AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಒಂದೇ ವೇದಿಕೆಯಲ್ಲಿ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸವ; ಹೊಸ ಬದುಕಿಗೆ ಕಾಲಿಟ್ಟ 18 ನವಜೋಡಿ

Gadag Mass Marriage: ಗದಗದಲ್ಲಿ ನಡೆದ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವವು ಕೋಮು ಸೌಹಾರ್ದಕ್ಕೆ ಅಡಿಪಾಯ ಹಾಕಿದೆ. ಧರ್ಮದ ಹೆಸರಿನಲ್ಲಿ ಘರ್ಷಣೆಗಳು ಹೆಚ್ಚುತ್ತಿರುವ ಈ ಕಾಲದಲ್ಲಿ, ಹಿಂದೂ ಮತ್ತು ಮುಸ್ಲಿಂ ಧರ್ಮಗುರುಗಳ ಸಾನಿಧ್ಯದಲ್ಲಿ 18 ನವಜೋಡಿಗಳು ಹೊಸ ಬಾಳಿಗೆ ಕಾಲಿಟ್ಟರು. ಇದು ಕೇವಲ ಮದುವೆಯಲ್ಲ, ಮಾನವೀಯತೆ ಮತ್ತು ಸಹಬಾಳ್ವೆಯ ಮಹತ್ವವನ್ನು ಸಾರುವ ಅನನ್ಯ ಸಂದೇಶವಾಗಿದೆ.

ಗದಗ: ಒಂದೇ ವೇದಿಕೆಯಲ್ಲಿ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸವ; ಹೊಸ ಬದುಕಿಗೆ ಕಾಲಿಟ್ಟ 18 ನವಜೋಡಿ
ಹಿಂದೂ, ಮುಸ್ಲಿ ಸಾಮೂಹಿಕ ವಿವಾಹImage Credit source: tv9 kannada
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Aug 31, 2026 | 9:34 PM

Share

ಗದಗ, ಆಗಸ್ಟ್​ 31: ಧರ್ಮದ ಹೆಸರಿನಲ್ಲಿ ದ್ವೇಷ-ಅಸೂಯೆಗಳು ಬಿತ್ತಲ್ಪಡುತ್ತಿರುವ ಇಂದಿನ ದಿನಗಳಲ್ಲಿ, ಗದಗ ನಗರ ಮಾನವೀಯತೆ ಹಾಗೂ ಕೋಮು ಸೌಹಾರ್ದತೆಯ ಅಪರೂಪದ ಸಂಗಮಕ್ಕೆ ಸಾಕ್ಷಿಯಾಗಿದೆ. ಪ್ರವಾದಿ ಹಜರತ್ ಮೊಹಮ್ಮದ್ ಪೈಗಂಬರ್ ಜಯಂತ್ಯುತ್ಸವದ ಅಂಗವಾಗಿ ಬೆಟಗೇರಿ ಈದ್ಗಾ ಕಮಿಟಿ ವತಿಯಿಂದ ಆಯೋಜಿಸಲಾಗಿದ್ದ ಸರ್ವಧರ್ಮ ಸಾಮೂಹಿಕ ವಿವಾಹ (Mass Marriage) ಮಹೋತ್ಸವದಲ್ಲಿ ಒಟ್ಟು 18 ನವಜೋಡಿಗಳು ಸಾವಿರಾರು ಜನರ ಸಮ್ಮುಖದಲ್ಲಿ ಹೊಸ ಜೀವನಕ್ಕೆ ಹೆಜ್ಜೆಯಿಟ್ಟವು.

ಒಂದೇ ವೇದಿಕೆ, ಎರಡು ಧರ್ಮಗಳ ಸಂಪ್ರದಾಯಬದ್ಧ ಸಪ್ತಪದಿ

ಗದಗ ನಗರದಲ್ಲಿ ಪ್ರವಾದಿ ಹಜರತ್ ಮೊಹಮ್ಮದ್ ಪೈಗಂಬರ್ ಜಯಂತ್ಯೋತ್ಸವದ ಹಿನ್ನೆಲೆ ಬೆಟಗೇರಿ ಈದ್ಗಾ ಕಮಿಟಿ ವತಿಯಿಂದ ಅದ್ಧೂರಿ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿತ್ತು. ಹಿಂದೂ ಮದುವೆ, ಅರ್ಚಕರು, ಮುಸ್ಲಿಂ ನಿಕಾಹ್, ಧರ್ಮಗುರುಗಳು ಒಂದೇ ವೇದಿಕೆಯಲ್ಲಿ ಅದ್ಧೂರಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಎರಡು ಧರ್ಮಗಳ ಸಂಪ್ರದಾಯದಂತೆ ಮದುವೆ ನಡೆದಿರುವುದು ವಿಶೇಷ.

Mass Marriage

ಹಿಂದೂ ನವಜೋಡಿಗಳಿಗೆ ಹಿಂದೂ ಸಂಪ್ರದಾಯದಂತೆ ಅರ್ಚಕರಿಂದ ವಿವಾಹ ನೆರವೇರಿದರೆ, ಮುಸ್ಲಿಂ ನವಜೋಡಿಗಳಿಗೆ ಮುಸ್ಲಿಂ ಧರ್ಮಗುರುಗಳು ಸಂಪ್ರದಾಯ ಬದ್ಧವಾಗಿ ವಿವಾಹ ನೆರವೇರಿಸಿದರು. ಇಲ್ಲಿ ಯಾರ ಧರ್ಮಕ್ಕೂ ಧಕ್ಕೆ ಇಲ್ಲ. ಯಾರ ಸಂಪ್ರದಾಯಕ್ಕೂ ಅಡ್ಡಿಯಿಲ್ಲ. ತಮ್ಮ ತಮ್ಮ ಧರ್ಮವನ್ನು ಗೌರವಿಸುತ್ತಲೇ, ಮತ್ತೊಂದು ಧರ್ಮದವರೊಂದಿಗೆ ಸೌಹಾರ್ದದಿಂದ ಬದುಕಬಹುದು ಎಂಬ ಸಂದೇಶವನ್ನು ಸಾರಲಾಯಿತು.

ಧರ್ಮದ ಗೋಡೆ ಕೆಡವಿ ಮಾನವೀಯತೆಯ ಸೇತುವೆ ನಿರ್ಮಾಣ

ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ಶಕ್ತಿಗಳಿಗೆ ಈ ಸಮಾರಂಭವು ಪ್ರೀತಿ ಮತ್ತು ಸಹಬಾಳ್ವೆಯ ಉತ್ತರ ನೀಡಿತು. ಸಾವಿರಾರು ಜನರ ಹರ್ಷೋದ್ಗಾರ, ಚಪ್ಪಾಳೆಯ ನಡುವೆ ಹಸೀಮಣೆ ಏರಿದ ವಧು-ವರರ ಮುಖದಲ್ಲಿ ನೂರಾರು ಕನಸುಗಳ ಮಂದಹಾಸ ತುಂಬಿತ್ತು. ಇದು ಕೇವಲ ಎರಡು ಮನಸ್ಸುಗಳ ಮಿಲನ ಮಾತ್ರವಾಗಿರದೆ, ಸಮಾಜದಲ್ಲಿ ಸೌಹಾರ್ದದ ಬಾಂಧವ್ಯವನ್ನು ಗಟ್ಟಿಗೊಳಿಸುವ ಮಹತ್ವದ ಹೆಜ್ಜೆಯಾಗಿ ಜನರ ಮೆಚ್ಚುಗೆಗೆ ಪಾತ್ರವಾಯಿತು.

Maduve

ಆರಾಧಿಸುವ ದೇವರು ಹಾಗೂ ಆಚರಿಸುವ ಪದ್ಧತಿಗಳು ಭಿನ್ನವಾಗಿರಬಹುದು, ಆದರೆ ಹೃದಯದ ಮಿಡಿತ ಮತ್ತು ಮನುಷ್ಯತ್ವ ಒಂದೇ ಎಂಬುದನ್ನು ಗದಗ ನಗರ ಇಡೀ ದೇಶಕ್ಕೆ ಸಾರಿ ಹೇಳಿದೆ. ಯಾವುದೇ ಬೇಧ-ಭಾವವಿಲ್ಲದೆ ಒಗ್ಗಟ್ಟಿನಿಂದ ಬದುಕುವ ಈ ಸೌಹಾರ್ದತೆಯ ಸಂದೇಶ ಸಮಾಜಕ್ಕೆ ದೊಡ್ಡ ಪ್ರೇರಣೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ