AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಪೊಲೀಸರಿಂದ ಭರ್ಜರಿ ಬೇಟೆ: ಮೂವರು ಅಂತಾರಾಜ್ಯ ಕಳ್ಳರ ಬಂಧನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ

Gadag News: ಗದಗ ಪೊಲೀಸರು ಮೂವರು ಅಂತಾರಾಜ್ಯ ಮಾಸ್ಕ್ ಗ್ಯಾಂಗ್ ಕಳ್ಳರನ್ನು ಬಂಧಿಸುವ ಮೂಲಕ ಮನೆ ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಸದ್ಯ ಬಂಧಿತರಿಂದ 42.73 ಲಕ್ಷ ರೂ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಹಾಗೂ ಎರಡು ಕಾರುಗಳನ್ನು ವಶ ಪಡಿಸಿಕೊಂಡಿದ್ದಾರೆ. ಈ ಕುರಿತಾಗಿ ಎಸ್​​ಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ.

ಗದಗ ಪೊಲೀಸರಿಂದ ಭರ್ಜರಿ ಬೇಟೆ: ಮೂವರು ಅಂತಾರಾಜ್ಯ ಕಳ್ಳರ ಬಂಧನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ
ಬಂಧಿತರು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jul 25, 2026 | 2:48 PM

Share

ಮುಖ್ಯಾಂಶಗಳು

  • ಬೀಗ ಹಾಕಿದ ಮನೆಗಳೇ ಇವರ ಟಾರ್ಗೆಟ್
  • ನಗದು ಸೇರಿದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿದ್ದ ಖದೀಮರು
  • ಮೂವರು ಅಂತಾರಾಜ್ಯ ಕಳ್ಳರ ಬಂಧನ

ಗದಗ, ಜುಲೈ 25: ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಅಂತಾರಾಜ್ಯ ‘ಮಾಸ್ಕ್ ಗ್ಯಾಂಗ್’ನ (mask gang) ಮೂವರು ಆರೋಪಿಗಳನ್ನು ಗದಗ (gadag) ಶಹರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಹಮ್ಮದ್ ರಫೀಕ್ (36), ಬೆಳಗಾವಿ ಜಿಲ್ಲೆಯ ಇಮ್ರಾನ್ ತಿಗಡಿ (40) ಹಾಗೂ ಹಾವೇರಿ ಜಿಲ್ಲೆಯ ಮೌಲಾಅಲಿ ದರ್ಗಾ (34) ಬಂಧಿತ ಆರೋಪಿಗಳು. ಬಂಧಿತರಲ್ಲಿ ಓರ್ವ ತರಕಾರಿ ಹಾಗೂ ಗುಜರಿ ವ್ಯಾಪಾರಿಗಳಾಗಿದ್ದು, ಮತ್ತೋರ್ವ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿದ್ದ ಖದೀಮರು

ಕಳೆದ ಮೇ 8 ರಂದು ಗದಗ ನಗರದ ಮಂಜುನಾಥ್ ಬಸವಾ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಮುಖಕ್ಕೆ ಮಾಸ್ಕ್ ಹಾಗೂ ಕೈಗೆ ಗ್ಲೌಸ್ ಧರಿಸಿ ಬಂದಿದ್ದ ಗ್ಯಾಂಗ್, ಸ್ಥಳದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಸಿಗದಂತೆ ಅತ್ಯಂತ ಚಾಣಾಕ್ಷತನದಿಂದ ಮನೆ ದೋಚಿದ್ದರು. ಕಳ್ಳರು ಮನೆಯಲ್ಲಿದ್ದ 34.20 ಲಕ್ಷ ರೂ ಮೌಲ್ಯದ 342 ಗ್ರಾಂ ಚಿನ್ನಾಭರಣ, 2.2 ಲಕ್ಷ ರೂ ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ 8.50 ಲಕ್ಷ ರೂ ನಗದು ದೋಚಿದ್ದರು.

42.73 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ

ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಗದಗ ಪೊಲೀಸರು, ಸಿಸಿಟಿವಿ ಕ್ಯಾಮೆರಾದಲ್ಲಿ ಕಂಡುಬಂದ ಅನುಮಾನಾಸ್ಪದ ಕಾರನ್ನು ಬೆನ್ನಟ್ಟಿ ಇಡೀ ಪ್ರಕರಣದ ಜಾಲವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಒಟ್ಟು 42.73 ಲಕ್ಷ ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ 33.33 ಲಕ್ಷ ರೂ ಮೌಲ್ಯದ ಚಿನ್ನಾಭರಣ, 90 ಸಾವಿರ ರೂ ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ 8 ಲಕ್ಷ ರೂ ಮೌಲ್ಯದ ಎರ್ಟಿಗಾ ಮತ್ತು ಆಲ್ಟೋ ಕಾರುಗಳು ಸೇರಿವೆ.

ಇದನ್ನೂ ಓದಿ:

ಇದೇ ವೇಳೆ, ಗದಗ ನಗರದ ಹಾತಲಗೇರಿ ನಾಕಾ ಬಳಿಯಿರುವ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನೂ ಪೊಲೀಸರು ಭೇದಿಸಿದ್ದು, ದೇವಿಗೆ ಹಾಕುತ್ತಿದ್ದ 1.25 ಲಕ್ಷ ರೂ ಮೌಲ್ಯದ ಚಿನ್ನದ ತಾಳಿ, ಬೆಳ್ಳಿಯ ಕಿರೀಟವನ್ನು ವಶಪಡಿಸಿಕೊಂಡಿದ್ದಾರೆ.

ಎಸ್​​ಪಿ ರೋಹನ್ ಜಗದೀಶ್ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಎಸ್​​ಪಿ ರೋಹನ್ ಜಗದೀಶ್ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ್ದು, ‘‘ಲಾಕ್ ಮಾಡಿದ್ದ ಮನೆಯನ್ನು ಗುರಿಯಾಗಿಸಿಕೊಂಡು, ಯಾವುದೇ ಸಾಕ್ಷ್ಯಗಳು ಸಿಗದಂತೆ ಮಾಸ್ಕ್ ಮತ್ತು ಗ್ಲೌಸ್ ಧರಿಸಿ ಕಳ್ಳತನ ಮಾಡುತ್ತಿದ್ದ ಮೂವರು ಅಂತಾರಾಜ್ಯ ಖದೀಮರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದ ಅನುಮಾನಾಸ್ಪದ ಕಾರಿನ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದೆ. ಬಂಧಿತರಲ್ಲಿ ಮಹ್ಮದರಫೀಕ್​ ಮೇಲೆ ಕರ್ನಾಟಕ ಸೇರಿದಂತೆ 68 ಪ್ರಕರಣಗಳು ದಾಖಲಾಗಿವೆ. ಸದ್ಯ ಬಂಧಿತರಿಂದ ನಗದು, ಆಭರಣಗಳು ಹಾಗೂ ವಾಹನಗಳು ಸೇರಿದಂತೆ ಲಕ್ಷಾಂತರ ರೂ ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಲಾಗಿದೆ’’ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ
8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ
ಥಣಿಸಂದ್ರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವ ಕೃಷ್ಣಭೈರೇಗೌಡ ಚಾಲನೆ
ಥಣಿಸಂದ್ರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವ ಕೃಷ್ಣಭೈರೇಗೌಡ ಚಾಲನೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ 'ಸಿಜೆಪಿ' ನೀಡಿದ ಡೆಡ್‌ಲೈನ್ ಅಂತ್ಯ
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ 'ಸಿಜೆಪಿ' ನೀಡಿದ ಡೆಡ್‌ಲೈನ್ ಅಂತ್ಯ
ಮತ್ತೊಂದು ಮಹತ್ವದ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಮತ್ತೊಂದು ಮಹತ್ವದ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಈ ದಿನ ಯಾರಿಗೆ ಸಾಲಬಾಧೆಯಿಂದ ಮುಕ್ತಿ, ಯಾರಿಗೆ ಆರ್ಥಿಕ ಲಾಭ?
ಈ ದಿನ ಯಾರಿಗೆ ಸಾಲಬಾಧೆಯಿಂದ ಮುಕ್ತಿ, ಯಾರಿಗೆ ಆರ್ಥಿಕ ಲಾಭ?
‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು
‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು
ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ
ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ