Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಯಿದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಸಚಿವ ಎಚ್​ಕೆ ಪಾಟೀಲ ಚಾಲನೆ

ನಗರದ ಭೀಷ್ಮ ಕೆರೆ ಆವರಣದಲ್ಲಿ ಅಕ್ಟೋಬರ್ 21 ರಿಂದ ನವೆಂಬರ್ 5 ರವರೆಗೆ ಏಳು ವರ್ಷ ಮೇಲ್ಪಟ್ಟ ಮಕ್ಕಳು, ಯುವಕರು ಹಾಗೂ ವಯಸ್ಕರಿಗಾಗಿ ಏರ್ಪಡಿಸಿದ ಹಾಯಿ ದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಚಾಲನೆ ನೀಡಿದ್ದಾರೆ.

ಹಾಯಿದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಸಚಿವ ಎಚ್​ಕೆ ಪಾಟೀಲ ಚಾಲನೆ
ಶಿಬಿರಕ್ಕೆ ಸಚಿವ ಎಚ್.ಕೆ.ಪಾಟೀಲ ಚಾಲನೆ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 21, 2023 | 6:44 PM

ಗದಗ, ಅಕ್ಟೋಬರ್ 21:​​​​ ನಗರದ ಭೀಷ್ಮ ಕೆರೆ ಆವರಣದಲ್ಲಿ ಅಕ್ಟೋಬರ್ 21 ರಿಂದ ನವೆಂಬರ್ 5 ರವರೆಗೆ ಏಳು ವರ್ಷ ಮೇಲ್ಪಟ್ಟ ಮಕ್ಕಳು, ಯುವಕರು ಹಾಗೂ ವಯಸ್ಕರಿಗಾಗಿ ಏರ್ಪಡಿಸಿದ ಹಾಯಿ ದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ (H K Patil) ಅವರು ಚಾಲನೆ ನೀಡಿದ್ದಾರೆ. ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಸ್ಪೋರ್ಟ ಅಸೋಸಿಯೇಷನ್ ಸಹಯೋಗದಲ್ಲಿ ಈ ಹಾಯಿ ದೋಣಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಅಕ್ಟೋಬರ್ 22 ರಿಂದ 26 ರವರೆಗೆ ಮೊದಲ ಹಂತದ ತರಬೇತಿ, ಅಕ್ಟೋಬರ್ 27 ರಿಂದ 31 ರವರೆಗೆ ಎರಡನೇ ಹಂತದ ತರಬೇತಿ, ನವೆಂಬರ್ 1 ರಿಂದ ನವೆಂಬರ್ 5 ರವರೆಗೆ ಮೂರನೇ ಹಂತದ ತರಬೇತಿ ಬ್ಯಾಚ್​ಗಳು ನಡೆಯಲಿವೆ. ಪ್ರತಿ ದಿನ ಮೊದಲ ಬ್ಯಾಚ್ ಬೆಳಿಗ್ಗೆ 9.30 ರಿಂದ ಮ. 1.30 ರವರೆಗೆ ಹಾಗೂ ಎರಡನೇ ಬ್ಯಾಚ್ ಮ.2.30 ರಿಂದ 6.30 ರವರೆಗೆ ನಿರಂತರವಾಗಿ ನಡೆಯಲಿವೆ.

ಇದನ್ನೂ ಓದಿ: ಬಡ ರೋಗಿಗಳ ಜೀವದ ಜೊತೆ ಗದಗ ಜಿಮ್ಸ್ ಆಡಳಿತ ಚೆಲ್ಲಾಟ!ಡಯಾಲಿಸಸ್ ರೋಗಿಗಳ ನರಳಾಟ

ಸಚಿವ ಎಚ್.ಕೆ.ಪಾಟೀಲ ಅವರು ಹಾಯಿ ದೋಣಿಗಳಿಗೆ ಹಾಗೂ ಭೀಷ್ಮ ಕೆರೆಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸುವ ಮೂಲಕ ತರಬೇತಿ ಶಿಬಿರಕ್ಕೆ ಚಾಲನೆ ನೀಡಿದರು. ಹಾಯಿ ದೋಣಿ ಕ್ರೀಡೆಯು ಓಲಂಪಿಕ್ ಕ್ರೀಡೆಯಾಗಿದ್ದು ಈ ಹಾಯಿ ದೋಣಿ ತರಬೇತಿ ಪಡೆಯುವ ಮೂಲಕ ಯುವ ಸಮುದಾಯ ಓಲಂಪಿಕ್ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಿದೆ ಎಂದು ತರಬೇತಿ ಶಿಬಿರ ಯಶಸ್ವಿಯಾಗಲೆಂದು ಶುಭ ಕೋರಿದರು.

ಇದನ್ನೂ ಓದಿ: ಗದಗದಲ್ಲಿ ಅಕ್ರಮ ಕಬ್ಬಿಣದ ಅದಿರು ಸಂಗ್ರಹ; ಗಣಿ ಇಲಾಖೆ ಕುಮ್ಮಕ್ಕಿನಿಂದಲೇ ನಡಿತಿದ್ಯಾ ಗಣಿಗಾರಿಕೆ?

ಈ ಸಂದರ್ಭದಲ್ಲಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಗಣ್ಯರಾದ ಸಿದ್ದು ಪಾಟೀಲ, ವಾಸಣ್ಣ ಕುರಡಗಿ, ಪ್ರಭು ಬುರಬುರೆ, ಬಿ.ಬಿ.ಅಸೂಟಿ, ಫಾರೂಕ, ಅಶೋಕ ಮಂದಾಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು , ಸಾರ್ವಜನಿಕರು ಹಾಜರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​