AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಯುವಕರನ್ನು ಹಿಗ್ಗಾಮುಗ್ಗಾ ಥಳಿಸಿದ ಪೊಲೀಸರು: ಮದ್ಯ ಸೇವಿಸಿ, ಮನಸ್ಸೋ ಇಚ್ಚೆ ಥಳಿಸಿದರಾ?

Gadag Police: ಬಂಗಾರ ಕಳ್ಳತನ ಮಾಡಿದ್ದೀರಿ ಅಂತಾ ಗದಗ ಗ್ರಾಮೀಣ ಪೊಲೀಸರು ತಮ್ಮನ್ನು ಥಳಿಸಿದ್ದಾರೆ. ಪೊಲೀಸರು ಮದ್ಯ ಸೇವನೆ ಮಾಡಿ, ಮನಸ್ಸೋ ಇಚ್ಚೆ ಥಳಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಆದರೆ ಮೂರೂ ಯುವಕರು ನಿರಪರಾಧಿಗಳು ಎಂದು ಗೊತ್ತಾದ ಮೇಲೆ ಪೊಲೀಸರು ಅವರನ್ನು ಬಿಟ್ಟು ಕಳುಹಿಸಿದ್ದಾರೆ.

ಮೂವರು ಯುವಕರನ್ನು ಹಿಗ್ಗಾಮುಗ್ಗಾ ಥಳಿಸಿದ ಪೊಲೀಸರು: ಮದ್ಯ ಸೇವಿಸಿ, ಮನಸ್ಸೋ ಇಚ್ಚೆ ಥಳಿಸಿದರಾ?
ಮೂವರು ಯುವಕರನ್ನು ಹಿಗ್ಗಾಮುಗ್ಗಾ ಥಳಿಸಿದ ಪೊಲೀಸರು: ಮದ್ಯ ಸೇವಿಸಿ, ಮನಸ್ಸೋ ಇಚ್ಚೆ ಥಳಿಸಿದರಾ?
TV9 Web
| Updated By: ಸಾಧು ಶ್ರೀನಾಥ್​|

Updated on:Sep 22, 2022 | 2:51 PM

Share

ಗದಗ: ತಿಮ್ಮಾಪೂರ ಗ್ರಾಮದ ಮೂವರು ಯುವಕರನ್ನು ಕರೆದ್ಯೊಯ್ದು ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಾಧಿತ ಯುವಕರು ಗದಗ ಗ್ರಾಮೀಣ ಪೊಲೀಸರ (Gadag Police) ವಿರುದ್ಧ ಈ ಆರೋಪ ಮಾಡಿದ್ದಾರೆ. ಗದಗ ತಾಲೂಕಿನ ತಿಮ್ಮಾಪುರ ಗ್ರಾಮದ ಯುವಕರಾದ ಕಳಕಪ್ಪ ಹಡಪದ, ಮಂಜುನಾಥ ಗುಡಿಗೇರಿ ಮತ್ತು ನಾಗರಾಜ ಬೂದುಗುಂಪ್ಪ ಎಂಬ ಯುವಕರಿಗೆ ಪೊಲೀಸರು ಥಳಿಸಿದ್ದಾರೆ ಎನ್ನಲಾಗಿದೆ. ಪೊಲೀಸರ ಅಮಾನವೀಯ ವರ್ತನೆಗೆ ತಿಮ್ಮಾಪುರ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಗಾರ ಕಳ್ಳತನ ಮಾಡಿದ್ದೀರಿ ಅಂತ ಥಳಿಸಿದ ಪೊಲೀಸರು?

ನಿನ್ನೆ ಸಾಯಂಕಾಲ ಗ್ರಾಮದಿಂದ ಕರೆದ್ಯೊಯ್ದು ಬಿಂಕದಕಟ್ಟಿ ಗ್ರಾಮದ ಹೊರವಲಯದಲ್ಲಿ ಫೈಬರ್ ಪೈಪ್ ನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಪೊಲೀಸರ ಹೊಡೆತಕ್ಕೆ ಜರ್ಜರಿತರಾದ ಯುವಕರು ಅಲವತ್ತುಕೊಂಡಿದ್ದಾರೆ. ದೇಹದ ವಿವಿಧ ಭಾಗಗಳಲ್ಲಿ ಯುವಕರಿಗೆ ಬಾಸುಂಡೆ ಬಂದಿದ್ದು, ಪೊಲೀಸರ ಹೊಡೆತದಿಂದ ನರಳಾಡುತ್ತಿದ್ದಾರೆ.

ಪೊಲೀಸರ ದುಡುಕಿನ ನಿರ್ಧಾರಕ್ಕೆ ಯುವಕರ ನರಳಾಟ..

ಬಂಗಾರ ಕಳ್ಳತನ (gold theft) ಮಾಡಿದ್ದೀರಿ ಅಂತ ಗದಗ ಗ್ರಾಮೀಣ ಪೊಲೀಸರು ತಮ್ಮನ್ನು ಥಳಿಸಿದ್ದಾರೆ. ಪೊಲೀಸರು ಮದ್ಯ ಸೇವನೆ ಮಾಡಿ, ಮನಸ್ಸೋ ಇಚ್ಚೆ ಥಳಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಆದರೆ ಮೂರೂ ಯುವಕರು ನಿರಪರಾಧಿಗಳು ಎಂದು ಗೊತ್ತಾದ ಮೇಲೆ ಪೊಲೀಸರು ಅವರನ್ನು ಬಿಟ್ಟು ಕಳುಹಿಸಿದ್ದಾರೆ.

ಯಾದಗಿರಿ: ಮಕ್ಕಳು ಕಳ್ಳರು ಎಂದು ಭಿಕ್ಷುಕನನ್ನ ಹಿಡಿದು ಹಿಗ್ಗಾಮುಗ್ಗಾ ಥಳಿಸಿಬಿಟ್ಟರು! ಆ ಮೇಲೆ ಆಧಾರ‌ ಕಾರ್ಡ್ ನೋಡಿ…

ಮಕ್ಕಳು ಕಳ್ಳರು ಎಂಬ ವದಂತಿಗಳು ರಾಜ್ಯದ ಅಲ್ಲಲ್ಲಿ ಭಾರೀ ಅವಾಂತರಗಳನ್ನು ಸೃಷ್ಟಿಸುತ್ತಿದೆ. ಇಂತಹುದೇ ಘಟನೆಯೊಂದು ಯಾದಗಿರಿ ನಗರದಲ್ಲಿ ನಡೆದಿದೆ. ಯಾದಗಿರಿ ನಗರದ ಹತ್ತಿಕುಣಿ ಕ್ರಾಸ್ ಬಳಿ ಭಿಕ್ಷುಕನನ್ನ ಹಿಡಿದು ನೂರಾರು ಮಂದಿ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕೊನೆಗೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಭಿಕ್ಷುಕನನ್ನ ರಕ್ಷಣೆ ಮಾಡಿದ್ದಾರೆ. ಬಳಿಕ ಭಿಕ್ಷುಕನ ಆಧಾರ‌ ಕಾರ್ಡ್ ಪರಿಶೀಲನೆ ಮಾಡಿದ ಪೊಲೀಸರು ಯಾದಗಿರಿ ಜಿಲ್ಲೆಯ ಸುರಪುರ ನಿವಾಸಿ ಭಿಕ್ಷುಕ ಎಂದು ಗುರುತು ಹಿಡಿದಿದ್ದಾರೆ. ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 2:29 pm, Thu, 22 September 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?