AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನದಾತರ ಕಾಪಾಡು ಗಣೇಶ: ಕಾಮದೇನುವಿಗೆ ಪೂಜೆ, ಎಪಿಎಂಸಿ ಗಜಾನನ ಸಮಿತಿಯಿಂದ ರೈತರ ಪರ ವಿಶೇಷ ಪ್ರಾರ್ಥನೆ

Gadag News: ಗದಗ ನಗರದ ಎಪಿಎಂಸಿ ಗಜಾನನ ಉತ್ಸವ ಸಮಿತಿ ಸಂಕಷ್ಟದಲ್ಲಿ ಇರುವ ಅನ್ನದಾತರಿಗಾಗಿ ವಿಶೇಷ ಪೂಜೆ ಆಯೋಜನೆ ಮಾಡಿತ್ತು. ಹೌದು, ಬರ ಪರಿಸ್ಥಿರಿ ನೀಗಿಸು ಅಂತಾ ವಿಘ್ನವಿನಾಶಕನಲ್ಲಿ ಮೊರೆ ಇಟ್ಟಿದ್ದಾರೆ. ಗದಗ ಗಜಾನನ ಉತ್ಸವ ಸಮೀತಿ ವಿಶೇಷವಾಗಿ ಗೋ ಪೂಜೆ ಸಲ್ಲಿಸಿದೆ. ಕಾಮದೇನುವಿಗೆ ಪೂಜೆ ಸಲ್ಲಿಸಿ ಬರ ನೀಗಿಸು ತಾಯಿ ಅಂತಾ ಬೇಡಿಕೊಂಡಿದ್ದಾರೆ.

ಅನ್ನದಾತರ ಕಾಪಾಡು ಗಣೇಶ: ಕಾಮದೇನುವಿಗೆ ಪೂಜೆ, ಎಪಿಎಂಸಿ ಗಜಾನನ ಸಮಿತಿಯಿಂದ ರೈತರ ಪರ ವಿಶೇಷ ಪ್ರಾರ್ಥನೆ
ಎಪಿಎಂಸಿ ಗಜಾನನ ಸಮಿತಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 21, 2023 | 3:49 PM

Share

ಗದಗ, ಸೆಪ್ಟೆಂಬರ್​ 21: ಗಣೇಶ ಪ್ರತಿಷ್ಠಾಪನೆ ಅಂದರೆ ಅಲ್ಲಿ ವಿಭಿನ್ನತೆ ಇರುತ್ತೆ. ಭಕ್ತರು ವಿಭಿನ್ನ ಶೈಲಿಯ ಗಣಪನನ್ನ ಕೂರಿಸಿ ಖುಷಿ ಪಡುತ್ತಾರೆ. ಅಲ್ಲದೇ ವಿಘ್ನ ವಿನಾಶಕನಿಗೆ ವಿವಿಧ ರೀತಿಯ ಪೂಜೆ ಸಲ್ಲಿಸಿ ಸಂಭ್ರಮ ಪಡುತ್ತಾರೆ. ಆದರೆ ಅಲ್ಲಿಯ ಯುವಕ ಮಂಡಳಿಯೊಂದು ಬರಗಾಲ ನೀಗಿಸಿ ಸಮೃದ್ಧಿ ಕೊಡು ಅಂತಾ ರೈತರಿಗಾಗಿ (farmers) ಪ್ರಾರ್ಥಿಸಿದ್ದಾರೆ. ವಿನಾಯಕನ ಜೊತೆಗೆ ಗೋ ಮಾತೆಗೂ ಪೂಜೆ ಸಲ್ಲಿಸಿ ಬರದಿಂದ ರೈತರನ್ನ ಜನರನ್ನ ಕಾಪಾಡು ಅಂತಾ ವಿಘ್ನೇಶ್ವರನಿಗೆ ಮೊರೆ ಇಟ್ಟಿದ್ದಾರೆ.

ಗದಗ ನಗರದ ಎಪಿಎಂಸಿ ಗಜಾನನ ಉತ್ಸವ ಸಮಿತಿ ಸಂಕಷ್ಟದಲ್ಲಿ ಇರುವ ಅನ್ನದಾತರಿಗಾಗಿ ವಿಶೇಷ ಪೂಜೆ ಆಯೋಜನೆ ಮಾಡಿತ್ತು. ಹೌದು, ಬರ ಪರಿಸ್ಥಿರಿ ನೀಗಿಸು ಅಂತಾ ವಿಘ್ನವಿನಾಶಕನಲ್ಲಿ ಮೊರೆ ಇಟ್ಟಿದ್ದಾರೆ. ಗದಗ ಗಜಾನನ ಉತ್ಸವ ಸಮೀತಿ ವಿಶೇಷವಾಗಿ ಗೋ ಪೂಜೆ ಸಲ್ಲಿಸಿದೆ. ಕಾಮದೇನುವಿಗೆ ಪೂಜೆ ಸಲ್ಲಿಸಿ ಬರ ನೀಗಿಸು ತಾಯಿ ಅಂತಾ ಬೇಡಿಕೊಂಡಿದ್ದಾರೆ. ಅಲ್ಲದೆ ರೈತರಲ್ಲಿ ನೆಮ್ಮದಿ ನೆಲೆಸುವಂತೆ ಮಾಡು ಅಂತಾ ಕಾಪಾಡು ಗಣೇಶ ಅಂತ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ಗದಗ: ಗಣೇಶ ಪ್ರತಿಷ್ಠಾಪನೆಯಲ್ಲಿ ಚಂದ್ರಯಾನ-3 ಮಾದರಿ ಪ್ರದರ್ಶನ, ಭಕ್ತರಿಂದ ಚಪ್ಪಾಳೆ ಸುರಿಮಳೆ

ಈ ಬಾರಿ ನಿರೀಕ್ಷಿತ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ಮುಕ್ಕೋಟಿ ದೈವರ ಪ್ರತಿರೂಪದಂತಿರುವ ಗೋಮಾತೆಯನ್ನ ಪೂಜಿಸಿ ಪ್ರಾರ್ಥನೆ ಸಲ್ಲಿಸಲಾಯ್ತು. ಐವತ್ತು ಮುತ್ತೈದೆಯರು 101 ಗೋವು, ಎತ್ತುಗಳಿಗೆ ಅರಿಶಿಣ, ಕುಂಕುಮ ಹಚ್ಚಿ ಪೂಜಿಸಿದರು. ಅಲ್ಲದೇ ಅಕ್ಕಿ, ಬೆಲ್ಲ ಅರ್ಪಿಸಿ ಭಕ್ತಿಯಿಂದ ಬೇಡಿಕೊಂಡರು. ಹೀಗೆ ಮಾಡೋದ್ರಿಂದ ಗೋಮಾತೆ ಸಂತೃಪ್ತಳಾಗ್ತಾಳೆ, ಕಾಮದೇನು ಸಂತೃಪ್ತಳಾದರೆ ರೈತರು ಸಮೃದ್ಧರಾಗ್ತಾರೆ ಅನ್ನೋದು ಭಕ್ತರ ನಂಬಿಕೆ. ಹೀಗಾಗಿ ಈ ಭಾರಿ ವಿನಾಯಕನ ಜೊತೆಗೆ ಗೋವುಗಳ ಪೂಜೆಯನ್ನೂ ನೆರವೇರಿಸಲಾಗಿದೆ‌‌ ಅಂತ ಸಮಿತಿ ಸದಸ್ಯೆರು ಹೇಳಿದ್ದಾರೆ.

ಎಪಿಎಂಸಿ ವರ್ತಕರ ಸಂಘ ಕಳೆದ ಎರಡು ವರ್ಷದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡ್ತಿದೆ. ಒಂಭತ್ತು ದಿನಗಳ ಕಾಲ ನಡೆಯೋ ಗಣೇಶ ಉತ್ಸವದಲ್ಲಿ ವಿವಿಧ ಕಾರ್ಯಕ್ರಮ ಮಾಡಲಾಗುತ್ತದೆ. ಉಡಿ ತುಂಬುವ ಕಾರ್ಯ, ಅನ್ನಸಂತರ್ಪಣೆ ಮಾಡ್ತಿದ್ದ ವರ್ತಕರು, ಈ ಬಾರಿ ಬರ ಎದುರಾಗಿರೋದ್ರಿಂದ ವಿಶೇಷ ಗೋ ಪೂಜೆ ಸಲ್ಲಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಬರದ ಛಾಯೆ ದಟ್ಟವಾಗಿದ್ದು, ಬರಗಾಲ ದೂರವಾಗಲಿ ಮಳೆ ಸಮೃದ್ಧವಾಗಲಿ ಅಂತಾ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬರ ಪೀಡಿತ ತಾಲೂಕಿನಿಂದ ಮುಂಡರಗಿ ಕೈ ಬಿಟ್ಟಿದ್ದಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ರೈತರು

ವಿಶೇಷ ಅಂದರೆ ಪರಿಸರ ಸ್ನೇಹಿ ಗಣಪನನ್ನೇ ಈ ಬಾರಿ ಪ್ರತಿಷ್ಠಾಪಿಸಿರೋ ಮಂಡಳಿ, ಪರಿಸರ ಪ್ರೇಮ ಮೆರೆದಿದ್ದಾರೆ. ರೈತರು ಸಂಮೃದ್ಧರಾದರೇ ಎಪಿಎಂಸಿ ವ್ಯಾಪಾರ ಹೀಗಾಗಿ ರೈತರ ಸಂಕಷ್ಟ ನೀಗಲಿ ಅಂತಾ ಕೇಳಿಕೊಂಡಿದ್ದೇವೆ ಅಂತ ಪೂಜೆ ಸಲ್ಲಿಸಿದ ವಿಜಯಲಕ್ಷ್ಮೀ ಹೇಳಿದ್ದಾರೆ.

ರಾಜ್ಯಕ್ಕೇ ಎದುರಾಗಿರೋ ವಿಘ್ನವನ್ನ ದೂರಮಾಡು ಅಂತಾ ಗಣೇಶನಲ್ಲಿ ಮೊರೆ ಇಟ್ಟ ವರ್ತಕರು, ರೈತರು ಸಮೃದ್ಧರಾಗಲಿ ಅಂತಾ ಬೇಡಿಕೊಂಡಿದ್ದರೆ. 33 ಕೋಟಿ ದೇವರಿಗೆ ಹರಿಕೆ ಕಟ್ಟಿಕೊಳ್ಳುವದಕ್ಕಿಂತ ಮುಕ್ಕೋಟಿ ದೇವರ ಪ್ರತಿರೂಪ ಗೋಮಾತೆಗೆ ಪೂಜೆ ಸಲ್ಲಿಸಿದ್ದಾರೆ. ರೈತರ ಅಳಲನ್ನ ದೇವಕ್ಕೆ ಪ್ರಾರ್ಥನೆ ಮೂಲಕ ಮುಟ್ಟಿಸಿದ್ದಾರೆ. ಗಜಾನನ, ಗೋಮಾತೆ ರೈತರ ಸಂಕಷ್ಟ ನೀಗಿಸಲಿ ಅನ್ನೋದು ನಮ್ಮ ಪ್ರಾರ್ಥನೆಯೂ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:48 pm, Thu, 21 September 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ