AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಬಿಂಕದಕಟ್ಟಿ ಮೃಗಾಲಯಕ್ಕೆ ಬಸ್ ಸೇವೆ: ಸಚಿವ ಎಚ್​ಕೆ ಪಾಟೀಲ್​​ ಚಾಲನೆ

ಪ್ರವಾಸಿಗರಿಗೆ ಅನುಕೂಲ ದೃಷ್ಟಿಯಿಂದ ಗದಗ ತಾಲೂಕಿನ ಬಿಂಕದಕಟ್ಟಿ ಮೃಗಾಲಯಕ್ಕೆ ತೆರಳಲು ಹೊಸ ಬಸ್​ ಸಂಚಾರಕ್ಕೆ ಶನಿವಾರ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹಸಿರು ನಿಶಾನೆ ತೋರಿದ್ದಾರೆ.

Gadag News: ಬಿಂಕದಕಟ್ಟಿ ಮೃಗಾಲಯಕ್ಕೆ ಬಸ್ ಸೇವೆ: ಸಚಿವ ಎಚ್​ಕೆ ಪಾಟೀಲ್​​ ಚಾಲನೆ
ಹೊಸ ಬಸ್​​ ಸಂಚಾರಕ್ಕೆ ಹಸಿರು ನಿಶಾನೆ ತೋರಿದ ಸಚಿವ ಎಚ್.ಕೆ. ಪಾಟೀಲ್
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 29, 2023 | 5:37 PM

ಗದಗ, ಜುಲೈ 29: ಗದಗ ತಾಲೂಕಿನ ಬಿಂಕದಕಟ್ಟಿ ಮೃಗಾಲಯಕ್ಕೆ (Binkada Katti Zoo) ತೆರಳುವ ಮಕ್ಕಳು, ಪ್ರವಾಸಿಗರಿಗೆ ಅನುಕೂಲವಾಗುವಂತೆ ಗದಗ ಹೊಸ ಬಸ್​ ನಿಲ್ದಾಣದಿಂದ ಬಿಂಕದಕಟ್ಟಿ ಮೃಗಾಲಯದ ವರೆಗೆ ಬಸ್​​ ಸಂಚಾರಕ್ಕೆ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಗದಗ ನಗರದ ಹೊಸ ಬಸ್ ನಿಲ್ದಾಣದಿಂದ ಇಂದು ಏರ್ಪಡಿಸಲಾದ ಸರಳ ಸಮಾರಂಭದಲ್ಲಿ ಸಚಿವರು ಬಸ್ ಸೇವೆಗೆ ಚಾಲನೆ ನೀಡಿ ಅದೇ ಸಾರಿಗೆ ಬಸ್​ನಲ್ಲಿ ಪ್ರಯಾಣ ಬೆಳೆಸಿ ಬಿಂಕದಕಟ್ಟಿ, ಅಸುಂಡಿ ಮಾರ್ಗವಾಗಿ ಮೃಗಾಲಯಕ್ಕೆ ತೆರಳಿದರು.

ಇದನ್ನೂ ಓದಿ: Gadag News: ನಿರಂತರ ಮಳೆಗೆ ಹೂವಿನ ತೋಟಗಳು ಸಂಪೂರ್ಣ‌ ಹಾಳು; ಬಾಡಿದ ರೈತನ ಬದುಕು

ಈ ಬಸ್​​ ಸಂಚಾರ ಆರಂಭದಿಂದ ಮೃಗಾಲಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಲು ಅನುಕೂಲವಾಗಲಿದೆ. ಜಿಲ್ಲಾ ಕೇಂದ್ರ ಬಸ ನಿಲ್ದಾಣ ಹಾಗೂ ಪಂ.ಪುಟ್ಟರಾಜ ಗವಾಯಿಗಳ ಬಸ ನಿಲ್ದಾಣದ ಮಾರ್ಗವಾಗಿ ಪ್ರತಿ ದಿನ ನಿಯಮಿತವಾಗಿ ಸಾರಿಗೆ ಸೇವೆ ಜನ ಸಾಮಾನ್ಯರಿಗೆ ಇಂದಿನಿಂದ ಲಭ್ಯವಿದೆ ಎಂದರು.

ಈ ಸಂದರ್ಭದಲ್ಲಿ ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೋಲಿಸ್ ಅಧೀಕ್ಷಕ ಬಿ.ಎಸ್. ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದಿಪೀಕಾ ಬಾಜಪೇಯಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಬಸ್ ನಿಲ್ದಾಣದಿಂದ ಬಿಂಕದಕಟ್ಟಿ ಮೃಗಾಲಯದವರೆಗೆ ಬಸ್​ನಲ್ಲಿ ಆಗಮಿಸಿದರು.

ಇದನ್ನೂ ಓದಿ: ಲಕ್ಕುಂಡಿ ಗ್ರಾಮದಲ್ಲಿ ಮಳೆಗೆ ಸೋರುತ್ತಿರುವ ಮನೆಗಳು; ತವರಿಗೆ ಹೋದ ಬಾಣಂತಿ, ದೇವಸ್ಥಾನದಲ್ಲಿ ಪತಿ ವಾಸ್ತವ್ಯ

ಮೃಗಾಲಯಕ್ಕೆ ಆರಂಭವಾದ ಬಸ್​ ಸೇವೆಯೂ ಗದಗ ಪಂ.ಪುಟ್ಟರಾಜು ಗವಾಯಿಗಳ ಬಸ ನಿಲ್ದಾಣದಿಂದ ಮೃಗಾಲಯ ಮಾರ್ಗವಾಗಿ ಅಸುಂಡಿವರೆಗೆ ಪ್ರತಿ ದಿನ ಅರ್ಧ ಗಂಟೆಗೊಮ್ಮೆ ಸಂಚರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?