AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat@100: ಪ್ರಧಾನಿ ಮೋದಿ 100ನೇ ಮನ್​ ಕಿ ಬಾತ್​​ಗೆ ಗದಗಿನ ಕಾಂವೇಂಶ್ರಿಗೆ ಆಹ್ವಾನ

ಗದಗಿನ ಕಲಾ ಚೇತನದ ಅಧ್ಯಕ್ಷ ಕಾವೇಂಶ್ರೀ ಅವರನ್ನು ಏಪ್ರಿಲ್ ಕೊನೆಯ ವಾರದಲ್ಲಿ ನಡೆಯುವ ಪ್ರಧಾನಿ ಮೋದಿಯವರ 100ನೇ ಮನ್‌ಕಿ ಬಾತ್‌ನ ವಿಶೇಷ ಕಾರ್ಯಕ್ರಮಕ್ಕೆ ಪ್ರಸಾರ ಭಾರತಿ ಆಹ್ವಾನಿಸಿದೆ.

Mann Ki Baat@100: ಪ್ರಧಾನಿ ಮೋದಿ 100ನೇ ಮನ್​ ಕಿ ಬಾತ್​​ಗೆ ಗದಗಿನ ಕಾಂವೇಂಶ್ರಿಗೆ ಆಹ್ವಾನ
ಕಾವೇಂಶ್ರೀ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 23, 2023 | 10:42 AM

Share

ಮುಖ್ಯಾಂಶಗಳು

  • ಕಲೆ ಮತ್ತು ಸಂಸ್ಕೃತಿಯ ರಕ್ಷಣೆಗೋಸ್ಕರ ಎರಡು ದಶಕಗಳಿಮದ ಶ್ರಮಿಸುತ್ತಿರುವ ಗದಗ ಜಿಲ್ಲೆಯ ಕಾವೇಂಶ್ರೀ ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ) ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು 96ನೇ ಮನ್‌ಕಿ ಬಾತ್‌ನಲ್ಲಿ ಶ್ಲಾಘಿಸಿದ್ದರು.
  • ಕಲಾ ಚೇತನದ ಅಧ್ಯಕ್ಷ ಕಾವೇಂಶ್ರೀ ಅವರನ್ನು ಏಪ್ರಿಲ್ 30ರಂದು ನಡೆಯುವ ಪ್ರಧಾನಿ ಮೋದಿಯವರ 100ನೇ ಮನ್‌ಕಿ ಬಾತ್‌ ನ ವಿಶೇಷ ಕಾರ್ಯಕ್ರಮಕ್ಕೆ ಪ್ರಸಾರ ಭಾರತಿ ಆಹ್ವಾನಿಸಿದೆ.
  • ಕರ್ನಾಟಕದಿಂದ ಆಹ್ವಾನಿಸಲಾದ 7 ಅತಿಥಿಗಳಲ್ಲಿ ಕಾವೇಂಶ್ರೀ ಕೂಡ ಒಬ್ಬರಾಗಿದ್ದಾರೆ

ಗದಗ: ಕಲೆ ಮತ್ತು ಸಂಸ್ಕೃತಿಯ ರಕ್ಷಣೆಗೋಸ್ಕರ ಎರಡು ದಶಕಗಳಿಮದ ಶ್ರಮಿಸುತ್ತಿರುವ ಗದಗ (Gadag) ಜಿಲ್ಲೆಯ ಕಾವೇಂಶ್ರೀ (Kavemshri) (ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ) ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) 96ನೇ ಮನ್‌ಕಿ ಬಾತ್‌ನಲ್ಲಿ ಶ್ಲಾಘಿಸಿದ್ದರು. ಇದೀಗ ಕಲಾ ಚೇತನದ ಅಧ್ಯಕ್ಷ ಕಾವೇಂಶ್ರೀ ಅವರನ್ನು ಏಪ್ರಿಲ್ 30ರಂದು ನಡೆಯುವ ಪ್ರಧಾನಿ ಮೋದಿಯವರ 100ನೇ ಮನ್‌ಕಿ ಬಾತ್‌ (Mann Ki Baat@100) ನ ವಿಶೇಷ ಕಾರ್ಯಕ್ರಮಕ್ಕೆ ಪ್ರಸಾರ ಭಾರತಿ (Prasar Bharati) ಆಹ್ವಾನಿಸಿದೆ. ಕರ್ನಾಟಕದಿಂದ ಆಹ್ವಾನಿಸಲಾದ 7 ಜನ ಅತಿಥಿಗಳಲ್ಲಿ ಕಾವೇಂಶ್ರೀ ಕೂಡ ಒಬ್ಬರಾಗಿದ್ದಾರೆ ಎಂದು ಖಾಸಗಿ ಸದ್ದಿ ಸಂಸ್ಥೆ ಟೈಮ್ಸ್​ ಆಫ್​ ಇಂಡಿಯಾ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರ 100ನೇ ಮನಕೀ ಬಾತ್​​ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ಅನೇಕ ಗಣ್ಯಾತಿ ಗಣ್ಯರು ಕೂಡಾ ಭಾಗಿಯಾಗಲಿದ್ದು, ಇವರೊಂದಿಗೆ ನಾನು ಕೂಡ ಕಾರ್ಯಕ್ರಮದ ಭಾಗವಾಗುತ್ತಿರುವುದು ಸಂತಸ ತಂದಿದೆ ಎಂದು ಕಾವೇಂಶ್ರೀ ಅವರು ಹೇಳಿದ್ದಾರೆ.

ಕಾವೇಂಶ್ರೀಯವರು ಏಪ್ರಿಲ್ 26 ರಂದು ‘ಮನ್ ಕಿ ಬಾತ್@100’ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಮರುದಿನ ಏಪ್ರಿಲ್ 27 ರಂದು ಕರ್ತವ್ಯ ಪಥ, ರಾಷ್ಟ್ರಪತಿ ಭವನ ಮತ್ತು ಪ್ರಧಾನಮಂತ್ರಿ ಸಂಗ್ರಹಾಲಯಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 28 ರಂದು ಕೆಂಪು ಕೋಟೆ, ರಾಜ್‌ ಘಾಟ್​ ಮತ್ತು ಮಹಾತ್ಮಾ ಗಾಂಧಿ ಮ್ಯೂಸಿಯಂ ವೀಕ್ಷಿಸುತ್ತಾರೆ. ಏಪ್ರಿಲ್ 29 ರಂದು ಬೆಂಗಳೂರಿಗೆ ಮರಳಲಿದ್ದಾರೆ. ಇನ್ನು ಮನ್​ಕಿ ಬಾತ್​ನ 100ನೇ ಸಂಚಿಕೆಯ ಪ್ರಸಾರವನ್ನು ಕೇಳಿಸಿಕೊಳ್ಳಲು ಈ 7 ಜನ ಅತಿಥಿಗಳನ್ನು ರಾಜಭವನಕ್ಕೆ ಆಹ್ವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಗದಗದಲ್ಲಿ ಅರಳಿದ ಕಲಾಚೇತನ; ಕಾವೆಂಶ್ರೀ ಎಂಬ ಹೋಟೆಲ್ ಉದ್ಯಮಿಯ ಕಲಾಸೇವೆಯ ಯಶೋಗಾಥೆಗೆ ನಮೋ

ಕಲೆ ಮತ್ತು ಸಂಸ್ಕೃತಿಯ ರಕ್ಷಣೆಗೋಸ್ಕರ 1996 ಕಾವೇಂಶ್ರೀ ಅವರು ಕಲಾ ಚೇತನ ವೇದಿಕೆಯನ್ನು ಸ್ಥಾಪಿಸಿದರು. ಕಳೆದ 26 ವರ್ಷಗಳಿಂದ ಈ ವೇದಿಕೆ ಮುಖಾಂತರ ತಪೋ ಸದೃಶ ಕೊಡುಗೆ ನೀಡುತ್ತಿದ್ದಾರೆ. ಈ ಕಾಲಾ ಚೇತನ 2022ರ ನವೆಂಬರ್‌ನಲ್ಲಿ 25 ವರ್ಷ ಪೂರೈಸಿತು.

ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವಲ್ಲಿ ಕಾವೇಂಶ್ರೀ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, 25 ವರ್ಷಗಳ ಅವರ ಸೇವೆ ಅವಿಸ್ಮರಣೀಯ. ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸುವುದರ ಜೊತೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರನ್ನು ತಮ್ಮ ಕಲಾ ಚೇತಕ್ಕೆ ಆಹ್ವಾನಿಸಿದ್ದಾರೆ. ಅವರು ಮಾಡಿದ ಸೇವೆ ಶ್ಲಾಘನೀಯ ಎಂದು ಪ್ರಧಾನಿ ಮೋದಿ ಅವರು 2022 ರ ಡಿಸೆಂಬರ್ 25ರ ಮನ್ ಕಿ ಬಾತ್‌ನಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದರು.

ಪ್ರಧಾನಮಂತ್ರಿಯವರ ಮೆಚ್ಚುಗೆಗೆ ಪಾತ್ರರಾಗಿರುವುದು ಮತ್ತು ಪ್ರಸಾರ ಭಾರತಿ 100ನೇ ಮನ್​ ಕಿ ಬಾತ್​ಗೆ  ಆಹ್ವಾನಿಸಿರುವುದು ನನ್ನ ಅದೃಷ್ಟ. ಅಕಾಡೆಮಿಯ ಚಟುವಟಿಕೆಗಳನ್ನು ಬೆಂಬಲಿಸಿದ ಗದಗನ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿ ಅವರಿಗೆ ನಾನು ಈ ಗೌರವವನ್ನು ಅರ್ಪಿಸುತ್ತೇನೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸಿದ ನನ್ನ ಹಿತೈಷಿಗಳು, ಸ್ನೇಹಿತರು ಮತ್ತು ಗದಗಿನ ಸಾರ್ವಜನಿಕರಿಗೆ ಚಿರ ಋಣಿಯಾಗಿರುತ್ತೇನೆ ಎಂದು ಕಾವೇಂಶ್ರೀ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:09 am, Sun, 23 April 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ