AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಲವ್ ಪ್ರಕರಣದಲ್ಲಿ ನಿರ್ಲಕ್ಷ್ಯ, ಪಿಎಸ್​ಐ ಅಮಾನತು

ಪ್ರೇಮ ಪ್ರಕರಣವೊಂದರಲ್ಲಿ ನಿರ್ಲಕ್ಷ್ಯ ತೋರಿದ ನರೇಗಲ್ ಠಾಣೆಯ ಪಿಎಸ್​ಐಯನ್ನು ಅಮಾನತುಗೊಳಿಸಿ ಗದಗ ಎಸ್​ಪಿ ಆದೇಶ ಹೊರಡಿಸಿದ್ದಾರೆ. ಅದೇ ರೀತಿ, ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ ಚಂದ್ರಶೇಖರ್​ ಅವರನ್ನು ಅಮಾನತುಗೊಳಿಸಿ ಚಿಕ್ಕಮಗಳೂರು ಎಸ್​ಪಿ ಆದೇಶ ಹೊರಡಿಸಿದ್ದಾರೆ.

ಗದಗ: ಲವ್ ಪ್ರಕರಣದಲ್ಲಿ ನಿರ್ಲಕ್ಷ್ಯ, ಪಿಎಸ್​ಐ ಅಮಾನತು
ಅಮಾನತುಗೊಂಡ ನರೇಗಲ್ ಠಾಣೆಯ ಪಿಎಸ್​ಐ ನಿಖೀಲ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Rakesh Nayak Manchi|

Updated on: Aug 28, 2023 | 9:54 PM

Share

ಗದಗ, ಆಗಸ್ಟ್ 28: ಪ್ರೇಮ ಪ್ರಕರಣವೊಂದರಲ್ಲಿ ನಿರ್ಲಕ್ಷ್ಯ ತೋರಿದ ನರೇಗಲ್ ಠಾಣೆಯ ಪಿಎಸ್​ಐಯನ್ನು ಅಮಾನತುಗೊಳಿಸಿ ಗದಗ (Gadag) ಎಸ್​ಪಿ ಆದೇಶ ಹೊರಡಿಸಿದ್ದಾರೆ. ಅದೇ ರೀತಿ, ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ ಚಂದ್ರಶೇಖರ್​ ಅವರನ್ನು ಅಮಾನತುಗೊಳಿಸಿ ಚಿಕ್ಕಮಗಳೂರು (Chikkamagaluru) ಎಸ್​ಪಿ ಆದೇಶ ಹೊರಡಿಸಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣ ಪೊಲೀಸ್ ಠಾಣೆಯ ಪಿಎಸ್​ಐ ನಿಖೀಲ್ ಅವರು ಪ್ರೇಮ ಪ್ರಕರಣವೊಂದರಲ್ಲಿ ಮೇಲಾಧಿಕಾರಿಗಳ ಜೊತೆ ಸರಿಯಾದ ವರ್ತನೆ ತೋರಿಲ್ಲ. ಆದೇಶ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಗದಗ ಎಸ್​ಪಿ ಬಿ.ಎಸ್. ನೇಮಗೌಡ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟಿವಿ9ಗೆ ನೇಮಗೌಡ ಅವರು ಮಾಹಿತಿ ನೀಡಿದ್ದಾರೆ.

ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

ಚಿಕ್ಕಮಗಳೂರು: ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಚಂದ್ರಶೇಖರ್ ಬಣಕಲ್ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಚಂದ್ರಶೇಖರ್ ಅವರನ್ನು ಅಮಾನತುಗೊಳಿಸಿ ಎಸ್​ಪಿ ವಿಕ್ರಂ ಅಮಾಟೆ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್: ಗ್ಯಾಂಗ್ ​​ಸ್ಟರ್​​ ಆಯೋಜಿಸಿದ ಪಾರ್ಟಿಯಲ್ಲಿ ಭಾಗಿಯಾದ 7 ಪೊಲೀಸರು ಅಮಾನತು

ಚಿಕ್ಕಮಗಳೂರು ತಾಲೂಕಿನ ಕಾಡುಮಲ್ಲಿಗೆ ಎಸ್ಟೇಟ್​ನಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಸೆನ್ ಪೊಲೀಸ್ ಠಾಣೆಯ ಪೊಲೀಸರು ಭಾನುವಾರ ರಾತ್ರಿ ದಾಳಿ ನಡೆಸಲಾಗಿತ್ತು. ಈ ವೇಳೆ ಕಾನ್​ಸ್ಟೇಬಲ್ ಚಂದ್ರಶೇಖರ್ ಸಿಕ್ಕಿಬಿದ್ದಿದ್ದಾರೆ. ಸದ್ಯ ಚಂದ್ರಶೇಖರ್ ಸೇರಿದಂತೆ ದಾಳಿ ವೇಳೆ ಸಿಕ್ಕಿಬಿದ್ದ 13 ಜನರ ಮೇಲೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ