ಲಕ್ಷ್ಮೇಶ್ವರ: ಅಕ್ರಮ ಕಲ್ಲು ಗಣಿಗಾರಿಕೆಗೆ ನಲುಗಿದ ಆದರಹಳ್ಳಿ ಜನ, ಮನೆಗಳ ಗೋಡೆಗಳು ಬಿರುಕು

ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯಿಂದಾಗಿ ಮನೆಗಳು ಬಿರುಕು ಬಿಟ್ಟಿವೆ. ನಿತ್ಯದ ಬ್ಲಾಸ್ಟಿಂಗ್‌ನಿಂದ ಜನರು ಆತಂಕದಲ್ಲಿದ್ದಾರೆ. ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. 50ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಇಲ್ಲಿನ ಸ್ಥಿತಿಗತಿಯನ್ನು ಗಮನಿಸಿ, ನಮ್ಮ ಸಹಾಯಕ್ಕೆ ಜಿಲ್ಲಾಧಿಕಾರಿಗಳು  ಬರಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಲಕ್ಷ್ಮೇಶ್ವರ: ಅಕ್ರಮ ಕಲ್ಲು ಗಣಿಗಾರಿಕೆಗೆ ನಲುಗಿದ ಆದರಹಳ್ಳಿ ಜನ, ಮನೆಗಳ ಗೋಡೆಗಳು ಬಿರುಕು
ಬಿರುಕು ಬಿಟ್ಟಿರುವ ಮನೆ
Edited By: ವಿವೇಕ ಬಿರಾದಾರ

Updated on: Mar 19, 2025 | 2:42 PM

ಗದಗ, ಮಾರ್ಚ್​ 19: ಲಕ್ಷ್ಮೇಶ್ವರ (Lakshmeshwara) ತಾಲೂಕಿನ ಆದರಹಳ್ಳಿ ಗ್ರಾಮದ ಸುತ್ತಮುತ್ತ ಸರ್ಕಾರಿ ಜಮೀನಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಅಕ್ರಮವಾಗಿ ನಡೆಯುವ ನಿತ್ಯ ಬ್ಲಾಸ್ಟಿಂಗ್​ ಗ್ರಾಮದ ಜನರಲ್ಲಿ ನಡುಕು ಹುಟ್ಟಿಸಿದೆ. ಇದು ಆ ಗ್ರಾಮದ ಜನರು ಅಕ್ಷರಶಃ ಕಂಗಾಲಾಗುವಂತೆ ಮಾಡಿದೆ. ಭಾರಿ‌ ಪ್ರಮಾಣದ ಅಕ್ರಮ ಬ್ಲಾಸ್ಟಿಂಗ್​ಗೆ ಮನೆಗಳ ಗೋಡೆಗಳು ಬಿರುಕು ಬಿಡುತ್ತಿದ್ದು, ಶಬ್ಧಕ್ಕೆ ಮನೆಗಳು ಅದುರುತ್ತಿವೆ. ಈ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಿ ಅಂತ ಗಣಿ, ಪೊಲೀಸ್, ಕಂದಾಯ ಇಲಾಖೆ (Revenue Department) ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ನಡೆ ಜನರಲ್ಲಿ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಆದರಹಳ್ಳಿ ಗ್ರಾಮದಲ್ಲಿ ಬಡ ಜನರು ಸಾಲ ಮಾಡಿ ನಿರ್ಮಾಣ ಮಾಡಿದ‌ ಮನೆಗಳು 2-3 ವರ್ಷದಲ್ಲೇ ದೊಡ್ಡ ಪ್ರಮಾಣದಲ್ಲಿ ಬಿರುಕು ಬಿಡುತ್ತಿವೆ. ಇದರಿಂದ ಮನೆಗಳು ಕುಸಿಯುವ ಹಂತಕ್ಕೆ ತಲುಪಿದ್ದು, ಭಯದಲ್ಲೇ ಗ್ರಾಮಸ್ಥರು ಬದುಕುವಂತಾಗಿದೆ.

ಆದರಹಳ್ಳಿ ಗ್ರಾಮದಲ್ಲಿ ಬರೊಬ್ಬರಿ 50ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ದೊಡ್ಡ ಪ್ರಮಾಣದ ಬ್ಲಾಸ್ಟಿಂಗ್​ ಇಡೀ ಗ್ರಾಮ ಅದುರುತ್ತಿದೆ. ಬ್ಲಾಸ್ಟಿಂಗ್ ವೇಳೆ ಯಾವಾಗ ಮನೆಗಳು ಕುಸಿಯತ್ತವೆ ಗೊತ್ತಿಲ್ಲ. ಬಿರುಕು ಬಿಟ್ಟ ಮನೆಗಳಲ್ಲಿ ವಾಸ ಮಾಡುತ್ತಿದ್ದೇವೆ. ಏನಾದ್ರೂ ದುರಂತ ಆದರೆ, ಜಿಲ್ಲಾಡಳಿತವೇ ಹೊಣೆ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
ಗದಗ: ಸರ್ಕಾರಿ ರತಿ-ಕಾಮಣ್ಣ ಮೂರ್ತಿಗೆ 29 ಕೆಜಿ ಚಿನ್ನದಿಂದ ಶೃಂಗಾರ
12 ಲಕ್ಷಕ್ಕೆ 12 ನಿವೇಶನ: ಬಡ್ಡಿ ಬಕಾಸುರರ ಅಟ್ಟಹಾಸಕ್ಕೆ ವೃದ್ಧೆ ನರಳಾಟ!
ಹೋಳಿ ಸಂಭ್ರಮದಲ್ಲಿ ಘೋರ ದುರಂತ: ಮೂವರ ಮನೆಗಳಲ್ಲಿ ಸೂತಕದ ಛಾಯೆ
ಪೊಲೀಸ್​ ಠಾಣೆಗೆ ಬೆಂಕಿ ಹಚ್ಚಿದ್ದವರಿಗೆ ಕಾದಿದೆ ಶಿಕ್ಷೆ: ಆರೋಪ ಸಾಬೀತು

ಇದನ್ನೂ ಓದಿ: ಕಲ್ಲಂಗಡಿ ಮಾರಾಟಕ್ಕೆ ಮಾರುಕಟ್ಟೆ ಅಖಾಡಕ್ಕಿಳಿದ ರೈತರು, ದಲ್ಲಾಳಿಗಳು ಕಂಗಾಲು

ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಆದರೂ, ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಹೀಗಾಗಿ ಈ ಬ್ಲಾಸ್ಟ್​ಗೆ ಅಧಿಕಾರಿಗಳ ಕುಮ್ಮಕ್ಕು ಇರುವ ಅನುಮಾನವಿದೆ. ತಾಲೂಕಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ, ಜಿಲ್ಲಾಧಿಕಾರಿಗಳೇ ನಮ್ಮೂರಿಗೆ ಭೇಟಿ ನೀಡಬೇಕು. ಇಲ್ಲಿನ ಸ್ಥಿತಿಗತಿಯನ್ನು ಗಮನಿಸಿ, ನಮ್ಮ ಸಹಾಯಕ್ಕೆ ಜಿಲ್ಲಾಧಿಕಾರಿಗಳು  ಬರಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Wed, 19 March 25

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us