AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಮನೆಯಲ್ಲಿ ಪೂಜಿಸುವ ಯಲ್ಲಮ್ಮ, ಹುಲಿಗೆಮ್ಮ, ಲಕ್ಷ್ಮೀ ದೇವರ ಫೋಟೊಗಳನ್ನು ಹೊರಗೆಸೆದ ಕುಟುಂಬ!

ದೇವರು ಅಂದರೆ ಸಾಮಾನ್ಯವಾಗಿ ಎಲ್ಲರಿಗೂ ಭಯ, ಭಕ್ತಿ ಇದ್ದೇ ಇರುತ್ತದೆ. ಆದರೆ, ಈ ಕುಟುಂಬ ಮಾತ್ರ ನಮಗೆ ದೇವರು ಬೇಡವೇ ಬೇಡ ಎಂದು ಮನೆಯಲ್ಲಿದ್ದ ದೇವರ ಫೋಟೋಗಳನ್ನೇ ಹೊರಗಡೆ ಹಾಕಿದೆ. ದೇವರೇ ಇಲ್ಲ, ಇದೊಂದು ಮೂಢನಂಬಿಕೆ ಎಂದು ವಾದಿಸಿದ್ದು ಹುಲಿಗೆಮ್ಮ, ಯಲ್ಲಮ್ಮ, ಲಕ್ಷ್ಮೀ ದೇವರ ಪೋಟೋಗಳನ್ನು ಹೊರಗಡೆ ಹಾಕಿ ಬುದ್ಧ, ಬಸವ, ಅಂಬೇಡ್ಕರ್ ಮೂರ್ತಿ ಮನೆಗೆ ತಂದಿದೆ. ವಿವರಗಳಿಗೆ ಮುಂದೆ ಓದಿ.

ಗದಗ: ಮನೆಯಲ್ಲಿ ಪೂಜಿಸುವ ಯಲ್ಲಮ್ಮ, ಹುಲಿಗೆಮ್ಮ, ಲಕ್ಷ್ಮೀ ದೇವರ ಫೋಟೊಗಳನ್ನು ಹೊರಗೆಸೆದ ಕುಟುಂಬ!
ದೇವರ ಫೋಟೊ ಹೊರಗಡೆ ಕೊಂಡೊಯ್ಯುತ್ತಿರುವುದು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Dec 26, 2024 | 1:36 PM

Share

ಗದಗ, ಡಿಸೆಂಬರ್ 26: ಮನೆಯಲ್ಲಿ ಪೂಜೆ ಮಾಡುವ ಯಲ್ಲಮ್ಮ, ಹುಲಿಗೆಮ್ಮ, ಲಕ್ಷ್ಮೀ ದೇವರುಗಳನ್ನೇ ಆ ಕುಟುಂಬದವರು ಹೊರಗೆ ಹಾಕಿದ್ದಾರೆ. ಬದಲಿಗೆ ಬುದ್ಧ, ಬಸವ, ಅಂಬೇಡ್ಕರ್ ಅವರೇ ನಮ್ಮ ಪಾಲಿಗೆ ದೇವರು ಎಂದು ಸ್ಮರಣೆ ಶುರು ಮಾಡಿದ್ದಾರೆ! ಗದಗ ಬೆಟಗೇರಿ ನಗರದ ಅಂಬೇಡ್ಕರ್ ಕಾಲೋನಿ ನಿವಾಸಿ ಹಾಗೂ ಹೋರಾಟಗಾರ ಷರೀಫ್ ಬಿಳಿಯಲಿ ಮನೆಯಲ್ಲಿ ಕುಟುಂಬಸ್ಥರು ‘‘ಬುದ್ಧಂ ಶರಣಂ ಗಚ್ಛಾಮಿ’’ ಮಂತ್ರ ಪಠಣದೊಂದಿಗೆ ಕಠೋರ ನಿರ್ಧಾರ ಮಾಡಿದ್ದಾರೆ.

ನಮ್ಮ ತಾಯಿ ದೇವದಾಸಿಯಾಗಿದ್ದರು. ಅನಾರೋಗ್ಯದಲ್ಲಿದ್ದಾಗ ಯಾವ ದೇವರೂ ಬದುಕಿಸಲಿಲ್ಲ. ದೇವರು ಎಲ್ಲಿದ್ದಾನೆ ಎಂದು ಕುಟುಂಸ್ಥರು ಪ್ರಶ್ನೆ ಮಾಡಿದ್ದಾರೆ.

ಈ ಕುಟುಂಬದವರು ಹಲವು ವರ್ಷಗಳಿಂದ ಮನೆಯಲ್ಲಿ ಯಲ್ಲಮ್ಮ, ಹುಲಗೆಮ್ಮ, ಲಕ್ಷ್ಮೀ ಸೇರಿ ಹಲವು ದೇವತೆಗಳ ಪೂಜೆ ಮಾಡುತ್ತಿದ್ದರು. ಆದರೆ, ಈಗ ಆ ದೇವರುಗಳ ಫೋಟೊವನ್ನು ಮನೆಯಿಂದ ಹೊರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶರೀಫ್ ಬಿಳಿಯಲಿ ಹಾಗೂ ಅವರ ಪತ್ನಿ ಗಾಯತ್ರಿ ಸೇರಿ ಈ ಕಠೋರ ನಿರ್ಧಾರ ಮಾಡಿದ್ದಾರೆ. ಮನೆಯಲ್ಲಿ ಷರೀಫ್ ಅವರ ತಾಯಿಯ ಕಾಲದಿಂದಲೂ ಪೂಜಿಸಿಕೊಂಡು ಬರುತ್ತಿದ್ದರು. ಶರೀಫ್ ತಾಯಿ ದೇವದಾಸಿಯಾಗಿದ್ದರು. ಯಲ್ಲಮ್ಮ, ಹುಲಗೆಮ್ಮ ದೇವಿಯನ್ನು ಆರಾಧಿಸುತ್ತಿದ್ದರು. ಆದರೆ, ಆನಾರೋಗ್ಯದಿಂದ ತಾಯಿ ತೀರಿಕೊಂಡಿದ್ದಾರೆ. ದೇವರು ಇರುವುದು ಹೌದಾದರೆ, ಯಾಕೆ ಬದುಕಿಸಲಿಲ್ಲ? ದೇವರೇ ಇಲ್ಲ? ಇದೊಂದು ಪುರೋಹಿತಶಾಹಿಗಳ ಸಂಚು ಎಂಬುದು ಈ ಕುಟುಂಬದವರ ವಾದ.

Buddha, Basava, Amberdkar Photos

ಬುದ್ಧ, ಬಸವ, ಅಂಬೇಡ್ಕರ್ ಫೋಟೊಗಳನ್ನು ಮನೆಗೆ ತೆಗೆದುಕೊಂಡು ಹೋಗುತ್ತಿರುವುದು.

ಹೀಗಾಗಿ ಹಿಂದೂ ಪದ್ಧತಿಯ ಪೂಜೆಯನ್ನು ತಿರಸ್ಕಾರ ಮಾಡಿ ಹಿಂದೂ ದೇವರುಗಳಾದ ಯಲ್ಲಮ್ಮ, ಹುಲಿಗೆಮ್ಮ, ಲಕ್ಷ್ಮೀ ಫೊಟೊಗಳನ್ನು ಮತ್ತು ಕಾಯಿ, ಕರ್ಪೂರ ಹಾಗೂ ಪೂಜೆ ವಸ್ತುಗಳನ್ನು ಹೊರಗೆ ಹಾಕಿದ್ದಾರೆ. ಬದಲಾಗಿ ಬುದ್ಧ, ಬಸವ, ಅಂಬೇಡ್ಕರ್ಗಳ ಮೂರ್ತಿಗಳನ್ನು ಮನೆಗೆ ತಂದಿದ್ದಾರೆ. ದೇವರುಗಳಿದ್ದ ಜಾಗದಲ್ಲಿ ಅವುಗಳನ್ನ ಕೂರಿಸಿ ಸ್ಮರಣೆ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಪಿನ್​ ಸೆಟ್​ ಮಾಡಿಕೊಡುತ್ತೇನೆ ಅಂತ ATM ಕಾರ್ಡ್ ಬದಲಾಯಿಸಿ ಅಮಾಯಕರ ಖಾತೆಯಿಂದ ಹಣ ದೋಚುತ್ತಿದ್ದ ಆರೋಪಿ ಅರೆಸ್ಟ್​

ಮನುಸ್ಮೃತಿ ದಹನ ಮಾಡಿದ ದಿನದ ಪ್ರಯುಕ್ತ ಕಠೋರ ನಿರ್ಧಾರ

ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮನುಸ್ಮೃತಿ ದಹನ ಮಾಡಿದ ದಿನದ ಪ್ರಯುಕ್ತ ಷರೀಫ್ ಬಿಳಿಯಲಿ ಕುಟುಂಬ ಈ ಕಠೋರ ನಿರ್ಧಾರ ಮಾಡಿದೆ. ಜೊತೆಗೆ ಇಂದೇ ಅವರ ತಾಯಿ ಪೂಜೆ ಮಾಡಿಕೊಂಡು ಬರ್ತಿದ್ದ ದೇವರುಗಳನ್ನ ಒಂದು ಬುಟ್ಟಿಯಲ್ಲಿ ತುಂಬಿ ಹೊರಗಡೆ ಹಾಕಿದ್ದಾರೆ. ಈ ನಡೆಗೆ ಹಲವು ಪ್ರಗತಿಪರರು ಸಾಥ್ ನೀಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ