆ ಗದಗ ಜಿಲ್ಲೆಯ ಜನ ವಿಲವಿಲ: ಹಿಂಗಾರು, ಮುಂಗಾರು ಬೆಳೆಯೂ ಇಲ್ಲದೇ ಕಂಗಾಲು
ಭೀಕರ ಬರಕ್ಕೆ ಗದಗ ಜಿಲ್ಲೆಯ ಜನ ವಿಲವಿಲ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 27, 2023 | 7:45 PM

Share

ಗದಗ, ಅಕ್ಟೋಬರ್ 27: ಭೀಕರ ಬರಗಾಲದ ಹೊಡೆತಕ್ಕೆ ಅನ್ನದಾತರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಅದ್ರಲ್ಲೂ ಭೀಕರ ಬರ (Drought) ಗದಗ (Gadag) ಜಿಲ್ಲೆಯ ರೈತರ ಜೀವ ಹಿಂಡುತ್ತಿದೆ. ಬಿತ್ತಿದ ಬೆಳೆಗಳೆಲ್ಲವೂ ಬಿಸಿಲಿಗೆ ಸುಟ್ಟು ಹೋಗಿವೆ. ಬಿತ್ತನೆ ಮಾಡಿದ 2.03 ಲಕ್ಷ ಹೇಕ್ಟರ್​​ನಲ್ಲಿ 1.88 ಹೆಕ್ಟರ್ ಬೆಳೆ ಸಂಪೂರ್ಣ ಹಾನಿಯಾಗಿದೆ. ಹೀಗಾಗಿ ಭೀಕರ ಬರ ನೇಗಿಲಯೋಗಿಯ ಅನ್ನವನ್ನೆ ಕಸಿಕೊಂಡಿದ್ದು, ಅನ್ನದಾತರು ವಿಲವಿಲ ಅಂತಿದ್ದಾರೆ. ಒಣ ಬೆಸಾಯಿ ಹಾಗೂ ತೋಟಗಾರಿಕೆ ಬೆಳೆ ಸೇರಿ ಒಟ್ಟು ಗದಗ ಜಿಲ್ಲೆಯಲ್ಲಿ 258 ಕೋಟಿ ಹಾನಿಯಾಗಿದ್ದು, ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅನ್ನದಾತರು ಪರಿಹಾರಕ್ಕಾಗಿ ಕಾಯುತ್ತಿದ್ದಾರೆ.

ಆರಂಭದಲ್ಲಿ ಮುಂಗಾರು ಮಳೆ ಅಲ್ಪಸ್ವಲ್ಪ ಚೆನ್ನಾಗಿಯೇ ಆಗಿತ್ತು. ಹೀಗಾಗಿ ಖುಷಿ ಪಟ್ಟ ಅನ್ನದಾತರು ಮುಂಗಾರು ಬೆಳೆಗಳಾದ ಹೆಸರು, ಶೇಂಗಾ, ಗೋವಿನ ಜೋಳ, ಸೂರ್ಯಕಾಂತಿ ಸೇರಿ ಹಲವು ಬೆಳೆಗಳು ಬಿತ್ತನೆ ಮಾಡಿದ್ರು. ಆದ್ರೆ, ವರುಣದೇವ ನೇಗಿಲಯೋಗಿ ಬದುಕಿಗೆ ಕೊಳ್ಳಿ ಇಟ್ಟುಬಿಟ್ಟಿದ್ದಾನೆ. ಹನಿ ಮಳೆಯೂ ಆಗದೇ ಬಿತ್ತನೆ ಮಾಡಿದ ಎಲ್ಲ ಬೆಳೆಗಳು ಭೂಮಿಯಲ್ಲೇ ಸುಟ್ಟು ಹೋಗಿವೆ. ನೆಲಬಿಟ್ಟು ನಾಟಿಯಾಗಿಲ್ಲ. ಸಾಲಸೋಲ ಮಾಡಿ ಬಿತ್ತನೆ ಮಾಡಿದ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಗದಗ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 2.03 ಲಕ್ಷ ಹೇಕ್ಟರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಆದ್ರೆ, 1.88 ಲಕ್ಷ ಹೇಕ್ಟರ್ ಪ್ರದೇಶದಲ್ಲಿ ನಾಟಿಯೂ ಆಗದೇ ಎಲ್ಲ ಬೆಳೆಯೂ ಹಾನಿಯಾಗಿದೆ ಅಂತ ಕೃಷಿ ಇಲಾಖೆ ವರದಿಯಲ್ಲಿ ಬಹಿರಂಗವಾಗಿದೆ. ಒಣ ಬೇಸಾಯ ಬೆಳೆಗಳಾದ ಹೆಸರು, ಶೇಂಗಾ, ಗೋವಿನ ಜೋಳ ಸೇರಿ ಒಟ್ಟು 1.88 ಲಕ್ಷ ಹೇಕ್ಟರ್ ಹಾನಿಯಾಗಿದ್ದು, ಒಟ್ಟು ಮೊತ್ತ 1.97.45 ಕೋಟಿ ಹಾನಿ ಅಂದಾಜು ಮಾಡಲಾಗಿದೆ.

ಇನ್ನೂ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ಮೆಣಸಿನಕಾಯಿ, ಈರುಳ್ಳಿ ಸೇರಿ 66 ಸಾವಿರ ಹೇಕ್ಟರ್ ನಲ್ಲಿ ಹಾನಿಯಾಗಿದ್ದು, ಒಟ್ಟು ಮೊತ್ತ 61ಕೋಟಿ ರೂ. ಒಟ್ಟಾರೆ ಗದಗ ಜಿಲ್ಲೆಯಲ್ಲಿ 258.59 ಕೋಟಿ ರೂ. ಹಾನಿಯಾಗಿದೆ. ಹಾನಿಯ ಸಮಗ್ರ ವರದಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿದೆ ಅಂತ ಕೃಷಿ ಇಲಾಖೆ ಜಂಟಿ ನಿರ್ದಶಕಿ ತಾರಾಮಣಿ ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಒಟ್ಟು 258.59 ಕೋಟಿ ರೂ. ಮೌಲ್ಯದ ವಿವಿಧ ಬೆಳೆಗಳು ಹಾನಿಯಾಗಿದ್ದು, ಒಟ್ಟು 1 ಲಕ್ಷ 69 ಸಾವಿರ ರೈತರಿಗೆ ಪರಿಹಾರಕ್ಕೆ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಈ ವರ್ಷ ಎಂದೂ ಕಂಡಿರಿಯದ ಬರಗಾಲ ಎದುರಾಗಿದ್ದು, ಅನ್ನದಾತರಿಗೆ ಬರಸಿಡಿಲು ಬಡಿದಂತಾಗಿದೆ. ಹಿಂಗಾರು, ಮಂಗಾರು ಎರಡು ಬೆಳೆಗಳು ಈ ವರ್ಷ ಜಿಲ್ಲೆಯಲ್ಲಿ ಶೇಕಡಾ 90ರಷ್ಟು ಹಾನಿಯಾಗಿದೆ. ಹೀಗಾಗಿ ಅನ್ನದಾತರು ನಮ್ಮ ಮುಂದಿನ ಬದುಕು ಹೇಗೆ ಅನ್ನೋ ಚಿಂತೆಯಲ್ಲಿದ್ದಾರೆ. ಕೃಷಿ ಮಾಡಿಯೇ ಬದುಕು ಸಾಗಿಸುವ ರೈತರ ಕುಟುಂಬಗಳ ಗೋಳು ದೇವರಿಗೆ ಪ್ರೀತಿ ಎಂಬಂತಾಗಿದೆ. ಸರ್ಕಾರ ಬರಗಾಲ ಅಂತ ಘೋಷಣೆ ಮಾಡಿದೆ. ಆದ್ರೆ, ಇನ್ನೂ ರೈತರಿಗೆ ಯಾವುದೇ ರೀತಿಯ ಸಹಾಯಕ್ಕೆ ಮುಂದೆ ಬಂದಿಲ್ಲ. ಈ ನಡುವೆ ನಾವೂ ಹೇಗಾದ್ರೂ ಬದುಕ್ತೀವಿ. ಆದ್ರೆ, ದನ, ಕರುಗಳ ಚಿಂತಿ ರೈತರನ್ನು ಕಾಡುತ್ತಿದೆ. ಮೇವು ಇಲ್ಲದೇ ಜಾನುವಾರಗಳು ದಿನಗಳು ಕಳೆದಂತೆ ಸೊರಗುತ್ತಿವೆ. ಅನ್ನದಾತರು ಸಾಕಿಬೆಳೆಸಿದ ಜಾನುವಾರಗಳ ಗೋಳಾಟ ನೋಡೋಕೆ ಆಗ್ಥಾಯಿಲ್ಲ ಅಂತ ಗೋಳು ತೋಡಿಕೊಂಡಿದ್ದಾರೆ. ಸರ್ಕಾರ ಕನಿಷ್ಠ ಬರಗಾಲ ಕಾಮಗಾರಿ ಆರಂಭ ಮಾಡೋದು ಇರಲಿ. ದನ, ಕರುಗಳಿಗೆ ಕನಿಷ್ಠ ಮೇವಿನ ವ್ಯವಸ್ಥೆಯೂ ಮಾಡಿಲ್ಲ ಅಂತ ರೈತರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಕ್ಕಿ ಕಳ್ಳರ ವಿರುದ್ಧ ಸಮರ ಸಾರಿದ ಆಹಾರ ಇಲಾಖೆ, ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್​​

ಅನ್ನದಾತರ ಬದುಕು ಮಳೆ ಬಂದ್ರೂ ಕಷ್ಟ, ಮಳೆ ಬರದಿದ್ರೂ ಕಷ್ಟ ಎಂಬಂತಾಗಿದೆ. ಕಳೆದ ಎರಡ್ಮೂರು ವರ್ಷ ಅತಿಯಾದ ಮಳೆಗೆ ರೈತರ ಬೆಳೆಗಳು ಮುಳುಗಿದ್ರೆ. ಈ ಬಾರಿ ಭೀಕರ ಬರಕ್ಕೆ ಸುಟ್ಟು ಹೋಗಿವೆ. ಸರ್ಕಾರ, ಜನಪ್ರತಿನಿಧಿಗಳೂ ರೈತರ ಬಗ್ಗೆ ಮಾತಾಡ್ತಾರೆ. ರೈತರ ದೇಶದ ಬೆನ್ನುಲುಬು ಅಂತಾರೆ. ಆದ್ರೆ, ನಮ್ಮ ಮೇಲೆ ನಿಜವಾದ ಕಾಳಜಿ ಯಾರೂ ತೋರುತ್ತಿಲ್ಲ ಅಂತ ಅನ್ನದಾತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ಸಂಕಷ್ಟದಲ್ಲಿರೋ ರೈತರು ಹಾಗೂ ಜಾನುವಾರಗಳ ರಕ್ಷಣೆ ಬರಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ