AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ವಿಚಿತ್ರ ಲವ್ ಜಿಹಾದ್, ಮತಾಂತರ ಯತ್ನ ಪ್ರಕರಣಕ್ಕೆ ಟ್ವಿಸ್ಟ್: ಯುವಕನ ವಿರುದ್ಧವೇ ಕೇಸ್

ಗದಗದ ವಿಚಿತ್ರ ಲವ್ ಜಿಹಾದ್, ಮತಾಂತರ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ. ಪತ್ನಿಯೇ ಪತಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾಳೆ. ಅಪ್ರಾಪ್ತೆ ಆಗಿದ್ದಾಗ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಿದ್ದಾಳೆ. ಪೊಲೀಸರು ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದು, ಎರಡು ಕುಟುಂಬಗಳಿಗೂ ನೋಟಸ್ ನೀಡಿದ್ದಾರೆ.

ಗದಗ ವಿಚಿತ್ರ ಲವ್ ಜಿಹಾದ್, ಮತಾಂತರ ಯತ್ನ ಪ್ರಕರಣಕ್ಕೆ ಟ್ವಿಸ್ಟ್: ಯುವಕನ ವಿರುದ್ಧವೇ ಕೇಸ್
ಗದಗ ವಿಚಿತ್ರ ಲವ್ ಜಿಹಾದ್, ಮತಾಂತರ ಯತ್ನ ಪ್ರಕರಣಕ್ಕೆ ಟ್ವಿಸ್ಟ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Ganapathi Sharma|

Updated on: Jul 23, 2025 | 10:21 AM

Share

ಗದಗ, ಜುಲೈ 23: ಗದಗ (Gadag) ನಗರದಲ್ಲಿ ಕಳೆದ ವಾರ ವಿಚಿತ್ರ ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬಂದಿತ್ತು. ಬೆಟಗೇರಿಯ ಸೆಟ್ಮೆಂಟ್ ಪ್ರದೇಶದ ಯುವಕ ವಿಶಾಲ ಕುಮಾರ್​ನನ್ನು ಮದುವೆ ನೆಪದಲ್ಲಿ ಮುಸ್ಲಿಂ ಸಮುದಾಯಕ್ಕೆ ಮತಾಂತರ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆತ ಮುಸ್ಲಿಂ ಸಮುದಾಯದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಅಷ್ಟೇ ಅಲ್ಲ, ಮಸೀದಿಯೊಂದರಲ್ಲಿ ನನ್ನನ್ನು ಮತಾಂತರ ಮಾಡಿಸಿದ್ದಾರೆ. ಜೊತೆ ನನಗೆ ಗೊತ್ತಿಲ್ಲದೇ ಹೆಸರು ಕೂಡ ವಿರಾಜ್ ಸಾಬ್ ಅಂತ ಬದಲಿಸಿದ್ದಾರೆ ಎಂದು ಆರೋಪಿಸಿದ್ದ. ಬಲವಂತವಾಗಿ ಮತಾಂತರ ಮಾಡಿದ್ದಾರೆ ಎಂದು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಿಸಿದ್ದ. ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಆದರೆ, ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ದೊರೆತಿದೆ.

ಪತಿ ವಿಶಾಲ್ ವಿರುದ್ಧ ಈಗ ಯುವತಿ ಪೋಸ್ಕೋ ಪ್ರಕರಣ ದಾಖಲು ಮಾಡಿದ್ದಾಳೆ. 17 ವರ್ಷದವಳಾಗಿದ್ದಾಗ ನನ್ನ ಜತೆ ಬಲವಂತಾಗಿ ದೈಹಿಕ ಸಂಪರ್ಕ ಮಾಡಿ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ. ಯುವತಿ ಗದಗ ಮಹಿಳಾ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾಳೆ ಎಂದು ಎಸ್​ಪಿ ತಿಳಿಸಿದ್ದಾರೆ.​

ಗದಗ ವಿಚಿತ್ರ ಲವ್ ಜಿಹಾದ್, ಮತಾಂತರ ಪ್ರಕರಣದ ಹಿನ್ನೆಲೆ

ವಿಶಾಲ್ ಕುಮಾರ್ ಹಾಗೂ ಮುಸ್ಲಿಂ ಧರ್ಮದ ಯುವತಿ ಕಳೆದ ಮೂರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ-ಪ್ರೇಮಮದ ವಿಷಯವನ್ನು ಮನೆಯವರಿಂದ ಮುಚ್ಚಿಟ್ಟಿದ್ದ ಜೋಡಿ, 2024ರ ನವೆಂಬರ್ 26 ನೇ ತಾರೀಕು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ನಂತರ, ರಿಜಿಸ್ಟರ್ ವಿಷಯ ಯುವತಿಯ ಕುಟುಂಬಕ್ಕೆ ಗೊತ್ತಾಗಿದೆ. ಆ ಬಳಿಕ, ಮುಸ್ಲಿಂ ಸಂಪ್ರದಾಯದಂತೆಯೇ ಮದುವೆಗೆ ಮಾಡಿಕೊಳ್ಳಲು ವಿಶಾಲ್ ಬಳಿ ಯುವತಿ ಕುಟುಂಬ ದುಂಬಾಲು ಬಿದ್ದಿತ್ತು. ಪ್ರೀತಿಸಿದ್ದ ಯುವತಿಗಾಗಿ ಮದುವೆಗೆ ಒಪ್ಪಿಕೊಂಡಿದ್ದ ವಿಶಾಲ್ ಕುಮಾರ್, 2025ರ ಏಪ್ರಿಲ್ 25 ನೇ ತಾರೀಕು ಮುಸ್ಲಿಂ ಸಂಪ್ರದಾಯದಂತೆ ನಿಖಾ ಮಾಡಿಕೊಂಡಿದ್ದ.

ಆದರೆ, ವಿಶಾಲ್​ಗೆ ಅರಿವಿಲ್ಲದೇ ನಿಖಾ ನಾಮದಲ್ಲಿ ಆತನ ಹೆಸರನ್ನು ವಿರಾಜ್ ಸಾಬ್ ಎಂದು ದಾಲಿಸಲಾಗಿತ್ತು ಎಂದು ಆರೋಪಿಸಲಾಗಿತ್ತು. ನಿಖಾ ದಫ್ತರ್​ನಲ್ಲಿ, ಅಂದರೆ ಮದುವೆಯ ನೋಂದಣಿಯಲ್ಲಿ ಬದಲಾದ ಹೆಸರನ್ನು ಉರ್ದುವಿನಲ್ಲಿ ಬರೆಯಲಾಗಿತ್ತು. ಅನ್ಯ ಧರ್ಮಕ್ಕೆ ಮತಾಂತರ ಮಾಡಿರುವ ಬಗ್ಗೆ ಗೊತ್ತಾಗುತ್ತಿದಂತೆಯೇ ಯುವಕ ವಿಶಾಲ್, ಮೋಸದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪತ್ನಿ , ಅವಳ ತಂದೆ-ತಾಯಿಯ ವಿರುದ್ದ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಪತ್ನಿಯೇ ಈಗ ಪೋಸ್ಕೋ ದೂರು ನೀಡಿದ್ದಾಳೆ. ಯುವತಿಯ ಆರೋಪವನ್ನು ವಿಶಾಲ್ ತಳ್ಳಿಹಾಕಿದ್ದಾರೆ.

ಇದನ್ನೂ ಓದಿ: ಗದಗನಲ್ಲಿ ವಿಚಿತ್ರ ಲವ್ ಜಿಹಾದ್: ಪ್ರೀತಿಸಿ ಮದ್ವೆಯಾದ ಯುವತಿಯಿಂದಲೇ ಹಿಂದೂ ಯುವಕನ ಮತಾಂತರಕ್ಕೆ ಯತ್ನ

ಪತ್ನಿಯೇ ಮುಸ್ಲಿಂ ಧರ್ಮಕ್ಕೆ ಬಲವಂತದ ಮತಾಂತರ ಮಾಡಿದ್ದು, ಮಾನಸಿಕ ಕಿರುಕುಳ ನೀಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿಶಾಲ್ ಮನವಿ ಮಾಡಿದ್ದಾರೆ. ಅತ್ತ ಪತ್ನಿ ಕೂಡ, ಅಪ್ರಾಪ್ತೆ ಆಗಿದ್ದಾಗ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದನೆಂದು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರಿಗೂ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ತನಿಖೆ ಆರಂಭಿಸಿದ್ದಾರೆ. ಈ ಪ್ರಕರಣ ಮುಂದೆ ಯಾವ ತಿರುವು ಪಡೆಯುತ್ತದೆಯೋ ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!