ಗದಗ: ಅನೈತಿಕ ಚಟುವಟಿಕೆಗಳ ತಾಣವಾದ ನರೇಗಲ್ ಹೈಟೆಕ್ ಆಸ್ಪತ್ರೆ ತುಂಬೆಲ್ಲಾ ಕಾಂಡೋಮ್​ ರಾಶಿ

Naregal Government Hospital: ಮೂರು ವರ್ಷಗಳ ಹಿಂದೆ ಲೋಕಾರ್ಪಣೆಗೊಂಡಿದ್ದ ನರೇಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆ ಇದೀಗ ಪಾಳುಕಟ್ಟಡದಂತಾಗಿದೆ. ಸೂಕ್ತ ಸೌಕರ್ಯಗಳಿಲ್ಲದೆ ಸೊರಗಿದೆ. ರೋಗಿಗಳ ನೆರವಿಗೆ ಸಿಗಬಕಾಗಿದ್ದ ಆಸ್ಪತ್ರೆ ಈಗ ಅನೈತಿಕ ಚಟುವಟಿಕೆಗಳ ತಾಣವಾಗಿರುವುದು ಬೆಳಕಿಗೆ ಬಂದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.

ಗದಗ: ಅನೈತಿಕ ಚಟುವಟಿಕೆಗಳ ತಾಣವಾದ ನರೇಗಲ್ ಹೈಟೆಕ್ ಆಸ್ಪತ್ರೆ ತುಂಬೆಲ್ಲಾ ಕಾಂಡೋಮ್​ ರಾಶಿ
ಪಾಳು ಬಿದ್ದಿರುವ ನರೇಗಲ್ ಆಸ್ಪತ್ರೆ ಮತ್ತು ಆಸ್ಪತ್ರೆ ಜಗುಲಿಯಲ್ಲಿ ಬಿದ್ದಿರುವ ಕಾಂಡೋಮ್​ಗಳು
Follow us
| Updated By: ಗಣಪತಿ ಶರ್ಮ

Updated on:Feb 06, 2024 | 11:06 AM

ಗದಗ, ಫೆಬ್ರವರಿ 6: ಗದಗ (Gadag) ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆ (Naregal Government Hospital) ಅದ್ವಾನಗಳ ಆಗರವಾಗಿ ಪರಿಣಮಿಸಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಆಸ್ಪತ್ರೆ ಇದೀಗ ಸೂಕ್ತ ಸೌಲಭ್ಯಗಳಿಲ್ಲದೆ ಪಾಳು ಬಿದ್ದಿದೆ. ಅಷ್ಟೇ ಅಲ್ಲದೆ, ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿಣಮಿಸಿದೆ. ಆಸ್ಪತ್ರೆ ತುಂಬೆಲ್ಲ ಕಾಂಡೋಮ್​ಗಳು ಬಿದ್ದುಕೊಂಡಿವೆ. ರೋಗಿಗಳಿಗೆ ಚಿಕಿತ್ಸೆ ನೀಡಬೇಕಿದ್ದ ಆಸ್ಪತ್ರೆಯಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿಬಂದಿದ್ದು, ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ನರೇಗಲ್ ಪಟ್ಟಣದ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಗೆ ಪ್ರವೇಶಿಸಿದರೆ ಸಾಕು ಅಸಹ್ಯ ವಸ್ತುಗಳ ದರ್ಶನವಾಗುತ್ತಿದೆ. ಹೊಸ ಕಟ್ಟಡದ ಕೊಠಡಿಗಳಲ್ಲಿ ಪ್ಯಾಕ್ಡ್ ಹಾಗೂ ಬಳಕೆ ಮಾಡಿದ ಕಾಂಡೋಮ್​​ಗಳೇ ಕಾಣಿಸುತ್ತಿವೆ. ಆಸ್ಪತ್ರೆ ಉದ್ಘಾಟನೆಯಾಗಿ ಮೂರು ವರ್ಷಗಳು ಕಳೆದರೂ ರೋಗಿಗಳಿಗೆ ಅದರ ಪ್ರಯೋಜನ ದೊರೆಯದಂತಾಗಿದೆ.

ಅಂದಿನ ಶಾಸಕ ಕಳಕಪ್ಪ ಬಂಡಿ ಅವರಿಂದ ಆಸ್ಪತ್ರೆ ಲೋಕಾರ್ಪಣೆಗೊಂಡಿತ್ತು. ಆಸ್ಪತ್ರೆಗೆ ಸಿಬ್ಬಂದಿ ನೇಮಕ, ಸೂಕ್ತ ಉಪಕರಣಗಳು ಹಾಗೂ ಪರಿಕರಗಳನ್ನು ಒದಗಿಸಿಕೊಡುವುದಾಗಿ ಉದ್ಘಾಟನೆ ವೇಳೆ ಶಾಸಕರು ಭರವಸೆ ನೀಡಿದ್ದರು. ಮೇಲ್ನೋಟಕ್ಕೆ ನೋಡುವವರಿಗೆ ಆಸ್ಪತ್ರೆಗೆ ಹೊರಗಡೆಯಿಂದ ಬೀಗ ಹಾಕಿದೆ. ಆದರೂ ಒಳಗಡೆಯ ಚಿತ್ರಣ ಬೇರೆಯೇ ರೀತಿಯಾಗಿದೆ. ಆಸ್ಪತ್ರೆ ಕಟ್ಟಡದಲ್ಲಿ ಅನೈತಿಕ ಚಟುವಟಿಕೆ ಮಾಡುವವರು ಯಾರು ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಕೂಡಲೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ಸೌಕರ್ಯ ಹಾಗೂ ಸಿಬ್ಬಂದಿ ನಿಯೋಜನೆ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವೈದ್ಯರು, ಸಿಬ್ಬಂದಿ ಕೊರತೆ

ನರೇಗಲ್ ಆಸ್ಪತ್ರೆಗೆ ವೈದ್ಯರು, ಅರಿವಳಿಕೆ ತಜ್ಞರು ಸೇರಿದಂತೆ ಅಂದಾಜು 35 ಮಂದಿ ಸಿಬ್ಬಂದಿ ಬೇಕಿದೆ. ಆದರೆ ಆಸ್ಪತ್ರೆಗೆ ಸೂಕ್ತ ಸಿಬ್ಬಂದಿ ನೇಮಕವೇ ಆಗಿಲ್ಲ. ಆಸ್ಪತ್ರೆಗೆ ಅಗತ್ಯವಿರುವ ವೈದ್ಯಕೀಯ ಸಾಧನಗಳು, ಸಲಕರಣೆಗಳನ್ನು ಇನ್ನೂ ಒದಗಿಸಿಲ್ಲ. ಹೀಗಾಗಿ ಹೆಸರಿಗಷ್ಟೇ ಹೈಟೆಕ್ ಆಸ್ಪತ್ರೆಯಾಗಿದ್ದು, ಸಾಮಾನ್ಯ ರೋಗಿಗಳ ಪಾಲಿಗೆ ಇನ್ನೂ ಲಭ್ಯವಾಗುತ್ತಿಲ್ಲ.

ಇದನ್ನೂ ಓದಿ: ದಲಿತ ಕುಟುಂಬಕ್ಕೆ ಕೊಟ್ಟಿರುವ ಸರ್ಕಾರಿ ಜಮೀನಿನಲ್ಲೂ ಸೋಲಾರ್ ಹಾಕಿ ಕಂಪನಿಗಳ ಉದ್ಧಟತನ, ರೈತ ಹೈರಾಣ

ನೂತನ ಆಸ್ಪತ್ರೆ ಕಟ್ಟಡಕ್ಕೆ ಸಮರ್ಪಕವಾಗಿ ಬೇಲಿಯನ್ನೂ ಹಾಕಲಾಗಿಲ್ಲ. ಪರಿಣಾಮವಾಗಿ ಅಕ್ರಮ ಚಟುವಟಿಕೆಗಳ ತಾಣವಾಗಿ ಪರಿಣಮಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:53 am, Tue, 6 February 24

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ