AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ಗದಗ ಜಿಮ್ಸ್​ ಆಸ್ಪತ್ರೆಯ ಔಷಧ ವಿಭಾಗಕ್ಕೆ ನುಗ್ಗಿದ ನೀರು

ಗದಗ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಗದಗ ಜಿಮ್ಸ್​ ಆಸ್ಪತ್ರೆಯ ಔಷಧ ವಿಭಾಗಕ್ಕೆ ನೀರು ನುಗ್ಗಿ ಕೋಟ್ಯಂತರ ರೂಪಾಯಿ ಮೌಲ್ಯದ ಔಷಧಗಳು ನೀರುಪಾಲಾಗಿವೆ.

ಭಾರೀ ಮಳೆಗೆ ಗದಗ ಜಿಮ್ಸ್​ ಆಸ್ಪತ್ರೆಯ ಔಷಧ ವಿಭಾಗಕ್ಕೆ ನುಗ್ಗಿದ ನೀರು
ನೀರುಪಾಲದ ಔಷಧಗಳು
TV9 Web
| Updated By: ವಿವೇಕ ಬಿರಾದಾರ|

Updated on:Sep 08, 2022 | 6:22 PM

Share

ಗದಗ: ಗದಗ (Gadag) ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಗದಗ ಜಿಮ್ಸ್​ ಆಸ್ಪತ್ರೆಯ (Jims Hospital) ಔಷಧ ವಿಭಾಗಕ್ಕೆ ನೀರು ನುಗ್ಗಿ ಕೋಟ್ಯಂತರ ರೂಪಾಯಿ ಮೌಲ್ಯದ ಔಷಧಗಳು ನೀರುಪಾಲಾಗಿವೆ. ಔಷಧ ಹಾಳಾಗಿದ್ದನ್ನು ಕಂಡು ಮೆಡಿಸಿನ್ ವಿಭಾಗದ ಮುಖ್ಯಸ್ಥ ಮಹೇಶಗೌಡ ದಾನಪ್ಪಗೌಡರಗೆ ಎದೆನೋವು ಕಾಣಿಸಿಕೊಂಡಿದ್ದು, ಜಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೀರು ನುಗ್ಗಿ ಮೂರು ಕಳೆದರು ಔಷಧಿಗಳನ್ನು ಸ್ಥಳಾಂತರಿಸುವ ಗೋಜಿಗೆ ಆಸ್ಪತ್ರೆಯ ಸಿಬ್ಬಂದಿಗಳು ಮುಂದಾಗಿಲ್ಲ. ಔಷಧಿ ಸ್ಥಳಾಂತರಕ್ಕೆ ಸಿಬ್ಬಂದಿಗಳು ನೀ ಮಾಡು.. ನಾ ಮಾಡು.. ಅಂತ ವಾಗ್ವಾದ ಮಾಡಿದ್ದಾರೆ. ಈ ಬಗ್ಗೆ ಈ ಮೊದಲೇ ಜಿಮ್ಸ್ ನಿರ್ದೇಶಕರಿಗೆ ಔಷಧಿ ವಿಭಾಗ ಸ್ಥಳಾಂತರ ಮಾಡುವಂತೆ ಪತ್ರ ಬರೆದಿದ್ದರಂತೆ. ಆದರೆ, ನಿರ್ದೇಶಕಿ ಡಾ. ರೇಖಾ ಅವರ ನಿರ್ಲಕ್ಷ್ಯಕ್ಕೆ ಇವತ್ತು ದೊಡ್ಡ ಅನಾಹುತ ಆಗಿದೆ ಅಂತ ಸಿಬ್ಬಂದಿ ಗೊಣಗುಡುತ್ತಿದ್ದಾರೆ.

ಈ ಸಂಬಂಧ ಟಿವಿ9 ಔಷಧಾಲಯಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಜಿಮ್ಸ್ ನಿರ್ದೇಶಕಿ ರೇಖಾ ಓಡೋಡಿ ಔಷಧಿ ಸ್ಟಾಕ್ ರೂಂಗೆ ಬಂದು ಪರಿಶೀನೆ ಮಾಡಿದ್ದಾರೆ. ಇಷ್ಟಾಲ್ಲಾ ರಾದ್ಧಾಂತ ಆದರೂ ನಿರ್ದೇಶಕಿ ಅವರಿಗೆ ಎಷ್ಟು ಪ್ರಮಾಣ ಔಷಧಿ ನೀರು ಪಾಲಾಗಿದೆ ಅನ್ನೋ ಸ್ಪಷ್ಟ ಮಾಹಿತಿ ಇಲ್ಲ. ಸುಮಾರು ಮೂರು ಕೋಟಿ ಮೊತ್ತದ ಔಷಧಿ ನೀರು ಪಾಲಾಗಿದೆ. ಮರು ಉಪಯೋಗ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ ಅಂತ ಜಿಮ್ಸ್ ನಿರ್ದೇಶಕಿ ಡಾ. ರೇಖಾ ಹೇಳಿದ್ದಾರೆ.

ನಿರಂತರ ಮಳೆಯಿಂದ ಗದಗ ನಗರದ ಕೆ ಎಚ್ ಪಾಟೀಲ್ ಸರ್ಕಲ್ ಬಳಿ ಕಮ್ಮಾರ ಸಾಲ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಮೂರು ಜನ ಬಾಣಂತಿಯರು ಗೋಳಾಡುತ್ತಿದ್ದಾರೆ. ಸರೋಜಾ ಚವಾಣ ಒಂದು ತಿಂಗಳ ಬಾಣಂತಿ, ಕೋಮಲ್ ಚವಾಣ 15 ದಿನದ ಬಾಣಂತಿ, ಸವಿತಾ ಚವಾಣ ಐದು ತಿಂಗಳ ಬಾಣಂತಿಯರು ಹಸುಗೂಸಗಳೊಂದಿ ಶೆಡ್ ನಲ್ಲಿ ಆಸರೆ ಪಡೆದಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Thu, 8 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ