AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಯಿದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಸಚಿವ ಎಚ್​ಕೆ ಪಾಟೀಲ ಚಾಲನೆ

ನಗರದ ಭೀಷ್ಮ ಕೆರೆ ಆವರಣದಲ್ಲಿ ಅಕ್ಟೋಬರ್ 21 ರಿಂದ ನವೆಂಬರ್ 5 ರವರೆಗೆ ಏಳು ವರ್ಷ ಮೇಲ್ಪಟ್ಟ ಮಕ್ಕಳು, ಯುವಕರು ಹಾಗೂ ವಯಸ್ಕರಿಗಾಗಿ ಏರ್ಪಡಿಸಿದ ಹಾಯಿ ದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಚಾಲನೆ ನೀಡಿದ್ದಾರೆ.

ಹಾಯಿದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಸಚಿವ ಎಚ್​ಕೆ ಪಾಟೀಲ ಚಾಲನೆ
ಶಿಬಿರಕ್ಕೆ ಸಚಿವ ಎಚ್.ಕೆ.ಪಾಟೀಲ ಚಾಲನೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 21, 2023 | 6:44 PM

Share

ಗದಗ, ಅಕ್ಟೋಬರ್ 21:​​​​ ನಗರದ ಭೀಷ್ಮ ಕೆರೆ ಆವರಣದಲ್ಲಿ ಅಕ್ಟೋಬರ್ 21 ರಿಂದ ನವೆಂಬರ್ 5 ರವರೆಗೆ ಏಳು ವರ್ಷ ಮೇಲ್ಪಟ್ಟ ಮಕ್ಕಳು, ಯುವಕರು ಹಾಗೂ ವಯಸ್ಕರಿಗಾಗಿ ಏರ್ಪಡಿಸಿದ ಹಾಯಿ ದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ (H K Patil) ಅವರು ಚಾಲನೆ ನೀಡಿದ್ದಾರೆ. ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಸ್ಪೋರ್ಟ ಅಸೋಸಿಯೇಷನ್ ಸಹಯೋಗದಲ್ಲಿ ಈ ಹಾಯಿ ದೋಣಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಅಕ್ಟೋಬರ್ 22 ರಿಂದ 26 ರವರೆಗೆ ಮೊದಲ ಹಂತದ ತರಬೇತಿ, ಅಕ್ಟೋಬರ್ 27 ರಿಂದ 31 ರವರೆಗೆ ಎರಡನೇ ಹಂತದ ತರಬೇತಿ, ನವೆಂಬರ್ 1 ರಿಂದ ನವೆಂಬರ್ 5 ರವರೆಗೆ ಮೂರನೇ ಹಂತದ ತರಬೇತಿ ಬ್ಯಾಚ್​ಗಳು ನಡೆಯಲಿವೆ. ಪ್ರತಿ ದಿನ ಮೊದಲ ಬ್ಯಾಚ್ ಬೆಳಿಗ್ಗೆ 9.30 ರಿಂದ ಮ. 1.30 ರವರೆಗೆ ಹಾಗೂ ಎರಡನೇ ಬ್ಯಾಚ್ ಮ.2.30 ರಿಂದ 6.30 ರವರೆಗೆ ನಿರಂತರವಾಗಿ ನಡೆಯಲಿವೆ.

ಇದನ್ನೂ ಓದಿ: ಬಡ ರೋಗಿಗಳ ಜೀವದ ಜೊತೆ ಗದಗ ಜಿಮ್ಸ್ ಆಡಳಿತ ಚೆಲ್ಲಾಟ!ಡಯಾಲಿಸಸ್ ರೋಗಿಗಳ ನರಳಾಟ

ಸಚಿವ ಎಚ್.ಕೆ.ಪಾಟೀಲ ಅವರು ಹಾಯಿ ದೋಣಿಗಳಿಗೆ ಹಾಗೂ ಭೀಷ್ಮ ಕೆರೆಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸುವ ಮೂಲಕ ತರಬೇತಿ ಶಿಬಿರಕ್ಕೆ ಚಾಲನೆ ನೀಡಿದರು. ಹಾಯಿ ದೋಣಿ ಕ್ರೀಡೆಯು ಓಲಂಪಿಕ್ ಕ್ರೀಡೆಯಾಗಿದ್ದು ಈ ಹಾಯಿ ದೋಣಿ ತರಬೇತಿ ಪಡೆಯುವ ಮೂಲಕ ಯುವ ಸಮುದಾಯ ಓಲಂಪಿಕ್ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಿದೆ ಎಂದು ತರಬೇತಿ ಶಿಬಿರ ಯಶಸ್ವಿಯಾಗಲೆಂದು ಶುಭ ಕೋರಿದರು.

ಇದನ್ನೂ ಓದಿ: ಗದಗದಲ್ಲಿ ಅಕ್ರಮ ಕಬ್ಬಿಣದ ಅದಿರು ಸಂಗ್ರಹ; ಗಣಿ ಇಲಾಖೆ ಕುಮ್ಮಕ್ಕಿನಿಂದಲೇ ನಡಿತಿದ್ಯಾ ಗಣಿಗಾರಿಕೆ?

ಈ ಸಂದರ್ಭದಲ್ಲಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಗಣ್ಯರಾದ ಸಿದ್ದು ಪಾಟೀಲ, ವಾಸಣ್ಣ ಕುರಡಗಿ, ಪ್ರಭು ಬುರಬುರೆ, ಬಿ.ಬಿ.ಅಸೂಟಿ, ಫಾರೂಕ, ಅಶೋಕ ಮಂದಾಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು , ಸಾರ್ವಜನಿಕರು ಹಾಜರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ