Gadag News: ಬಿಂಕದಕಟ್ಟಿ ಮೃಗಾಲಯಕ್ಕೆ ಬಸ್ ಸೇವೆ: ಸಚಿವ ಎಚ್​ಕೆ ಪಾಟೀಲ್​​ ಚಾಲನೆ

ಪ್ರವಾಸಿಗರಿಗೆ ಅನುಕೂಲ ದೃಷ್ಟಿಯಿಂದ ಗದಗ ತಾಲೂಕಿನ ಬಿಂಕದಕಟ್ಟಿ ಮೃಗಾಲಯಕ್ಕೆ ತೆರಳಲು ಹೊಸ ಬಸ್​ ಸಂಚಾರಕ್ಕೆ ಶನಿವಾರ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹಸಿರು ನಿಶಾನೆ ತೋರಿದ್ದಾರೆ.

Gadag News: ಬಿಂಕದಕಟ್ಟಿ ಮೃಗಾಲಯಕ್ಕೆ ಬಸ್ ಸೇವೆ: ಸಚಿವ ಎಚ್​ಕೆ ಪಾಟೀಲ್​​ ಚಾಲನೆ
ಹೊಸ ಬಸ್​​ ಸಂಚಾರಕ್ಕೆ ಹಸಿರು ನಿಶಾನೆ ತೋರಿದ ಸಚಿವ ಎಚ್.ಕೆ. ಪಾಟೀಲ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 29, 2023 | 5:37 PM

ಗದಗ, ಜುಲೈ 29: ಗದಗ ತಾಲೂಕಿನ ಬಿಂಕದಕಟ್ಟಿ ಮೃಗಾಲಯಕ್ಕೆ (Binkada Katti Zoo) ತೆರಳುವ ಮಕ್ಕಳು, ಪ್ರವಾಸಿಗರಿಗೆ ಅನುಕೂಲವಾಗುವಂತೆ ಗದಗ ಹೊಸ ಬಸ್​ ನಿಲ್ದಾಣದಿಂದ ಬಿಂಕದಕಟ್ಟಿ ಮೃಗಾಲಯದ ವರೆಗೆ ಬಸ್​​ ಸಂಚಾರಕ್ಕೆ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಗದಗ ನಗರದ ಹೊಸ ಬಸ್ ನಿಲ್ದಾಣದಿಂದ ಇಂದು ಏರ್ಪಡಿಸಲಾದ ಸರಳ ಸಮಾರಂಭದಲ್ಲಿ ಸಚಿವರು ಬಸ್ ಸೇವೆಗೆ ಚಾಲನೆ ನೀಡಿ ಅದೇ ಸಾರಿಗೆ ಬಸ್​ನಲ್ಲಿ ಪ್ರಯಾಣ ಬೆಳೆಸಿ ಬಿಂಕದಕಟ್ಟಿ, ಅಸುಂಡಿ ಮಾರ್ಗವಾಗಿ ಮೃಗಾಲಯಕ್ಕೆ ತೆರಳಿದರು.

ಇದನ್ನೂ ಓದಿ: Gadag News: ನಿರಂತರ ಮಳೆಗೆ ಹೂವಿನ ತೋಟಗಳು ಸಂಪೂರ್ಣ‌ ಹಾಳು; ಬಾಡಿದ ರೈತನ ಬದುಕು

ಈ ಬಸ್​​ ಸಂಚಾರ ಆರಂಭದಿಂದ ಮೃಗಾಲಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಲು ಅನುಕೂಲವಾಗಲಿದೆ. ಜಿಲ್ಲಾ ಕೇಂದ್ರ ಬಸ ನಿಲ್ದಾಣ ಹಾಗೂ ಪಂ.ಪುಟ್ಟರಾಜ ಗವಾಯಿಗಳ ಬಸ ನಿಲ್ದಾಣದ ಮಾರ್ಗವಾಗಿ ಪ್ರತಿ ದಿನ ನಿಯಮಿತವಾಗಿ ಸಾರಿಗೆ ಸೇವೆ ಜನ ಸಾಮಾನ್ಯರಿಗೆ ಇಂದಿನಿಂದ ಲಭ್ಯವಿದೆ ಎಂದರು.

ಈ ಸಂದರ್ಭದಲ್ಲಿ ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೋಲಿಸ್ ಅಧೀಕ್ಷಕ ಬಿ.ಎಸ್. ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದಿಪೀಕಾ ಬಾಜಪೇಯಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಬಸ್ ನಿಲ್ದಾಣದಿಂದ ಬಿಂಕದಕಟ್ಟಿ ಮೃಗಾಲಯದವರೆಗೆ ಬಸ್​ನಲ್ಲಿ ಆಗಮಿಸಿದರು.

ಇದನ್ನೂ ಓದಿ: ಲಕ್ಕುಂಡಿ ಗ್ರಾಮದಲ್ಲಿ ಮಳೆಗೆ ಸೋರುತ್ತಿರುವ ಮನೆಗಳು; ತವರಿಗೆ ಹೋದ ಬಾಣಂತಿ, ದೇವಸ್ಥಾನದಲ್ಲಿ ಪತಿ ವಾಸ್ತವ್ಯ

ಮೃಗಾಲಯಕ್ಕೆ ಆರಂಭವಾದ ಬಸ್​ ಸೇವೆಯೂ ಗದಗ ಪಂ.ಪುಟ್ಟರಾಜು ಗವಾಯಿಗಳ ಬಸ ನಿಲ್ದಾಣದಿಂದ ಮೃಗಾಲಯ ಮಾರ್ಗವಾಗಿ ಅಸುಂಡಿವರೆಗೆ ಪ್ರತಿ ದಿನ ಅರ್ಧ ಗಂಟೆಗೊಮ್ಮೆ ಸಂಚರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!