ಗದಗ: ಲವ್ ಜಿಹಾದ್​ಗೆ ಬಲಿಯಾಗದಂತೆ 200 ಯುವತಿಯರಿಗೆ ಆಣೆ ಪ್ರಮಾಣ

ಲವ್ ಜಿಹಾದ್ ಆತಂಕ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಆಣೆ ಪ್ರಮಾಣ ಮಾಡಿಸಿದ್ದಾರೆ. ಗದಗದಲ್ಲಿ ಸುಮಾರು 200 ಯುವತಿಯರಿಗೆ ಅನ್ಯ ಧರ್ಮಿ ಯುವಕರ ಲವ್ ಜಿಹಾದ್​ಗೆ ಬಲಿಯಾಗದಂತೆ ದೇವರ ಮೇಲೆ ಆಣೆ ಪ್ರಮಾಣ ಮಾಡಿಸಲಾಗಿದೆ.

ಗದಗ: ಲವ್ ಜಿಹಾದ್​ಗೆ ಬಲಿಯಾಗದಂತೆ 200 ಯುವತಿಯರಿಗೆ ಆಣೆ ಪ್ರಮಾಣ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Nov 26, 2023 | 1:17 PM

ಗದಗ, (ನವೆಂಬರ್ 26): ಲವ್ ಜಿಹಾದ್ ಆತಂಕ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಆಣೆ ಪ್ರಮಾಣ ಮಾಡಿಸಿದ್ದಾರೆ. ಶ್ರೀ ಸಹಸ್ರಾರ್ಜುನ ಮಹಾರಾಜರ ಜಯಂತೋತ್ಸವದ ಇಂದು(ನವೆಂಬರ್ 26) ಗದಗ ನಗರದ ವಿಠ್ಠಲ ರೂಢಮಠದಲ್ಲಿ ಜಾಗೃತಿ ಸಭೆಯಲ್ಲಿ ಲವ್​ ಜಿಹಾದ್​ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಇದೇ ವೇಳೆ ಪೋಷಕರು ಸುಮಾರು 200 ಯುವತಿಯರಿಗೆ ಅನ್ಯ ಧರ್ಮಿ ಯುವಕರ ಲವ್ ಜಿಹಾದ್​ಗೆ ಬಲಿಯಾಗದಂತೆ ದೇವರ ಮೇಲೆ ಆಣೆ ಪ್ರಮಾಣ ಮಾಡಿಸಿದರು.

ಲವ್ ಜಿಹಾದ್ ತಡೆಗೆ ವಿಹಿಂಪದಿಂದ ಸಹಾಯವಾಣಿ

ದೇಶಾದ್ಯಂತ ಲವ್ ಜಿಹಾದ್ (Love Jihad) ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರಿಂದ ಹಿಂದೂ ಹೆಣ್ಣುಮಕ್ಕಳನ್ನು ರಕ್ಷಿಸಬೇಕು ಎಂಬ ಕೂಗು ಹಿಂದು ಸಂಘಟನೆಗಳಿಂದ, ಹಿಂದುವಾದಿಗಳಿಂದ ಕೇಳಿಬರುತ್ತಿರುವ ಬೆನ್ನಲ್ಲೇ ಇದರ ತಡೆಗೆ ವಿಶ್ವ ಹಿಂದೂ ಪರಿಷತ್‌ ವತಿಯಿಂದ ಹೆಲ್ಪ್‌ಲೈನ್ ಆರಂಭ ಮಾಡಲಾಗಿದೆ. ಮಂಗಳೂರಿನಲ್ಲಿ ವಿಶ್ವ ಹಿಂದು ಪರಿಷತ್‌ ಸಹಾಯವಾಣಿಯನ್ನು ಪ್ರಾರಂಭ ಮಾಡಿದ್ದು, ಲವ್ ಜಿಹಾದ್ ಮುಕ್ತ ಸಮಾಜ ನಮ್ಮ ಗುರಿ ಎಂದು ಸ್ಲೋಗನ್ ಅನ್ನು ಸಹ ಹಾಕಿಕೊಳ್ಳಲಾಗಿದೆ.

ಲವ್ ಜಿಹಾದ್‌ಗೆ ಬಲಿಯಾಗುತ್ತಿರುವ ಸಹೋದರಿಯರ ರಕ್ಷಣೆಗೆ “ಲವ್‌ ಜಿಹಾದ್‌ ಹೆಲ್ಪ್‌ಲೈನ್‌” ಆರಂಭ ಮಾಡಿದ್ದು, ಮೊಬೈಲ್‌ ನಂಬರ್‌: 9148658108 ಗೆ ಕರೆ ಹಾಗೂ 9591658108 ಗೆ ವಾಟ್ಸ್‌ಆ್ಯಪ್‌ನಲ್ಲಿ ಸಿಲುಕಿದವರ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

ಅನ್ಯ ಕೋಮಿನವರ ಜತೆ ಸಂಪರ್ಕದಲ್ಲಿರುವ ಯುವತಿಯರ ಫೋಟೊ ಸಹಿತ ವಿವರಗಳನ್ನೊಳಗೊಂಡ ಮಾಹಿತಿಯನ್ನು ವಾಟ್ಸ್‌ಆ್ಯಪ್‌ಗೆ ಕಳುಹಿಸುವಂತೆ ಇಲ್ಲವೇ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಲಾಗಿದೆ. ಒಂದು ವೇಳೆ ಬ್ಲ್ಯಾಕ್‌ಮೇಲ್‌ಗೆ ಒಳಗಾದವರು ಸಹ ಕರೆ ಮಾಡಿ ವಿವರಣೆ ನೀಡಬಹುದಾಗಿದ್ದು, ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡಲಾಗಿದೆ. ಇಮೇಲ್‌ – antilovejihadmlr@gmail.com ಗೂ ಮಾಹಿತಿ ನೀಡುವಂತೆ ಪೋಸ್ಟರ್‌ನಲ್ಲಿ ಹೇಳಲಾಗಿದೆ.

ಪ್ರೀತಿ-ಪ್ರೇಮದ ಹೆಸರಿನಲ್ಲಿ ಮೋಸ

ಮುಸ್ಲಿಂ ಯುವಕರು ಹಿಂದೂ ಅಥವಾ ಅನ್ಯಧರ್ಮೀಯ ಯುವತಿಯರನ್ನು ಪ್ರೀತಿ ಪ್ರೇಮದ ಹೆಸರಲ್ಲಿ ನಂಬಿಸಿ, ಬಳಿಕ ಆಕೆಯನ್ನು ಮತಾಂತರ ಮಾಡುವುದನ್ನು ಲವ್ ಜಿಹಾದ್ ಎಂದು ಬಲಪಂಥೀಯ ಸಂಘಟನೆಗಳು ವ್ಯಾಖ್ಯಾನಿಸಿವೆ. ಕೆಲ ಮುಸ್ಲಿಂ ಯುವಕರು ಉದ್ದೇಶಪೂರ್ವಕವಾಗಿಯೇ ಹಿಂದೂ ಯುವತಿಯರನ್ನು ಪ್ರೇಮದ ಬಲೆಯಲ್ಲಿ ಬೀಳಿಸಿಕೊಂಡು ಬಳಿಕ ಮೋಸ ಮಾಡಿರುವ ಸಾಕಷ್ಟು ಉದಾಹರಣೆಗಳು ಇವೆ. ಇನ್ನು ಕೆಲವರು ಹಿಂದೂ ಯುವತಿಯರನ್ನು ಮದುವೆಯಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿಕೊಂಡಿದ್ದಾರೆ.

ಅಲ್ಲದೇ ಕೆಲವರು ಹಿಂದೂ ಧರ್ಮದ ಯುವತಿಯರನ್ನು ಮದುವೆಯಾಗಿ ಬಳಿಕ ಕೈಕೊಟ್ಟಿರುವ ಪ್ರಕರಣಗಳು ಸಹ ಕಂಡುಬಂದಿವೆ. ಹೀಗಾಗಿ ಹಿಂದೂ ಸಂಘಟನೆಗಳು ಲವ್ ಜಿಹಾದ್​ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು