ಗದಗ: ಅಯೋಧ್ಯೆ ರಾಮ ಮಂದಿರದ ಫೋಟೋ ತಿರುಚಿ ಪೋಸ್ಟ್ ಮಾಡಿದ ಯುವಕ ಅರೆಸ್ಟ್

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್‌ ದಫೇದಾ‌ರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಗಜೇಂದ್ರಗಡ ಪೊಲೀಸರು ತಾಜುದ್ದೀನ್‌ ದಫೇದಾ‌ರ್ ಎಂಬಾತನನ್ನು ಬಂಧಿಸಿದ್ದಾರೆ. ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಗದಗ: ಅಯೋಧ್ಯೆ ರಾಮ ಮಂದಿರದ ಫೋಟೋ ತಿರುಚಿ ಪೋಸ್ಟ್ ಮಾಡಿದ ಯುವಕ ಅರೆಸ್ಟ್
ಅಯೋಧ್ಯೆ ರಾಮ ಮಂದಿರದ ಫೋಟೋ ತಿರುಚಿ ಪೋಸ್ಟ್ ಮಾಡಿದ ಯುವಕ ಅರೆಸ್ಟ್
Edited By: ಆಯೇಷಾ ಬಾನು

Updated on: Jan 22, 2024 | 7:14 AM

ಗದಗ, ಜ.22: ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇಡೀ ಭಾರತ ಕಾತುರದಿಂದ ಕಾಯುತ್ತಿದೆ. ಪ್ರತಿ ಜಿಲ್ಲೆ, ರಾಜ್ಯಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಆದರೆ ಇಲ್ಲೊಬ್ಬ ಕಿಡಿಗೇಡಿ ರಾಮ ಮಂದಿರದ ಚಿತ್ರವನ್ನು ತಿರುಚಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿ ಜೈಲು ಸೇರಿದ್ದಾನೆ. ​ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್‌ ದಫೇದಾ‌ರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.

ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭದಲ್ಲಿ ಇಂತಹ ಘಟನೆ ನಡೆದಿದೆ. ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾಕಿರುವ ಚಿತ್ರ ಫೇಸ್‌ಬುಕ್‌ನಲ್ಲಿ ಫೋಸ್ಟ್ ಮಾಡಲಾಗಿದೆ. ಸುದ್ಧಿ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದ್ದು ಗಜೇಂದ್ರಗಡ ಪೊಲೀಸರು ತಾಜುದ್ದೀನ್‌ ದಫೇದಾ‌ರ್ ಎಂಬಾತನನ್ನು ಬಂಧಿಸಿದ್ದಾರೆ. ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಜರಂಗದಳ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ತಡರಾತ್ರಿ ಪೊಲೀಸ್ ಠಾಣೆಗೆ ದೌಡಾಯಿಸಿ ಯುವಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪಿಎಸ್‌ಐ ಸೋಮನಗೌಡರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Ram mandir: ರಾಮಲಾಲ ಪ್ರಾಣ ಪ್ರತಿಷ್ಠಾಕ್ಕಾಗಿ ಅಯೋಧ್ಯೆಗೆ ತಲುಪಿದ ವಿರಾಟ್ ಕೊಹ್ಲಿ: ವಿಡಿಯೋ ನೋಡಿ

ರಾಮನ ಪ್ರಾಣಪ್ರತಿಷ್ಠಾಪನೆಗೆ ಪ್ರಧಾನಿ ಸಜ್ಜು

ರಾಮನ ನಂಟಿರುವ ಪುಣ್ಯ ಸ್ಥಳಗಳಿಗೆ ಭೇಟಿ ನೀಡಿದ್ದಾಗಿದೆ. ರಾಮ ಸೀತೆ ಇದ್ದ ಸ್ಥಳಗಳಲ್ಲಿ ಪೂಜೆ ಸಲ್ಲಿಸಿದ್ದಾಗಿದೆ. ಪ್ರಧಾನಿ ಮೋದಿ ಮಹಾರಾಷ್ಟ್ರದ ನಾಸಿಕ್, ಆಂಧ್ರಪ್ರದೇಶದ ಲೇಪಾಕ್ಷಿ, ಕೇರಳ ತ್ರಿಪಯಾರ್, ತಮಿಳುನಾಡಿನ ರಂಗಸ್ವಾಮಿ ಹಾಗೂ ರಾಮೇಶ್ವರಂ, ದನುಷ್ಕೋಟಿಯ ದರ್ಶನ ಪಡೆದಿದ್ದಾರೆ. ತಣ್ಣೀರಿನ ಸ್ನಾನ ಮಾಡಿದ್ದಾರೆ. ಸಮುದ್ರದಲ್ಲಿ ಮಿಂದೆದ್ದ್ದಿದ್ದಾರೆ. ಬರೀಗಾಲಲ್ಲಿ ನಡೆದಿದ್ದಾರೆ. ಜಪ ತಪ ಮಾಡಿದ್ದಾರೆ. ಇದೀಗ ರಾಮನ ಪ್ರಾಣಪ್ರತಿಷ್ಠಾನೆಗೆ ಅಣಿಯಾಗಲಿದ್ದಾರೆ.

11 ದಿನಗಳ ಯಮನಿಮಯ.. ಆತ್ಮಶುದ್ಧಿಯ ಪರಿಪೂರ್ಣತೆ

ಪ್ರಧಾನಿ ನರೇಂದ್ರ ಮೋದಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯ ಮುಖ್ಯ ಯಜಮಾನರು. ಹೀಗೆ ಕಳೆದ 11 ದಿನಗಳಿಂದ ಕಠಿಣ ಯಮನಿಯಮ ಪಾಲಿಸಿದ್ದಾರೆ. ಆತ್ಮಶುದ್ಧಿಯ ಪರಿಪೂರ್ಣತೆಯ ಜತೆಗೆ ಸ್ವಯಂ ದೈವಿ ಶಕ್ತಿಯನ್ನು ಅಹ್ವಾನಿಸಿಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿದ್ದಾರೆ. ಇದೀಗ ಅಂತಿಮ ಘಟ್ಟದಲ್ಲಿ ಶ್ರೀರಾಮನಿಗೆ ಪ್ರಾಣಪ್ರತಿಷ್ಠನೆಯ ಪರಮ ಪುಣ್ಯಕಾರ್ಯಕ್ಕೆ ಸಜ್ಜಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us