ನಿರಪೇಕ್ಷಣಾ ಪತ್ರ ಪಡೆಯದೆ ಫಾರಂ ನಂ.3 ವಿತರಣೆ ಆರೋಪ: ನಗರಸಭೆ ಕಂದಾಯ ಅಧಿಕಾರಿ ಸಸ್ಪೆಂಡ್ ಮಾಡಿ ಡಿಸಿ ಆದೇಶ

ನಿಯಮಬಾಹಿರವಾಗಿ 1063 ನಿವೇಶನಗಳಿಗೆ ಫಾರಂ ನಂ.3 ವಿತರಿಸಿ ಕರ್ತವ್ಯ ಲೋಪವೆಸಗಿದ ಗದಗ ಬೆಟಗೇರಿ ನಗರಸಭೆಯ ಕಂದಾಯ ಅಧಿಕಾರಿ ಮಹೇಶ ಹಡಪದರನ್ನು ಅಮಾನತು ಮಾಡಿ ಡಿಸಿ ಎಂ.ಎನ್​.ವೈಶಾಲಿ ಆದೇಶ ಹೊರಡಿಸಿದ್ದಾರೆ.

ನಿರಪೇಕ್ಷಣಾ ಪತ್ರ ಪಡೆಯದೆ ಫಾರಂ ನಂ.3 ವಿತರಣೆ ಆರೋಪ: ನಗರಸಭೆ ಕಂದಾಯ ಅಧಿಕಾರಿ ಸಸ್ಪೆಂಡ್ ಮಾಡಿ ಡಿಸಿ ಆದೇಶ
ಅಮಾನತುಗೊಳಗಾದ ನಗರಸಭೆ ಕಂದಾಯ ಅಧಿಕಾರಿ ಮಹೇಶ ಹಡಪದ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 29, 2023 | 8:41 PM

ಗದಗ, ಜುಲೈ 29: ಸಾರ್ವಜನಿಕರಿಗೆ ನಿರಪೇಕ್ಷಣಾ ಪತ್ರ ಪಡೆಯದೆ ಫಾರ್ಮ್ ನಂ 3 ವಿತರಣೆಯಲ್ಲಿ ವಿಳಂಬ ಹಾಗೂ ಕರ್ತವ್ಯ ಲೋಪ ಎಸಗಿದ ನಗರಸಭೆ ಕಂದಾಯ ಅಧಿಕಾರಿಯನ್ನು ಅಮಾನತು ಮಾಡಿ ಗದಗ ಡಿಸಿ ವೈಶಾಲಿ ಎಂ.ಎಲ್​ ಆದೇಶ ಹೊರಡಿಸಿದ್ದಾರೆ. ಮಹೇಶ ಹಡಪದ (Mahesh Hadapada) ಅಮಾನತ್ತಾದ ಅಧಿಕಾರಿ. ಏಪ್ರಿಲ್​ 01, 2023ರಿಂದ ಜುಲೈ 13 ರವರೆಗೆ ನಗರಸಭೆಯಿಂದ ಒಟ್ಟು 3148 ಫಾರ್ಮ್ ನಂ.3 ವಿತರಿಸಲಾಗಿದೆ ಎಂದು ಸಾರ್ವಜನಿಕರ ದೂರಿದ್ದರು.

ರಿಜಿಸ್ಟರ್​ ಸಂಖ್ಯೆ ನಂಬರ್​​ 862+863-864 ವಸತಿ ವಿನ್ಯಾಸದಲ್ಲಿ 979 ಹಾಗೂ ಇನ್ನುಳಿದ ಬೇರೆ ಬೇರೆ ನಿವೇಶನ ಸೇರಿದಂತೆ ಒಟ್ಟು 1063 ಫಾರ್ಮ್ ನಂ.3 ವಿತರಣೆ ಮಾಡಲಾಗಿದೆ. ಆದರೆ ಇದರಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪೂರ್ಣ ಪ್ರಮಾಣದ ನಿವೇಶನ ಅಭಿವೃದ್ಧಿ ಹೊಂದಿದ ಬಗ್ಗೆ ನಿರಪೇಕ್ಷಣಾ ಪತ್ರ ಪಡೆಯದೇ ಕಂದಾಯ ಅಧಿಕಾರಿ ಮಹೇಶ್ ಹಡಪದ ಫಾರ್ಮ್ ನಂ.3 ವಿತರಣೆ ಮಾಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ್​ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Gadag News: ಬಿಂಕದಕಟ್ಟಿ ಮೃಗಾಲಯಕ್ಕೆ ಬಸ್ ಸೇವೆ: ಸಚಿವ ಎಚ್​ಕೆ ಪಾಟೀಲ್​​ ಚಾಲನೆ

ನಗರಸಭೆ ಸದಸ್ಯರಾದ ಬರಕತ್ ಅಲಿ ಮುಲ್ಲಾ ಹಾಗೂ ಲಕ್ಷ್ಮಿ ಅನಿಲಕುಮಾರ್ ಸಿದ್ದಮ್ಮನಹಳ್ಳಿ ಅವರ ದೂರಿನ ಮೇರೆಗೆ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ್ ತನಿಖೆ ಮಾಡಿ ವರದಿ ಸಲ್ಲಿಸಿದ್ದರು.

ಇದನ್ನೂ ಓದಿ: Gadag News: ನಿರಂತರ ಮಳೆಗೆ ಹೂವಿನ ತೋಟಗಳು ಸಂಪೂರ್ಣ‌ ಹಾಳು; ಬಾಡಿದ ರೈತನ ಬದುಕು

ಅಪರ ಜಿಲ್ಲಾಧಿಕಾರಿಗಳ ವರದಿ ಆಧಾರಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ