AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಲವ್ ಜಿಹಾದ್ ಪ್ರಕರಣಕ್ಕೆ ಮೇಜರ್​​ ಟ್ವಿಸ್ಟ್: ಅವನೂ ಬೇಡ- ಅಪ್ಪ ಅಮ್ಮನೂ ಬೇಡ ಎಂದ ಬಾಧಿತ ಹಿಂದೂ ಯುವತಿ

ಗದಗ ಜಿಲ್ಲೆಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ಮಾಧ್ಯಮಗಳ ವರದಿ ಬಳಿಕ ಎಚ್ಚೆತ್ತ ಪೊಲೀಸ್ರು ಯುವಕ, ಯುವತಿಯನ್ನು ಕರೆತಂದಿದ್ದಾರೆ...! ಯುವತಿಯ ಸ್ಟೇಟ್ಮೆಂಟ್ ಕೇಳಿ ಪೋಷಕರು ಬೆಚ್ಚಿಬಿದ್ದಿದ್ದಾರೆ! ಮುಸ್ಲಿಂ ಯುವಕ ಅಮೀರ್ ಈಗಾಗಲೇ ಒಂದು ಮದುವೆಯಾಗಿದ್ದಾನೆ. ಹಾಗೇ ಮೂರ್ನಾಲು ಹಿಂದೂ ಯುವತಿಯರ ಜೊತೆಗೆ ಪ್ರೀತಿ ಪ್ರೇಮ ಅಂತಾ ನಾಟಕ ಮಾಡ್ತಾಯಿದ್ದಾನಂತೆ ಎಂದು ಪೋಷಕರು ಆರೋಪ ಮಾಡಿದ್ದಾರೆ.

ಗದಗ ಲವ್ ಜಿಹಾದ್ ಪ್ರಕರಣಕ್ಕೆ ಮೇಜರ್​​ ಟ್ವಿಸ್ಟ್: ಅವನೂ ಬೇಡ- ಅಪ್ಪ ಅಮ್ಮನೂ ಬೇಡ ಎಂದ ಬಾಧಿತ ಹಿಂದೂ ಯುವತಿ
ಗದಗ ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್: ಅವನೂ ಬೇಡ- ಅಪ್ಪಅಮ್ಮನೂ ಬೇಡವೆಂದ ಹಿಂದೂ ಯುವತಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Feb 03, 2024 | 9:59 AM

Share

ಗದಗ, ಫೆಬ್ರವರಿ 3: 19 ವರ್ಷದ ಹಿಂದೂ (Hindu) ಯುವತಿಯನ್ನು ಲವ್ ಜಿಹಾದ್ ಬಲೆಗೆ (Gadag Love Jihad) ಹಾಕಿ, ಮದುವೆಯಾದ ಮುಸ್ಲಿಂ ಯುವಕ ಅವಳನ್ನು ಕಿಡ್ನಾಪ್ ಮಾಡಿದ್ದ. 15 ದಿನಗಳ‌ ಕಾಲ ಹಿಂದೂ ಯುವತಿ ಹಾಗೂ ಯುವಕ ನಾಪತ್ತೆಯಾಗಿದ್ರು. ಇದೊಂದು ಲವ್ ಜಿಹಾದ್ ಎಂದು ಯುವತಿಯ ಕುಟುಂಬಸ್ಥರ ಗಂಭೀರವಾದ ಆರೋಪ‌ ಮಾಡಿದ್ರು. ಹೀಗಾಗಿ ಪೊಲೀಸರು ಎಚ್ಚತ್ತುಕೊಂಡು ಯುವತಿಯರನ್ನು ಪತ್ತೆ ಮಾಡಿ, ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಆದ್ರೆ, ಯುವತಿಯ ಸ್ಟೇಟ್ಮೆಂಟ್ ಕೇಳಿ ಪೊಲೀಸರೆ (Betageri Police) ಬೆಚ್ಚಿಬಿದ್ದಿದ್ದಾರೆ‌. ಲವ್ ಜಿಹಾದ್ ಕೇಸ್ (Muslim)ಮತ್ತೆ ಕಗ್ಗಂಟಾಗಿ ಉಳಿದುಕೊಂಡಿದೆ. ಮುಂದೆ ಯಾವ ತಿರುವು ಪಡೆದುಕೊಳ್ಳುತ್ತೇ ಕಾದು ನೋಡ್ಬೇಕು.

ಎಸ್… ಗದಗ ಜಿಲ್ಲೆಯಲ್ಲಿ ಆಗಾಗ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರ್ತಾಯಿವೆ. ಇದೇ ಜನವರಿ 16 ರಂದು ಗದಗ ಬೆಟಗೇರಿಯ ಮಂಜುನಾಥ ನಗರದ ನಿವಾಸಿಯಾದ 19 ವರ್ಷದ ಕಾವ್ಯ ಎನ್ನುವ ಯುವತಿ ಕಿಡ್ನಾಪ್ ಆಗಿದ್ಲು. ಯುವತಿ ಎದುರು ಮನೆಯಲ್ಲಿದ್ದ ಮುಸ್ಲಿಂ ಯುವಕ ಅಮೀರ್ ಎನ್ನುವಾತ ತನ್ನ ಪ್ರೀತಿಯ ಬಲೆಗೆ ಕೆಡವಿ ಕಿಡ್ನಾಪ್ ಮಾಡಿದ್ದಾನೆ ಎಂದು ಯುವತಿ ಪೋಷಕರು ಆರೋಪ ಮಾಡಿದ್ರು.

ಮಾಧ್ಯಮಗಳಲ್ಲಿ ಲವ್ ಜಿಹಾದ್ ಪ್ರಕರಣ ಸದ್ದು ಮಾಡಿದ ಕೂಡಲೇ ಬೆಟಗೇರಿ ಪೊಲೀಸರು ಎಚ್ಚತ್ತುಕೊಂಡ್ರು. ಜನವರಿ 31 ರಂದು ಕಿಡ್ನಾಪ್ ಆಗಿದ್ದ ಕಾವ್ಯಳನ್ನು ಪತ್ತೆ ಮಾಡಿ, ಬೆಟಗೇರಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಆಗ ಯುವತಿ ಸ್ಟೇಟ್ಮೆಂಟ್ ಕೇಳಿ ಅಕ್ಷರಶಃ ಪೊಲೀಸರೆ ಬೆಚ್ಚಬಿದ್ದಿದ್ದಾರೆ‌.

ಇದನ್ನೂ ಓದಿ:  ಗದಗದಲ್ಲಿ ಲವ್ ಜಿಹಾದ್ ಬೆಳಕಿಗೆ: ವಿವಾಹಿತ ಮುಸ್ಲಿಂ ಯುವಕನ ಮೋಸದ ಜಾಲಕ್ಕೆ ಬಿದ್ದ ಹಿಂದೂ ಯುವತಿ

ಹೌದು ನಾನು ಅಮೀರ್ ನ್ನು ಪ್ರೀತಿ ಮಾಡ್ತಾಯಿದ್ದೇನೆ, ಯಾವುದೇ ಲವ್ ಜಿಹಾದ್ ಇಲ್ಲಾ. ನಾನೇ ಅವನನ್ನು ಪ್ರೀತಿ ಮಾಡುತ್ತಿದ್ದೇನೆ, ಅವನಿಗೆ ಈಗಾಲೇ ಮದುವೆಯಾಗಿರೋದು ನನಗೆ ಗೊತ್ತಿದೆ. ಹೀಗಾಗಿ ಅವನ ಜೊತೆಗೆ ಹೋಗಿದ್ದೆ, ನಾನು ಈವರೆಗೆ ಮದುವೆಯಾಗಿಲ್ಲಾ ಎಂದು ಕಾವ್ಯ ಸ್ಪಷ್ಟಪಡಿಸಿದ್ದಾಳೆ.

ಆದ್ರೂ ಈಗ ಕಾವ್ಯ ಮುಸ್ಲಿಂ ಯುವಕನ ಜೊತೆಗೆ ಹೋಗಲು ನಿರಾಕರಣೆ ಮಾಡಿದ್ದಾಳೆ. ಪೋಷಕರ ಜೊತೆಗೆ ಹೋಗಲು ಒಪ್ಪಿಲ್ಲ. ಹೀಗಾಗಿ ಯುವತಿಯನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. 15 ದಿನಗಳ ನಂತರ ತನ್ನ ನಿರ್ಧಾರವನ್ನು ಹೇಳುತ್ತೇನೆ ಅಂತಾನೂ ತಿಳಿಸಿದ್ದಾಳೆ. ಇನ್ನು ಪ್ರಕರಣವನ್ನು ತನಿಖೆ ಮಾಡಲಾಗುತ್ತಿದೆ ಅಂತಾ ಗದಗ ಎಸ್ಪಿ ಬಿ ಎಸ್ ನೇಮಕಗೌಡ ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸಿದರೆ ನಮ್ಮ ಮಕ್ಕಳೂ ಲೆಹೆಂಗಾ ಧರಿಸಿ ಶಾಲೆಗೆ ಬರ್ತಾರೆ: ಬಿಜೆಪಿ ಶಾಸಕ

ಮುಸ್ಲಿಂ ಯುವಕ ಅಮೀರ್ ಈಗಾಗಲೇ ಒಂದು ಮದುವೆಯಾಗಿದ್ದಾನೆ. ಹಾಗೇ ಮೂರ್ನಾಲು ಹಿಂದೂ ಯುವತಿಯರ ಜೊತೆಗೆ ಪ್ರೀತಿ ಪ್ರೇಮ ಅಂತಾ ನಾಟಕ ಮಾಡ್ತಾಯಿದ್ದಾನಂತೆ. ಈ ವಾಗ ಮುಗ್ದ 19 ವರ್ಷದ ಯುವತಿಯ ಜೊತೆಗೆ ಪ್ರೀತಿ ಪ್ರೇಮ ಅಂತಾ ಹೇಳಿ ಅವಳನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ಮುಂದಾಗಿದ್ದಾನೆ ಎಂದು ಪೋಷಕರು ಆರೋಪ ಮಾಡಿದ್ದಾರೆ.

ಸಗದಗ ಜಿಲ್ಲೆಯಲ್ಲಿ ಇಂಥ ಪ್ರಕರಣಗಳು ಪದೇ ಪದೇ ನಡೆಯುತ್ತಿವೆ. ಹೀಗಾಗಿ ಗದಗ ಜಿಲ್ಲೆಯಲ್ಲಿ ಲವ್ ಜಿಹಾದ್ ವ್ಯವಸ್ಥಿತವಾಗಿ ನಡೆಯುತ್ತಿದೆಯಾ ಅನ್ನೋ ಅನುಮಾನ ಕಾಡ್ತಾಯಿದೆ. ಇನ್ನೂ ಶ್ರೀರಾಮ ಸೇನೆ ಸಂಘಟನೆ ಮುಖಂಡರು ಇದೊಂದು ಲವ್ ಜಿಹಾದ್ ಪ್ರಕರಣ ಅಂತಿದೆ. ಹೀಗಾಗಿ ಇಡೀ ಪ್ರಕರಣ ಸಂಪೂರ್ಣ ತನಿಖೆ ನಡೆದಾಗ ಮಾತ್ರ ಇಲ್ಲಿ ಲವ್ ಜಿಹಾದ್ ನಡೆದಿದೆಯೋ ಅಥವಾ ಬೇರೆ ಕಾರಣವೋ ಅನ್ನೋದು ಗೊತ್ತಾಲಿದೆ.

Published On - 9:58 am, Sat, 3 February 24

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!