AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುನ್ನಲೆಗೆ ಬಂದ ಗದಗಿನ ಶಿವಾನಂದ ಮಠದ ಶ್ರೀಗಳ ಪೀಠ ಗುದ್ದಾಟ! ಮಠದ ಅಂಗಳದಲ್ಲಿ ಬಿಗುವಿನ ವಾತಾವರಣ

ಉತ್ತರ ಕರ್ನಾಟಕದ ಪ್ರತಿಷ್ಠಿತ ಗದಗಿನ ಶಿವಾನಂದ ಮಠ. ವರ್ಷಗಳಿಂದ ಹಿರಿಯ, ಕಿರಿಯ ಸ್ವಾಮಿಜಿಗಳ ಪೀಠ ಗುದ್ದಾಟ ಇನ್ನೂ ಮುಗಿದಿಲ್ಲ. ಇಂದು ಮಠದ ಅಂಗಳದಲ್ಲಿ ಉಭಯ ಶ್ರೀಗಳ ಪೀಠದ ಜಟಾಪಟಿ ಬಲು ಜೋರಾಗಿದೆ. ಕಿರಿಯ ಶ್ರೀಗಳನ್ನು ಹೊರಗಿಟ್ಟು ಹಿರಿಯ ಶ್ರೀಗಳು ಜಾತ್ರಾಮಹೋತ್ಸವಕ್ಕೆ ಸಜ್ಜಾಗಿದ್ದಾರೆ. ಇದು ಕಿರಿಯ ಶ್ರೀಗಳ ಭಕ್ತರ ಆಕ್ರೋಶಕ್ಕೆ ಕಾರಣವಾಗಿವೆ. ಹೀಗಾಗಿ ಹಿರಿಯ ಶ್ರೀಗಳನ್ನು ಭೇಟಿ ಮಾಡಿದ ಭಕ್ತರು ಇಬ್ಬರು ಶ್ರೀಗಳು ಸೇರಿ ಜಾತ್ರಾಮಹೋತ್ಸವ ಮಾಡುವಂತೆ ಮನವಿ ಮಾಡಿದ್ದಾರೆ. ಆದ್ರೆ, ಹಿರಿಯ ಶ್ರೀಗಳು ಮಾತ್ರ ಭಕ್ತರ ಮನವಿಗೆ ಕ್ಯಾರೆ ಎಂದಿಲ್ಲ. ಹೀಗಾಗಿ ಹಿರಿಯ ಶ್ರೀಗಳು, ಭಕ್ತರ ನಡುವೆ ತೀವ್ರ ವಾಗ್ವಾದ ನಡೆದಿದೆ.

ಮತ್ತೆ ಮುನ್ನಲೆಗೆ ಬಂದ ಗದಗಿನ ಶಿವಾನಂದ ಮಠದ ಶ್ರೀಗಳ ಪೀಠ ಗುದ್ದಾಟ! ಮಠದ ಅಂಗಳದಲ್ಲಿ ಬಿಗುವಿನ ವಾತಾವರಣ
ಶಿವಾನಂದ ಮಠದ ಪೀಠ ಗಲಾಟೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Feb 29, 2024 | 6:21 PM

Share

ಗದಗ, ಫೆ.29: ಜಿಲ್ಲೆಯ ಪ್ರತಿಷ್ಟಿತ ಶಿವಾನಂದ ಮಠದ ಉಭಯ ಶ್ರೀಗಳ ಪೀಠ ಗಲಾಟೆ (Shivananda Mutt succession controversy) ಮತ್ತೆ ಜೋರಾಗಿದೆ. ಕಳೆದ ವರ್ಷದಿಂದ ಉಭಯ ಶ್ರೀಗಳ ನಡುವಿನ ಗುದ್ದಾಟ ಬಲು ಜೋರಾಗಿದೆ. ವರ್ಷಗಳು ಕಳೆದರೂ ಇನ್ನೂ ವೈಮನಸ್ಸು ದೂರವಾಗಿಲ್ಲ. ಇನ್ನು ಮಾರ್ಚ್ 8, ಶಿವರಾತ್ರಿ ದಿನದಂದು ಶಿವಾನಂದ ಮಠದ ಜಾತ್ರಾಮಹೋತ್ಸವ ನಡೆಯಲಿದೆ. ಕಿರಿಯ ಶ್ರೀಗಳನ್ನು ಹೊರಗಿಟ್ಟು ಹಿರಿಯ ಶ್ರೀಗಳು ಜಾತ್ರಾಮಹೋತ್ಸವ ನಡೆಸಲು ಸಜ್ಜಾಗಿದ್ದಾರೆ. ಇದು ಕಿರಿಯ ಶ್ರೀಗಳು ಹಾಗೂ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಹಿರಿಯ ಶ್ರೀ ಅಭಿನವ ಶಿವಾನಂದ ಶ್ರೀಗಳು ಮಾತನಾಡಿ. ‘ಕಿರಿಯ ಶ್ರೀ ಸದಾಶಿವಾನಂದ ಭಾರತಿ ಶ್ರೀಗಳು ಮಠದ ಪರಂಪರೆಯಂತೆ ನಡೆದುಕೊಳ್ಳುತ್ತಿಲ್ಲ. ಹೀಗಾಗಿ ಉತ್ತರಾಧಿಕಾರಿ ಪೀಠದಿಂದ ತೆಗೆಯಲಾಗಿದೆ ಎಂದು ಹೇಳಿದರು. ಇನ್ನು ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು. ಈ ಕಿರಿಯ ಶ್ರೀಗಳ ಹಕ್ಕುಗಳ ದಕ್ಕೆಯಾಗದಂತೆ ಮಠದ ಆಡಳಿತ ನಡೆಯಬೇಕು ಎಂದು ಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಹೀಗಾಗಿ ಜಾತ್ರಾಮಹೋತ್ಸವವನ್ನ ಕಿರಿಯ ಶ್ರೀಗಳ ಜೊತೆಗೆ ಮಾಡಬೇಕು ಎಂದು ಶ್ರೀಗಳ ಪರ ಭಕ್ತರು, ಹಿರಿಯ ಶ್ರೀಗಳಿಗೆ ಮನವಿ ಮಾಡಿದ್ಧಾರೆ. ಆದ್ರೆ, ಹಿರಿಯ ಶ್ರೀಗಳು ಮಾತ್ರ ಭಕ್ತರ ಮನವಿಗೆ ಬಗ್ಗುತ್ತಿಲ್ಲ. ಇದು ಭಕ್ತರು ಹಾಗೂ ಕಿರಿಯ ಶ್ರೀಗಳನ್ನು ಕೆರಳುವಂತೆ ಮಾಡಿದೆ.

ಇದನ್ನೂ ಓದಿ:ಗದಗ: ಇಂದು ಕೂಡ ಮುಂದುವರೆದ ಶಿವಾನಂದ ಮಠದ ಉತ್ತರಾಧಿಕಾರಿ ವಿವಾದ, ಮಠಕ್ಕೆ ಪೊಲೀಸರ ಎಂಟ್ರಿ

ಇಂದು ಮಠದ ಆವರಣದಲ್ಲಿ ಕಿರಿಯ ಶ್ರೀಗಳ ಪರ ನೂರಾರು ಭಕ್ತರು ಜಮಾಯಿಸಿದ್ದರು. ಕಿರಿಯ ಶ್ರೀ ಸದಾಶಿವಾನಂದ ಭಾರತಿ ನೇತೃತ್ವದಲ್ಲಿ ಸಭೆ ಮಾಡಿದ್ದಾರೆ. ಕೋರ್ಟ್ ಆದೇಶದಂತೆ ಕಿರಿಯ ಶ್ರೀಗಳ ಜೊತೆಗೂಡಿಯೇ ಜಾತ್ರಾಮಹೋತ್ಸವ ಮಾಡಬೇಕು ಎಂದು ನಿರ್ಧಾರ ಮಾಡಿದ್ದಾರೆ. ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳಬೇಕು. ಒಂದು ವೇಳೆ ಅವರನ್ನು ಬಿಟ್ಟು ಜಾತ್ರಾಮಹೋತ್ಸವ ಮಾಡಲು ನಿರ್ಧಾರ ಮಾಡಿದ್ರೆ, ಭಕ್ತರು ಮುಂದಿನ ನಿರ್ಧಾರ ಮಾಡ್ತಾರೆ ಎಂದು ಕಿರಿಯ ಶ್ರೀಗಳು ಹೇಳಿದ್ದಾರೆ.

ಇನ್ನು ಭಕ್ತರು ಮಾತನಾಡಿ, ‘ಇಂದು ಗದಗ ಹಾಗೂ ಹಳ್ಳಿಯ ಭಕ್ತರು ಸಭೆ ಮಾಡಲಾಗಿದೆ. ಸಭೆಯಲ್ಲಿ ಉಭಯ ಶ್ರೀಗಳು ಸೇರಿ ಜಾತ್ರಾಮಹೋತ್ಸವ ಮಾಡಬೇಕು. ಕಿರಿಯ ಶ್ರೀಗಳನ್ನು ಬಿಟ್ಟು ಜಾತ್ರೆ ಮಾಡಿದ್ರೆ ತಪ್ಪು ಸಂದೇಶ ಹೋಗುತ್ತದೆ. ಕಿರಿಯ ಶ್ರೀಗಳ ಜೊತೆಗೆ ಹಿರಿಯ ಶ್ರೀಗಳೇ ಧ್ವಜಾರೋಹಣ, ರಥೋತ್ಸವ ಹಾಗು ಜಾತ್ರಾಮಹೋತ್ಸವ ಮಾಡಿ ಎಂದು ಮನವಿ ಮಾಡಿದ್ದೇವೆ. ಆದ್ರೆ, ಹಿರಿಯ ಶ್ರೀಗಳು ಮಾತ್ರ ಸರಿಯಾಗಿ ಸ್ಪಂದಿಸಿಲ್ಲ. ಸರಿಯಾಗಿ ವರ್ತನೆ ತೋರಿಲ್ಲ ಎಂದು ಕಿಡಿಕಾರಿದ್ದಾರೆ. ಮಾರ್ಚ್ 2ರ ವರೆಗೆ ಗಡುವು ನೀಡಲಾಗಿದೆ. ಅಂದು ತಿರ್ಮಾನ ಹೇಳಬೇಕು. ಉಭಯ ಶ್ರೀಗಳು ಜೊತೆಗೂಡಿ ಜಾತ್ರೆ ಮಾಡಿದ್ರೆ ಸರಿ. ಇಲ್ಲಾಂದ್ರೆ ಭಕ್ತರೆಲ್ಲರೂ ಸೇರಿ ಮುಂದೆ ಏನೂ ಎಂದು ನಿರ್ಧಾರ ಮಾಡುತ್ತೆವೆ ಎಂದು ಭಕ್ತರು ಹೇಳಿದ್ದಾರೆ.

ಇದನ್ನೂ ಓದಿ:ಗದಗ: ಅಯೋಧ್ಯೆ ರಾಮ ಮಂದಿರಕ್ಕೂ ಗದಗ ಶಿವಾನಂದ ಮಠಕ್ಕೂ ಇದೆ ನಂಟು!

ಮಠದ ಆವರಣಕ್ಕೆ ಎಂಟ್ರಿಕೊಟ್ಟ ಗದಗ ಶಹರ ಪೊಲೀಸ್ರು

ಶ್ರೀಗಳು ಹಾಗೂ ಭಕ್ತರ ನಡುವೆ ಗಲಾಟೆ ಶುರುವಾಗುತ್ತಿದ್ದಂತೆ ಗದಗ ಶಹರ ಪೊಲೀಸರು ಮಠದ ಆವರಣಕ್ಕೆ ಎಂಟ್ರಿಕೊಟ್ಟಿದ್ದಾರೆ. ಬಳಿಕ ಶ್ರೀಗಳು ಭಕ್ತರನ್ನು ಸಮಾಧಾನ ಮಾಡಿದ್ದಾರೆ. ಈ ಎಲ್ಲ ಬೆಳವಣಿಗೆ ಬಗ್ಗೆ ಹಿರಿಯ ಶ್ರೀ ಅಭಿನವ ಶಿವಾನಂದ ಶ್ರೀಗಳನ್ನು ಮಾತನಾಡಿ, ‘ಮಾರ್ಚ್ 2 ರಂದು ಮಠದ ಎಲ್ಲಾ ಶಾಖಾ ಮಠಗಳ ಶ್ರೀಗಳ ಸಭೆ ಕೆರೆದು ಮುಂದಿನ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಜೊತೆಗೆ ಶಿವಾನಂದ ಮಠದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮಠದ ಅಂಗಳದಲ್ಲಿ ಖಾಕಿ ಪಡೆ ಬಿಡುಬಿಟ್ಟಿದೆ. ಉಭಯ ಶ್ರೀಗಳ ಗುದ್ದಾಟ ಪೊಲೀಸರಿಗೂ ತಲೆನೋವಾಗಿದೆ. ಕಳೆದ ವರ್ಷವೂ ಗೊಂದಲದಲ್ಲೇ ಜಾತ್ರಾಮಹೋತ್ಸವ ನಡೆದಿದ್ದು, ಈ ವರ್ಷವೂ ಮತ್ತೆ ಗೊಂದಲ ಸೃಷ್ಠಿಯಾಗಿದೆ. ಇನ್ನಾದರೂ ಉಭಯ ಶ್ರೀಗಳು ಪೀಠ ಗುದ್ದಾಟಕ್ಕೆ ಬ್ರೇಕ್ ಹಾಕಿ ಒಂದಾಗಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ