AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಚಿನ್ನದಂಗಡಿ ಲೂಟಿ: ಕಳ್ಳರ ಕೈಚಳಕ ಕಂಡು ಪೊಲೀಸರೇ ಶಾಕ್​​!

ರಾಜ್ಯದಲ್ಲಿ ಮೇಲಿಂದ ಮೇಲೆ ವರದಿಯಾಗುತ್ತಿರುವ ದರೋಡೆ ಪ್ರಕರಣಗಳ ನಡುವೆ ಮುದ್ರಣಕಾಶಿ ಗದಗದಲ್ಲಿ ವ್ಯಾಪಾರಸ್ಥರು ಬೆಚ್ಚಿಬೀಳುವ ರೀತಿಯ ರಾಬರಿ ನಡೆದಿದೆ. ಅಂಗಡಿಯ ಬಾಗಿಲು ಮುರಿಯದೆ ಒಳ ನುಗ್ಗಿರುವ ಗ್ಯಾಂಗ್​​ ಬಂಗಾರದ ಅಂಗಡಿ ದೋಚಿ ಎಸ್ಕೇಪ್​​ ಆಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.

ಗದಗದಲ್ಲಿ ಚಿನ್ನದಂಗಡಿ ಲೂಟಿ: ಕಳ್ಳರ ಕೈಚಳಕ ಕಂಡು ಪೊಲೀಸರೇ ಶಾಕ್​​!
ಚಿನ್ನದಂಗಡಿ ದರೋಡೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Dec 04, 2025 | 2:08 PM

Share

ಗದಗ, ಡಿಸೆಂಬರ್​​ 04: ಅಂಗಡಿ ಬಾಗಿಲು ಮುರಿಯದೆ ಖತರ್ನಾಕ್​​ ಗ್ಯಾಂಗ್​​ ಒಂದು ಬಂಗಾರದ ಅಂಗಡಿ ದೋಚಿರುವ ಘಟನೆ ಗದಗ ನಗರದ ಮಹೇಂದ್ರಕರ ಸರ್ಕಲ್ ಬಳಿ ನಡೆದಿದೆ. ಶಾಂತದುರ್ಗಾ ಹೆಸರಿನ ಜ್ಯುವೆಲ್ಲರಿ  ಶಾಪ್​​​ನಲ್ಲಿ ದರೋಡೆ ನಡೆದಿದ್ದು, ಚಿನ್ನ ಮತ್ತು ಬೆಳ್ಳಿ ಸೇರಿ ಸುಮಾರು 80 ಲಕ್ಷ ರೂ. ಮೌಲ್ಯದ ಆಭರಣಗಳು ರಾಬರಿಯಾಗಿವೆ. ಬೆಳಿಗ್ಗೆ ಬಂದು ಮಾಲಕರು ಅಂಗಡಿ ಓಪನ್​​ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ.

ಇನ್ನು ದರೋಡೆ ನಡೆಸಿರುವ ಗ್ಯಾಂಗ್​​ನ ಚಾಣಾಕ್ಷತೆ ಕಂಡು ಪೊಲೀಸರೇ ದಂಗಾಗಿದ್ದಾರೆ. ಅಂಗಡಿ ಶೆಟರ್ ಮುರಿದಿಲ್ಲ, ಅಕ್ಕಪಕ್ಕ ಸೇರಿ ಹಿಂಭಾಗದಲ್ಲೂ ಬೇರೆ ಕಟ್ಟಡಗಳಿವೆ. ಹೀಗಿದ್ದರೂ ಕಳ್ಳರು ಅಂಗಡಿಗೆ ನುಗ್ಗಿದ್ದೇಗೆ ಎಂದು ಪೊಲೀಸರು ಪರೀಕ್ಷಿಸಿದಾಗ ಖತರ್ನಾಕ್ ಗ್ಯಾಂಗ್ ಚಿನ್ನದ ಅಂಗಡಿಗೆ ಎಂಟ್ರಿಕೊಟ್ಟಿದ್ದು ಕಟ್ಟಡದ ಮೇಲ್ಭಾಗದಿಂದ ಎಂಬುದು ಗೊತ್ತಾಗಿದೆ. ಅಂಗಡಿ ಮೇಲ್ಭಾಗದಲ್ಲಿ ಕೊರೆದು ಒಳನುಗ್ಗಿರೋ ಗ್ಯಾಂಗ್​​, ಅಪಾರ ಬೆಳ್ಳಿ ವಸ್ತುಗಳು ಮತ್ತು ಸ್ವಲ್ಪ ಪ್ರಮಾಣದ ಚಿನ್ನ ಸೇರಿ ನಗದನ್ನು ದೋಚಿದೆ.

ಇದನ್ನೂ ಓದಿ: ಇ.ಡಿ ಹೆಸರಲ್ಲಿ ಚಿನ್ನದ ವ್ಯಾಪಾರಿ ದರೋಡೆ ಕೇಸ್​; ಆರೋಪಿಗಳಿಗೆ ಖಾಕಿ ಶಾಕ್​, ನಾಲ್ವರು ಅರೆಸ್ಟ್​​

ಘಟನೆ ಬೆಳಕಿಗೆ ಬರುತ್ತಿದ್ದಂತೆ  ಸ್ಥಳಕ್ಕೆ ದೌಡಾಯಿಸಿದ ಶ್ವಾನದಳ ತೀವ್ರ ಪರಿಶೀಲನೆ ನಡೆಸಿದೆ. ಆದ್ರೆ, ಕಳ್ಳರ ಬಗ್ಗೆ ಯಾವುದೇ ಕುರುಹು ಪತ್ತೆಯಾಗಿಲ್ಲ. ಇನ್ನು ಚಿನ್ನದ ಅಂಗಡಿಯಲ್ಲಿದ್ದ ಸಿಸಿ ಕ್ಯಾಮರಾಗಳು  ಬಂದ್ ಆಗಿರುವ ಕಾರಣ, ದರೋಡೆಕೋರರ ಪತ್ತೆ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಎಸ್ಪಿ ರೋಹನ್ ಜಗದೀಶ್, ಡಿವೈಎಸ್ಪಿ ಮುರ್ತುಜಾ ಖಾಜಿ, ಸಿಪಿಐ ಲಾಲಸಾಬ್ ಜೂಲಕಟ್ಟಿ ಸೇರಿ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ. ಸೋಕೋ ತಂಡದಿಂದಲೂ ಪರಿಶೀಲನೆ ನಡೆದಿದೆ.

ಖತರ್ನಾಕ್​​ ಗ್ಯಾಂಗ್​​ನ ಕೈಚಳಕ ಕಂಡು ಮುದ್ರಣಕಾಶಿ ಗದಗದ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಮೇಲಿಂದ ಮೇಲೆ ಇಂತಹ ದರೋಡೆ ಪ್ರಕರಣಗಳು ನಡೆದ ಬಗ್ಗೆ ಕೇಳುತ್ತಿದ್ದೆವು. ಆದರೆ ಈಗ ನಮ್ಮ ಕಾಲಬುಡದಲ್ಲೇ ಇಷ್ಟು ದೊಡ್ಡ ದರೋಡೆ ನಡೆದಿರೋದು ಆಘಾತ ಮೂಡಿಸಿದೆ. ಚಿನ್ನದ ಅಂಗಡಿ ದರೋಡೆ ನಡೆಸಿರುವ ಆರೋಪಿಗಳನ್ನು ಶೀಘ್ರ ಪತ್ತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:03 pm, Thu, 4 December 25

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್