AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ! 9 ತಿಂಗಳ ಮೊಮ್ಮಗನನ್ನ ಉಸಿರು ಗಟ್ಟಿಸಿ ಕೊಲೆ ಮಾಡಿದ್ಲಾ ಅಜ್ಜಿ?

ಅದು ಒಂಬತ್ತು ತಿಂಗಳ ಹಸುಗೂಸು. ಇನ್ನೂ ಜಗತ್ತು ಏನೆಂದು ಅರಿಯದ ಮುಗ್ಧ ಮನಸ್ಸಿನ ಕೂಸು. ಅಂತಹ ಕೂಸನ್ನು ಆಡಿಸಿ, ಮುದ್ದಾಡಬೇಕಾದ ಅಜ್ಜಿ, ತನ್ನ ಮೊಮ್ಮಗನನ್ನೇ ಉಸಿರು ಗಟ್ಟಿಸಿ ಕೊಂದು ಹಾಕಿದ್ದಾಳೆ. ಈ ಅಮಾನವೀಯ ಘಟನೆ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಅತ್ತೆ ಸೊಸೆ ಜಗಳ, ಹಸುಗೂಸಿನ ಕೊಲೆಯಲ್ಲಿ ಅಂತ್ಯವಾಗಿದ್ದು, ಒಂಬತ್ತು ತಿಂಗಳ ಗಂಡು ಮಗುವನ್ನು ಕಳೆದುಕೊಂಡ ಹೆತ್ತ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ.

ಗದಗ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ! 9 ತಿಂಗಳ ಮೊಮ್ಮಗನನ್ನ ಉಸಿರು ಗಟ್ಟಿಸಿ ಕೊಲೆ ಮಾಡಿದ್ಲಾ ಅಜ್ಜಿ?
ಮೃತ ಮಗು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Nov 25, 2023 | 7:50 PM

Share

ಗದಗ, ನ.25: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಒಂಬತ್ತು ತಿಂಗಳ ಹಸುಗೂಸನ್ನು ಎತ್ತಿ ಮುದ್ದಾಡಿ ಆಟವಾಡಿಸಬೇಕಿದ್ದ ಅಜ್ಜಿಯೇ ಕೊಲೆ ಮಾಡಿದ ಘಟನೆ ನಡೆದಿದೆ. ಗಜೇಂದ್ರಗಡ(Gajendragad) ತಾಲೂಕಿನ ನಾಗರತ್ನ ಹಾಗೂ ಲಕ್ಷ್ಮಣ ಎಂಬುವವರ ಜೊತೆಗೆ ಕಳೆದ ಎರಡು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಲಕ್ಷ್ಮಣ ಕುಡಿತಕ್ಕೆ ದಾಸನಾಗಿದ್ದ. ಆದರೂ ನಾಗರತ್ನ ಕಷ್ಟ-ಸುಖ ಎಂದು ಗಂಡನ ಮನೆಯಲ್ಲಿಯೇ ಜೀವನ ನಡೆಸುತ್ತಿದ್ದಳು. ಆದರೆ, ಅತ್ತೆ ಸರೋಜಾ ಎಂಬುವವರು ನಿತ್ಯ ಕಿರುಕುಳ ನೀಡುತ್ತಿದ್ದರಂತೆ. ಯಾವಾಗ ನಾಗರತ್ನ ಗರ್ಭಿಣಿಯಾದಳೋ ಆಗಿನಿಂದ ಅತ್ತೆಯ ಕಿರುಕುಳ ಹೆಚ್ಚಾಗಿದೆಯಂತೆ. ಮಗು ಹೊಟ್ಟೆಯಲ್ಲಿ ಇದ್ದಾಗಲೇ ತೆಗೆದು ಹಾಕುವಂತೆ ಒತ್ತಾಯ ಕೂಡ ಮಾಡಿದ್ದಳಂತೆ. ಅತ್ತೆಯ ಮಾತು ಕೇಳದೆ ತನ್ನ ಕರುಳಿನ ಕುಡಿಯನ್ನು ಉಳಿಸಿಕೊಂಡಿದ್ದರು.

ಅತ್ತೆಯೇ ಕೊಲೆ ಮಾಡಿದ್ದಾಳೆ ಎಂದು ಸೊಸೆಯಿಂದ ಠಾಣೆಗೆ ದೂರು

ಹೆರಿಗೆಗೆ ತವರು ಮನೆಗೆ ಬಂದ ನಾಗರತ್ನಾಳನ್ನು ಕೇವಲ 5 ತಿಂಗಳಿಗೆ ಗಂಡನ ಮನೆ ಕರೆಸಿಕೊಂಡಿದ್ರು. ಇನ್ನು ಮನೆಗೆ ಮುದ್ದಾದ ಗಂಡು ಮಗು ಬಂದರೂ ಅತ್ತೆಯ ಮನಸ್ಸು ಮಾತ್ರ ಕರಗಿಲ್ಲವಂತೆ. ಆಗಲೂ ನಿತ್ಯ ಕಿರುಕುಳ ನೀಡುತ್ತಿದ್ದರಂತೆ. ಅಷ್ಟೇ ಅಲ್ಲ, ಒಂಬತ್ತು ತಿಂಗಳ ಕೂಸನ್ನು ಮನೆಯಲ್ಲಿ ಬಿಟ್ಟು ನಾಗರತ್ನಳನ್ನು ಜಮೀನನ ಕೆಲಸಕ್ಕೆ ಕಳಿಸುತ್ತಿದ್ದರಂತೆ. ಅದರಂತೆ ನವೆಂಬರ್ 22 ರಂದು ಕೂಸಿಗೆ ಊಟ ಮಾಡಿಸಿ, ಜಮೀನಿನ ಕೆಲಸಕ್ಕೆ ಹೋಗಿದ್ದಳು. ಆದ್ರೆ, ತಾಯಿ ಜಮೀನಿಗೆ ಹೋಗಿ ಮನೆ ವಾಪಾಸ್​ ಬರುವಷ್ಟರಲ್ಲಿ ಮಗು ಸಾವನ್ನಪ್ಪಿದೆ‌ ಎಂದು ಗಂಡನ ಮನೆಯವರು ಹೇಳಿದ್ದಾರೆ. ಹಸುಗೂಸಿಗೆ ಅಡಿಕೆ ಹಾಗೂ ಎಲೆಯ ತುಂಬನ್ನು ಹಾಕಿ ಉಸಿರುಗಟ್ಟಿಸಿ ಅತ್ತೆ ಸರೋಜ ಕೊಲೆ ಮಾಡಿದ್ದಾಳೆ ಎಂದು ಸೊಸೆ ನಾಗರತ್ನ ದೂರು ದಾಖಲು ಮಾಡಿದ್ದಾಳೆ.

ಇದನ್ನೂ ಓದಿ:ಆನೇಕಲ್​: ಹೆರಿಗೆ ವೇಳೆ ಮಗು ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರ ಆರೋಪ

ಆಸ್ತಿ ಗಂಡು ಮಗುವಿಗೆ ಹೋಗುತ್ತೆ ಎಂದು ಕೊಲೆ ಮಾಡಿದಳಾ ಅಜ್ಜಿ?

ಇನ್ನು ಪುರ್ತಗೇರಿ ಗ್ರಾಮದಲ್ಲಿ ನೀರಾವರಿ ಜಮೀನು ಇದೆ. ನಾಗರತ್ನ ಗಂಡ ಮೊದಲೇ ಕುಡುಕ. ಎಲ್ಲಾ ಆಸ್ತಿ ಎಲ್ಲಿ ಗಂಡು ಮಗುವಿಗೆ ಹೋಗುತ್ತೇ ಎನ್ನುವ ಕಾರಣಕ್ಕೆ ಅತ್ತೆ ಸರೋಜ ಕೊಲೆ ಮಾಡಿದ್ದಾಳೆ ಎಂದು ಸೊಸೆ ನಾಗರತ್ನ ಆರೋಪಿಸಿದ್ದಾಳೆ. ಅಂದು ಗಡಿಬಿಡಿಯಾಗಿ ಮಗುವಿನ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಆರೋಗ್ಯವಾಗಿದ್ದ ಮಗು ದಿಢೀರ್ ಸಾವು ಯಾಕೇ ಆಯ್ತು ಎಂದು  ತಾಯಿ ನಾಗರತ್ನ ಅವರಿಗೆ ಅತ್ತೆಯ ಮೇಲೆ ಅನುಮಾನ ಬಂದ ಬಳಿಕ ನವೆಂಬರ್ 23ರಂದು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ನಾಗರತ್ನ ಅತ್ತೆ ಸರೋಜಾಳ ವಿರುದ್ಧ ದೂರು ದಾಖಲು ಮಾಡಿದ್ದರು.

ದೂರು ದಾಖಲು ಆಗುತ್ತಿದ್ದಂತೆ ಅಲರ್ಟ್ ಆದ ಗಜೇಂದ್ರಗಡ ಪೊಲೀಸರು, ಗದಗ ಎಸಿ ವೆಂಕಟೇಶ ನಾಯಕ, ಸಿಪಿಐ ಎಸ್ ಎಸ್ ಬಿಳಗಿ, ಪಿಎಸ್ಐ ಸೋಮನಗೌಡ ನೇತೃತ್ವದಲ್ಲಿ, ಹೊತ್ತಿದ್ದ ನವಜಾತ ಶಿಶುವಿನ ಶವವನ್ನು ಹೊರಗಡೆ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಇನ್ನೂ ಒಂಬತ್ತು ತಿಂಗಳ ಅದ್ವಿಕ್ ಎನ್ನುವ ಹೆತ್ತ ಮಗುವನ್ನು ಕಳೆದುಕೊಂಡು ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಇತ್ತ ಸಾಲ ಸೂಲ ಮಾಡಿ ಮದುವೆ ಮಾಡಿದ್ವಿ. ಆದ್ರೆ, ಸರೋಜ ನಮ್ಮ ಮಗಳಿಗೆ ಸಾಕಷ್ಟು ಕಿರುಕುಳ ನೀಡುತ್ತಾರೆ. ಇವಾಗ ಮುದ್ದಾದ ಮೊಮ್ಮಗನನ್ನು ಕೊಲೆ ಮಾಡಿದ್ದಾರೆ ಎಂದು ಕಣ್ಣೀರು ನಾಗರತ್ನ ಅವರ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಇನ್ನು ಪೊಲೀಸ್ ತನಿಖೆಯಿಂದಲೇ ಮಗುವಿನ ಸಾವಿನ ರಹಸ್ಯ ಗೋತ್ತಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ