AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಆರೋಗ್ಯ ಇಲಾಖೆಯಲ್ಲಿ ಭಾರಿ ಹಗರಣ! ಟಿವಿ9 ಎದುರು ಗೋಳು ತೋಡಿಕೊಂಡ ಸಿಬ್ಬಂದಿ

ಆಡಳಿತ ವೈದ್ಯಾಧಿಕಾರಿ ಕೀರ್ತಿಹಾಸ್ ಮತ್ತು ಎಫ್​ಡಿಸಿಎಸ್ಆರ್ ಶಿಂಧೆ ವಿರುದ್ಧ ಆರೋಪಿಸಿರುವ ಆಸ್ಪತ್ರೆ ಸಿಬ್ಬಂದಿ ನಾಲ್ಕು ವರ್ಷಗಳಿಂದ ಆರೋಗ್ಯ ಸಿಬ್ಬಂದಿಗೆ ಬಂದ ಲಕ್ಷಾಂತರ ಇನ್ಸೆಂಟಿವ್ ಹಣವನ್ನು ಗುಳುಂ ಮಾಡಿದ್ದಾರೆ ಎಂದಿದ್ದಾರೆ.

ಗದಗ ಆರೋಗ್ಯ ಇಲಾಖೆಯಲ್ಲಿ ಭಾರಿ ಹಗರಣ! ಟಿವಿ9 ಎದುರು ಗೋಳು ತೋಡಿಕೊಂಡ ಸಿಬ್ಬಂದಿ
ಮುಂಡರಗಿ ತಾಲೂಕು ಆಸ್ಪತ್ರೆ ಸಿಬ್ಬಂದಿ, ಆಡಳಿತ ವೈದ್ಯಾಧಿಕಾರಿ ಡಾ. ಕೀರ್ತಿಹಾಸ್
TV9 Web
| Edited By: |

Updated on:Jun 08, 2022 | 9:19 AM

Share

ಗದಗ: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕನಸಿನ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಭಾರಿ ಹಗರಣ (Scam) ನಡೆದಿರುವ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕು ಆಸ್ಪತ್ರೆಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಆಸ್ಪತ್ರೆ ಸಿಬ್ಬಂದಿ ಟಿವಿ9 ಎದುರು ಗೋಳು ತೋಡಿಕೊಂಡಿದ್ದಾರೆ. ಜೊತೆಗೆ ಆಡಳಿತ ವೈದ್ಯಾಧಿಕಾರಿ ಕೀರ್ತಿಹಾಸ್ ವಿರುದ್ಧ ಸಿಬ್ಬಂದಿ ನೇರ ಆರೋಪ ಮಾಡಿದೆ. ಕೇಂದ್ರ ಸರ್ಕಾರ ಹಣ ನೀಡಿದರೂ ಸಿಬ್ಬಂದಿಗೆ ಒಂದು ಪೈಸೆ ನೀಡಿಲ್ಲ ಎಂದು ಆಡಳಿತ ವೈದ್ಯಾಧಿಕಾರಿ ವಿರುದ್ಧ ಗರಂ ಆಗಿದ್ದಾರೆ.

ಆಡಳಿತ ವೈದ್ಯಾಧಿಕಾರಿ ಡಾ. ಕೀರ್ತಿಹಾಸ್ ಮತ್ತು ಎಫ್​ಡಿಸಿಎಸ್ಆರ್ ಶಿಂಧೆ ವಿರುದ್ಧ ಆರೋಪಿಸಿರುವ ಆಸ್ಪತ್ರೆ ಸಿಬ್ಬಂದಿ ನಾಲ್ಕು ವರ್ಷಗಳಿಂದ ಆರೋಗ್ಯ ಸಿಬ್ಬಂದಿಗೆ ಬಂದ ಲಕ್ಷಾಂತರ ಇನ್ಸೆಂಟಿವ್ ಹಣವನ್ನು ಗುಳುಂ ಮಾಡಿದ್ದಾರೆ ಎಂದಿದ್ದಾರೆ. ಸಿಬ್ಬಂದಿಗಳು ಇನ್ಸೆಂಟಿವ್ ಹಣವನ್ನು ಹಲವಾರು ಬಾರಿ ಕೇಳಿದರೂ ಕೊಡುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಇಷ್ಟೊಂದು ದೊಡ್ಡ ಹಗರಣ ನಡೆದರೂ ಜಿಲ್ಲಾಡಳಿತ ಮಾತ್ರ ಯಾವ ಕ್ರಮಕ್ಕೆ ಮುಂದಾಗಿಲ್ಲ. ಡಿಸಿ ಸುಂದರೇಶಬಾಬು, ಜಿಲ್ಲಾ ಪಂಚಾಯತಿ ಸಿಇಓ ಡಾ. ಸುಶೀಲಾ ಮೌನವಾಗಿರುವುದು ಹತ್ತಾರು ಅನುಮಾನಕ್ಕೆ ಕಾರಣವಾಗಿದೆ ಎಂದು ಸಿಬ್ಬಂದಿ ಸಿಡಿದೆದ್ದಿದ್ದಾರೆ.

ಇದನ್ನೂ ಓದಿ
Image
Petrol Price Today: ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ನೋಡಿ
Image
ಬರಗೂರು ರಾಮಚಂದ್ರಪ್ಪ ಸಮಿತಿ ಎಡವಟ್ಟು ಬಯಲು: ವೀರ ಯೋಧನ ಪಠ್ಯಕ್ಕೆ ಕೊಕ್
Image
ನಿಮ್ಮ ಉಗುರುಗಳನ್ನು ಆರೋಗ್ಯಕರವಾಗಿಡಲು 5 ಮಾರ್ಗಗಳು ಇಲ್ಲಿವೆ
Image
RRR: ಹಾಲಿವುಡ್​​ ಜನಪ್ರಿಯ ಬರಹಗಾರನಿಂದ ‘ಆರ್​ಆರ್​ಆರ್​​’ಗೆ ಶಹಬ್ಬಾಸ್​ಗಿರಿ; ಚಿತ್ರ ನೋಡಿ ಹೇಳಿದ್ದೇನು ಗೊತ್ತಾ?

ಇದನ್ನೂ ಓದಿ: ಒಂದೇ ಮನೆಯ ಅಣ್ಣ-ತಮ್ಮಂದಿರನ್ನು ಮದುವೆಯಾಗಿದ್ದ ಮೂವರು ಸೋದರಿಯರು ಒಟ್ಟಿಗೇ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಅಧಿಕಾರಿ ಹಣದ ದಾಹಕ್ಕೆ ಬಲಿಯಾದ ನೌಕರರು: ಇನ್ನು ಏನೂ ತಪ್ಪು ಮಾಡದಿದ್ರೂ ನೌಕರಿ ಕಳೆದುಕೊಂಡು ಹೊರಗುತ್ತಿಗೆ ನೌಕರರು ಗೋಳಾಡುತ್ತಿದ್ದಾರೆ. ಆರು ತಿಂಗಳ ಸಂಬಳವೂ ನೀಡದೇ ಏಕಾಏಕಿ ಸೇವೆಯಿಂದ ತೆಗೆದುಹಾಕಿದ ಡಿಹೆಚ್ಓ ವಿರುದ್ಧ ನೌಕರರ ಆಕ್ರೋಶ ಹೊರ ಹಾಕಿದ್ದಾರೆ. ನ್ಯಾಯಕ್ಕಾಗಿ ಡಿಸಿ, ಸಿಇಓ, ಕಾರ್ಮಿಕ ಇಲಾಖೆ ಕಚೇರಿ ಅಲೆದಾಡಿ ಬೇಡಿಕೊಂಡ್ರು ನ್ಯಾಯ ಸಿಗದೇ ರೋಸಿಹೋಗಿದ್ದಾರೆ. ಗದಗ ಜಿಲ್ಲಾಡಳಿತ ಭವನದಲ್ಲಿ ಗದಗ ಆರೋಗ್ಯ ಇಲಾಖೆಯಲ್ಲಿ ಸೇವೆ ಮಾಡಿದ ಹೊರಗುತ್ತಿಗೆ ನೌಕರರು ಲಂಚಬಾಕ ಡಿಎಚ್ಓ ಡಾ. ಜಗದೀಶ್ ನುಚ್ಚಿನ್ ಹಣದ ದಾಹಕ್ಕೆ ಬಲಿಯಾಗಿದ್ದಾರೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:07 am, Wed, 8 June 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ