AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bribe: ಶಾಲಾ ಕಟ್ಟಡದ ಫಿಟ್ನೆಸ್ ಸರ್ಟಿಫಿಕೇಟ್ ಕೊಡಲು ಲಂಚ ಕೇಳಿದ್ದ ಅಗ್ನಿಶಾಮಕ ದಳ ಅಧಿಕಾರಿ ಲೋಕಾಯುಕ್ತ ಬಲೆಗೆ

ಶಾಲೆಯ ಮುಖ್ಯೋಪಾಧ್ಯಾಯ ಸಿ. ಬಿ. ಮೊಗಲಿ ಎಂಬುವವರು ಲೋಕಾಯುಕ್ತರ ಕಚೇರಿಗೆ ದೂರು ನೀಡಿದ್ದರು. ಅಗ್ನಿಶಾಮಕ ದಳದ ಜಿಲ್ಲಾ ಮಟ್ಟದ ಅಧಿಕಾರಿ ಎನ್ ಎಸ್ ಕಗ್ಗಲಗೌಡರ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ.

Bribe: ಶಾಲಾ ಕಟ್ಟಡದ ಫಿಟ್ನೆಸ್ ಸರ್ಟಿಫಿಕೇಟ್ ಕೊಡಲು ಲಂಚ ಕೇಳಿದ್ದ ಅಗ್ನಿಶಾಮಕ ದಳ ಅಧಿಕಾರಿ ಲೋಕಾಯುಕ್ತ ಬಲೆಗೆ
ಶಾಲಾ ಕಟ್ಟಡದ ಫಿಟ್ನೆಸ್ ಸರ್ಟಿಫಿಕೇಟ್ ಕೊಡಲು ಲಂಚ ಕೇಳಿದ್ದ ಅಗ್ನಿಶಾಮಕ ದಳ ಅಧಿಕಾರಿ ಲೋಕಾಯುಕ್ತ ಬಲೆಗೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 28, 2022 | 7:55 PM

ಗದಗ: ಅಗ್ನಿಶಾಮಕ ದಳದ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ (Gadag Lokayukta raid) ನಡೆಸಿದ್ದು, ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ. ಶಾಲೆಯ ಕಟ್ಟಡದ ಫಿಟ್ನೆಸ್ ಕುರಿತು ಸುರಕ್ಷತಾ ಸರ್ಟಿಫಿಕೇಟ್ ಕೊಡಲು ಲಂಚ (bribe) ಕೇಳಿದ್ದ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಗದಗ ನಗರದ ಎಪಿಎಂಸಿ ಆವರಣದಲ್ಲಿ ಇರುವ ಅಗ್ನಿಶಾಮಕ ದಳ ಕಛೇರಿಯಲ್ಲಿ ನಡೆದಿದೆ.

ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಎಸ್ ಎಸ್ ಕೂಡ್ಲಮಠ ಶಾಲೆಯ ಕಟ್ಟಡದ ಗುಣಮಟ್ಟದ ಸುರಕ್ಷತಾ ಪ್ರಮಾಣ ಪತ್ರ ಕೊಡಲು 7,000 ರೂಪಾಯಿ ಲಂಚ ಕೇಳಿದ (school management) ಆರೋಪದಲ್ಲಿ ಅಧಿಕಾರಿ ಎನ್ ಎಸ್ ಕಗ್ಗಲಗೌಡರ ಎಂಬುವವರು ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾಯ ಸಿ. ಬಿ. ಮೊಗಲಿ ಎಂಬುವವರು ಲೋಕಾಯುಕ್ತರ ಕಚೇರಿಗೆ ದೂರು ನೀಡಿದ್ದರು. ಅಗ್ನಿಶಾಮಕ ದಳದ ಜಿಲ್ಲಾ ಮಟ್ಟದ ಅಧಿಕಾರಿ ಎನ್ ಎಸ್ ಕಗ್ಗಲಗೌಡರ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ, ಡಿವೈಎಸ್ಪಿ ಶಂಕರ ಎಮ್ ರಾಗಿ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರಗಳಾದ ರವಿ ಪುರುಷೋತ್ತಮ್ ಹಾಗೂ ಆಜೀಜ್ ಕಲಾದಗಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸಿಬ್ಬಂದಿಗಳಾದ ವಿರೂಪಾಕ್ಷ ಅರಿಷಿಣದ, ಎಸ್ ಎಸ್ ಅಮರಶೆಟ್ಟಿ, ಮಂಜುನಾಥ್ ಗಾರ್ಗಿ, ಲಕ್ಕನಗೌಡರ್, ಗುಬ್ಬಿ ಚಾಲಕರಾದ ನೈನಾಪೂರ ಹಾಗೂ ಹೆಬ್ಬಳ್ಳಿ ಈ ಕಾರ್ಯಾಚರಣೆಯಲ್ಲಿ ಇದ್ದರು.

Published On - 7:20 pm, Wed, 28 September 22

‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ