AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 ಬಿಗ್ ಇಂಪ್ಯಾಕ್ಟ್: ಮುಚ್ಚಿದ್ದ ಕಾಳಜಿ ಕೇಂದ್ರ 24 ಗಂಟೆಯಲ್ಲೇ ರೀ-ಓಪನ್!

TV9 ವರದಿಯ ಪರಿಣಾಮವಾಗಿ ಗದಗ ಗಂಗಿಮಡಿ ಸಂತ್ರಸ್ತರ ಕಾಳಜಿ ಕೇಂದ್ರ ಪುನರಾರಂಭಗೊಂಡಿದೆ. ದಿಢೀರ್ ಮುಚ್ಚಲ್ಪಟ್ಟಿದ್ದ ಕೇಂದ್ರವನ್ನು ವರದಿ ಪ್ರಸಾರವಾದ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಪುನಃ ತೆರೆದಿದೆ. ಸಂತ್ರಸ್ತರು ಇದೀಗ ಅನ್ನ, ಆಸರೆ ಪಡೆದಿದ್ದು, ಮಾಧ್ಯಮಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿಗೆ ಕ್ರಮದ ಭರವಸೆ ನೀಡಲಾಗಿದ್ದು, ಸಾರ್ವಜನಿಕ ವಲಯದಲ್ಲಿ TV9 ವರದಿಗಾರಿಕೆಗೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

TV9 ಬಿಗ್ ಇಂಪ್ಯಾಕ್ಟ್: ಮುಚ್ಚಿದ್ದ ಕಾಳಜಿ ಕೇಂದ್ರ 24 ಗಂಟೆಯಲ್ಲೇ ರೀ-ಓಪನ್!
ಕಾಳಜಿ ಕೇಂದ್ರ ಪುನರಾರಂಭ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: May 23, 2026 | 5:08 PM

Share

ಗದಗ, ಮೇ.23: ಗದಗ ನಗರದ ಗಂಗಿಮಡಿ ಭಾಗದ ಸಂತ್ರಸ್ತರ ಪರವಾಗಿ ಟಿವಿ೯ (TV9) ಸುದ್ದಿ ಸಂಸ್ಥೆ ಬಿತ್ತರಿಸಿದ ವಿಸ್ತೃತ ವರದಿಗೆ ಕೊನೆಗೂ ಭರ್ಜರಿ ಜಯ ಸಿಕ್ಕಿದೆ. ನಿನ್ನೆ ಮಧ್ಯಾಹ್ನ ಸಂತ್ರಸ್ತರನ್ನು ಹೊರಹಾಕಿ ದಿಢೀರನೆ ಬಂದ್ ಮಾಡಲಾಗಿದ್ದ ಕಾಳಜಿ ಕೇಂದ್ರವನ್ನು, ವರದಿ ಪ್ರಸಾರವಾದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತವು ಇಂದು ಮಧ್ಯಾಹ್ನವೇ ಪುನರಾರಂಭಿಸಿದೆ. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ನೆಮ್ಮದಿಯ ನಿಟ್ಟುಸಿರು ಬಿಟ್ಟಿರುವ ಸಂತ್ರಸ್ತರು, “ಟಿವಿ9 ವರದಿಯಿಂದಲೇ ಇಂದು ನಮ್ಮ ಹೊಟ್ಟೆಗೆ ಅನ್ನ ಮತ್ತು ತಲೆಗೊಂದು ಆಸರೆ ಸಿಕ್ಕಿದೆ” ಎಂದು ಭಾವುಕರಾಗಿ ಧನ್ಯವಾದ ತಿಳಿಸಿದ್ದಾರೆ.

ಮಾಧ್ಯಮಗಳ ವರದಿ ಬೆನ್ನಲ್ಲೇ ಅಲರ್ಟ್ ಆದ ಗದಗ ಉಪವಿಭಾಗಾಧಿಕಾರಿ (AC) ಗಂಗಪ್ಪ ಹಾಗೂ ನಗರಸಭೆ ಆಯುಕ್ತ ರಾಜಾರಾಮ್ ಪವಾರ್ ಅವರು ಗಂಗಿಮಡಿಯ ಸರ್ಕಾರಿ ಶಾಲೆಗೆ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳನ್ನು ಮುತ್ತಿಗೆ ಹಾಕಿದ ಸಂತ್ರಸ್ತರು, ತಮಗಾದ ಅನ್ಯಾಯವನ್ನು ನೆನೆದು ಕಣ್ಣೀರು ಹಾಕಿ ಗೋಳು ತೋಡಿಕೊಂಡರು. “ನಿನ್ನೆ ಕಾಳಜಿ ಕೇಂದ್ರ ಬಂದ್ ಮಾಡಿರುವ ಕುರಿತು ನಮಗೆ ಯಾವುದೇ ಪೂರ್ವ ಮಾಹಿತಿ ಇರಲಿಲ್ಲ” ಎಂದು ಸ್ಪಷ್ಟನೆ ನೀಡಿದ ಎಸಿ ಗಂಗಪ್ಪ ಅವರು, ಈ ಬೇಜವಾಬ್ದಾರಿತನಕ್ಕೆ ಕಾರಣರಾದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸದ್ಯ ಸಂತ್ರಸ್ತರಿಗೆ ಸರ್ಕಾರಿ ಶಾಲೆಯಲ್ಲೇ ವಾಸ್ತವ್ಯ ಹಾಗೂ ಊಟದ ಅಧಿಕೃತ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಭೀತಿ?!: ಬಸ್ ನಿಲ್ದಾಣದಿಂದ 20ಕ್ಕೂ ಹೆಚ್ಚು ಜನರನ್ನ ಠಾಣೆಗೆ ತಂದ ಪೊಲೀಸರು

ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಎಂಎಲ್‌ಸಿ (MLC) ಎಸ್.ವಿ. ಸಂಕನೂರ್ ಅವರು ನಿಯೋಗದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಡಳಿತದ ಧೋರಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಅವರು ತಕ್ಷಣ ಮಧ್ಯಪ್ರವೇಶಿಸಿ ಈ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಸಂತ್ರಸ್ತರಿಗೆ ಮಧ್ಯಾಹ್ನದ ಅವಧಿಗೆ ಬಿಜೆಪಿಯಿಂದಲೇ ವಿಶೇಷ ಪುಲಾವ್ ಮತ್ತು ಸಿರಾ ಊಟದ ವ್ಯವಸ್ಥೆ ಮಾಡಲಾಗಿತ್ತು. ಗಂಗಿಮಡಿ ನಿವಾಸಿಗಳ ತಗಡಿನ ಶೆಡ್‌ಗಳು ಸಂಪೂರ್ಣವಾಗಿ ದುರಸ್ತಿಯಾಗುವವರೆಗೂ ಈ ಕಾಳಜಿ ಕೇಂದ್ರ ಮುಂದುವರಿಯಲಿದ್ದು, ಸಾರ್ವಜನಿಕ ವಲಯದಲ್ಲಿ ಟಿವಿ೯ ವರದಿಗಾರಿಕೆಗೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ