AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟ್‌ಟೈಮ್ ಜಾಬ್ ಆಫರ್ ನಂಬಿ 39 ಲಕ್ಷ ರೂ ಕಳೆದುಕೊಂಡ ಇಂಜಿನಿಯರ್!

Gadag News: ಪಾರ್ಟ್‌ಟೈಮ್ ಜಾಬ್ ಆಫರ್‌ನ ಮೆಸೇಜ್ ನಂಬಿ ಇಂಜಿನಿಯರ್ ಒಬ್ಬರು ಬರೋಬ್ಬರಿ 39 ಲಕ್ಷದ 15 ಸಾವಿರ ರೂ.ಗಳನ್ನು ಕಳೆದುಕೊಂಡು ಮೋಸ ಹೊಗಿರುವಂತಹ ಘಟನೆ ಗದಗ ನಗರದಲ್ಲಿ ಕಂಡುಬಂದಿದೆ. ಅಲ್ಲಿಗೆ ಅನಕ್ಷರಸ್ಥ ಜನರು ಮೋಸಹೋಗಬಹುದು ಮಾತ್ರವಲ್ಲದೇ ಅಕ್ಷರಸ್ಥರು ಕೂಡ ಮೋಸ ಹೋಗುತ್ತಿರುವುದು ವಿಪರ್ಯಾಸವೇ ಸರಿ.

ಪಾರ್ಟ್‌ಟೈಮ್ ಜಾಬ್ ಆಫರ್ ನಂಬಿ 39 ಲಕ್ಷ ರೂ ಕಳೆದುಕೊಂಡ ಇಂಜಿನಿಯರ್!
ಪ್ರಾತಿನಿಧಿಕ ಚಿತ್ರ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Aug 14, 2023 | 3:07 PM

Share

ಗದಗ ಆಗಸ್ಟ್​ 14: ಸೈಬರ್ ಕ್ರೈಮ್ (cybercrime) ಪೊಲೀಸರು, ಜಿಲ್ಲಾ ಪೊಲೀಸ್ ಇಲಾಖೆ ಸಾಕಷ್ಟು ಸಲ ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡುತ್ತಿದ್ದರೂ ಮತ್ತೆ ಮತ್ತೆ ಜನರು ಮೋಸ ಹೋಗುತ್ತಿರುವ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಅನಕ್ಷರಸ್ಥ ಜನರು ಮೋಸಹೋಗಬಹುದು. ಆದರೆ ಅಕ್ಷರ ಜ್ಞಾನ ಹೊಂದಿದವರೇ ಮೋಸ ಹೋಗುತ್ತಿರುವುದು ವಿಪರ್ಯಾಸವೇ ಸರಿ. ಈಗಿನ ಕಾಲದಲ್ಲಿ ದುಡಿದ ಹಣವೇ ಸರಿಯಾಗಿ ಸಿಗುವುದು ಕಷ್ಟ. ಹೀಗಿದ್ದರೂ ತುರ್ತಾಗಿ ಹಣ ಗಳಿಸುವ ದುರಾಸೆಗೆ ಬಿದ್ದು ಹಣ ಕಳೆದಕೊಳ್ಳವವರ ಸಂಖ್ಯೆ ಕಡಿಮೆ ಇಲ್ಲ.

ಇಲ್ಲೊಂದು ಪ್ರಕರಣದಲ್ಲಿ ಮಿಸ್ ಆನಿಕಾ ಎಂಬವರು ಕಳುಹಿಸಿದ ಪಾರ್ಟ್‌ಟೈಮ್ ಜಾಬ್ ಆಫರ್‌ನ ಮೆಸೇಜ್ ನಂಬಿ ಇಂಜಿನಿಯರ್ ಒಬ್ಬರು ಬರೋಬ್ಬರಿ 39 ಲಕ್ಷದ 15 ಸಾವಿರ ರೂ.ಗಳನ್ನು ಕಳೆದುಕೊಂಡು ಮೋಸಕ್ಕೆ ಒಳಗಾಗಿದ್ದಾರೆ.

ಗದಗ ಶಹರದ ಹುಡ್ಕೋ ಕಾಲೋನಿಯ ಸಂದೀಪ ತಂದೆ ರಂಗನಗೌಡ ಪಾಟೀಲ ಎಂಬ ಇಂಜಿನಿಯರ್ ಆಗಸ್ಟ್ 4ರಿಂದ 8ರವರೆಗೆ ತಮಗೆ 9593989404 ಈ ನಂಬರ್‌ನಿಂದ ಮಿಸ್ ಆನಿಕಾ ಎಂಬುವರು ವಾಟ್ಸ್‌ಅಪ್‌ನಲ್ಲಿ ಪಾರ್ಟ್‌ಟೈಮ್ ಜಾಬ್ ಆಫರ್‌ನ ಮೆಸೇಜ್ ಕಳುಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಸ್ಪಂದನಾ ವಿಜಯ್‌ ಬೆನ್ನಲ್ಲೇ ಹೃದಯಾಘಾತದಿಂದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು

ನಂತರ ಲಿಯಾ @Lia9913, ಕಿರಣರಾವ್@KiranRao01231311 ನತಾಶಾ@NT13454 ಮತ್ತು ಕಿಶೋರ್ @Kishore55031 ಎಂಬುವರು ವಿವಿಧ ಟಾಸ್ಕ್​ಗಳನ್ನು ಕೊಟ್ಟು 20ಲಕ್ಷದ 24ಸಾವಿರದ, 800ರೂ.ಗಳನ್ನು ಅಕೌಂಟ್‌ನಲ್ಲಿ ಹಾಕಿ ಆಶೆ ಹುಟ್ಟಿಸಿದ್ದಾರೆ.

ಆ ಹಣ ವಿತ್‌ಡ್ರಾ ಮಾಡಲು ಹೋದಾಗ ಅಕೌಂಟ್ ತಡೆಹಿಡಿದು ಅನ್ಪ್ರೀಜ್ ಮಾಡಲು ಹಂತ-ಹಂತವಾಗಿ 39ಲಕ್ಷ, 15 ಸಾವಿರಗಳನ್ನು ಹಾಕಿಸಿಕೊಂಡು ಇನ್ನೂ ಐದು ಲಕ್ಷ ರೂ. ಹಾಕಬೇಕು ಎಂದು ಮೆಸೇಜ್ ಕಳುಹಿಸಿ ಮೋಸ ಮಾಡಿದ್ದಾರೆ.

ಈ ಕುರಿತು ಇಂಜಿನಿಯರ್ ಸಂದೀಪ್ ತಂದೆ ರಂಗನಗೌಡ ಪಾಟೀಲ ಸಿಇಎನ್ ಠಾಣೆಗೆ ದೂರು ನೀಡಿದ್ದು, 0061/2023 ಮಾಹಿತಿ ತಂತ್ರಜ್ಞಾನ ಕಾಯ್ದೆ 2008(U/s-66(D))ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಗಾಹಕರನ್ನು ವಂಚಿಸಿ ನಕಲಿ ಚಿನ್ನ ಮಾರಾಟ

ಕೊಪ್ಪಳ: ಬಂಗಾರ ಮಾರಾಟದ ನೆಪದಲ್ಲಿ ಬಂದ ಮಹಿಳೆ ಈ ನಕಲಿ ಚಿನ್ನ ಮಾರಾಟ ಮಾಡಿ‌ ಯಾಮಾರಿಸಿರುವಂತಹ ಘಟನೆ ಇತ್ತೀಚೆಗೆ ಕೊಪ್ಪಳ ನಗರದಲ್ಲಿ ಆಗಸ್ಟ್‌ 3 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೊಪ್ಪಳದ ನಾಗರತ್ನ ಅಳವಂಡಿ,‌ ಎಂ.ಸುನೀತ ವಂಚನೆಗೆ ಒಳಗಾದವರು. ಹಣ ಕಳೆದುಕೊಂಡ ನಾಗರತ್ನ ಅವರು ಕಳೆದ 4 ದಿನದ ಹಿಂದೆಯೇ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ.

ಈ ಹಿನ್ನೆಲೆ ಈ ವಂಚಕ ಗ್ಯಾಂಗ್​ಗೆ ಜ್ಯುವೆಲರಿ ಶಾಪ್ ಮಾಲೀಕರು ಮತ್ತು ಪೊಲೀಸ್ ಇಲಾಖೆಯ ಕೆಲವರ ಪರೋಕ್ಷ ಬೆಂಬಲ ಇದೆ ಎಂದು ನಾಗರತ್ನ ಆರೋಪಿಸಿದ್ದಾರೆ.

ಇದನ್ನೂ ಓದಿ: ಎಂಡಿಎಂಎ ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರ ಬಂಧನ

ಕಳೆದ ಆಗಸ್ಟ್​ 3 ರಂದು ನಾಗರತ್ನ, ಕೊಪ್ಪಳದ ಜವಾಹರ್ ರಸ್ತೆಯಲ್ಲಿನ ಸಿ.ಜೆ.ಸೋಮನಾಥ ಜ್ಯುವೆಲರಿ ಅಂಗಡಿ ಚಿನ್ನ ಖರೀದಿಗೆ ಹೋಗಿದ್ದಾರೆ. ಈ ವೇಳೆ ಅದೇ ಅಂಗಡಿಗೆ ಬಂದಿರುವ ಮಹಿಳೆ ಯೊಬ್ಬಳು, ತಮ್ಮ ಬಳಿ ಇದ್ದ ಒಂದಷ್ಟು ಚಿನ್ನದ ಮಾದರಿಯ ವಸ್ತು ತೋರಿಸಿ, ಪರೀಕ್ಷೆ ಮಾಡಿಸಿದ್ದಾರೆ. ಆ ಆಭರಣ ಪರೀಕ್ಷೆ ಮಾಡಿರುವ ಚಿನ್ನದ ವ್ಯಾಪಾರಿ ‘ಇದು 24 ಕ್ಯಾರೇಟ್ ಚಿನ್ನವೇ ಹೌದು. ಆದರೆ, ನಾನು ಇದನ್ನು ಹಣ ಕೊಟ್ಟು ಖರೀದಿ ಮಾಡುವುದಿಲ್ಲ. ಬದಲಾಗಿ ಚಿನ್ನಾಭರಣ ಎಕ್ಸಚೇಂಜ್ ಮಾಡುತ್ತೇನೆ’ ಎಂದಿದ್ದಾರೆ.

ಅಷ್ಟರಲ್ಲೇ ಚಿನ್ನ ಖರೀದಿಗೆ ಹೋಗಿದ್ದ ನಾಗರತ್ನ ಮತ್ತು ಅವರ ಗೆಳತಿ ಕೂಡ ಜ್ಯುವೆಲರಿ ಶಾಪ್​ನಿಂದ ಹೊರಗೆ ಬಂದಿದ್ದು, ವಂಚನೆ ಮಾಡಲು ಬಂದಿದ್ದ ಮಹಿಳೆ ಇವರನ್ನು ಹಿಂಬಾಲಿಸಿದ್ದಾಳೆ. ಇವರನ್ನು ತಡೆದು ನಿಲ್ಲಿಸಿ, ‘ನನ್ನ ಪತಿ ಆಸ್ಪತ್ರೆಯಲ್ಲಿದ್ದು, ನನಗೆ ಹಣದ ತುರ್ತು ಅಗತ್ಯ ಇದೆ. ಒಟ್ಟು 30 ಗ್ರಾಂ. ಇರುವ ಈ ಚಿನ್ನ ಇಟ್ಟುಕೊಂಡು ಕನಿಷ್ಠ 50 ಸಾವಿರ ಹಣ ಕೊಡಿ. ಬಾಕಿ ಹಣ ನಂತರ ಕೊಡುವಂತೆ ಎಂದು ಗೋಗರೆದಿದ್ದಾಳೆ.

ಆಗ ನಾಗರತ್ನ ಅವರು ಬ್ಯಾಕ್​ಗೆ ಕರೆದೊಯ್ದು ಆ ಮಹಿಳಿಗೆ 40 ಸಾವಿರ ಹಣ ರೂ. ನೀಡಿದ್ದಾರೆ.‌ ಮರು ದಿನ ಆ ವಸ್ತುಗಳನ್ನು ಅದೇ ಚಿನ್ನದ ವ್ಯಾಪಾರಿ ಬಳಿ ತಂದು, ಆರಂಭರಣ ಮಾಡುವಂತೆ ಹೇಳಿದ್ದು, ಇವೆಲ್ಲ ಚಿನ್ನ ಅಲ್ಲ ಎಂದು ಹೇಳಿದ್ದಾರೆ.

ವಂಚನೆ ಆಗಿರುವ ಬಗ್ಗೆ ನಾಗರತ್ನ ಆಗಸ್ಟ್ 6 ರಂದು ಕೊಪ್ಪಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ವಂಚನೆ ಮಾಡಿರುವ ಮಹಿಳೆಯ ಚಲನ-ವಲನ ಜ್ಯುವೆಲರಿ ಶಾಪ್​ನಲ್ಲಿ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಪೊಲೀಸರು ಕೂಡಲೇ ಕ್ರಿಯಾಶೀಲರಾಗಿ ವಂಚಕಿಯ ಫೋಟೊ ಸಾರ್ವಜನಿಕ ಸ್ಥಳದಲ್ಲಿ ಅಂಟಿಸುವ ಮೂಲಕ ಮುಂದೆ ಆಕೆ‌ ಮಾಡಬಹುದಾದ ವಂಚನೆ ತಡೆಯಬಹುದಿತ್ತು. ಆದರೆ, ಘಟನೆ ಕುರಿತು ಪೊಲೀರು ನಿರಾಸಕ್ತಿ ತೋರಿಸುತ್ತಿದ್ದು,‌‌ ಅನುಮಾನಕ್ಕೆ ಕಾರಣವಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:06 pm, Mon, 14 August 23

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ