ಗದಗ: ಲವ್ ಪ್ರಕರಣದಲ್ಲಿ ನಿರ್ಲಕ್ಷ್ಯ, ಪಿಎಸ್​ಐ ಅಮಾನತು

ಪ್ರೇಮ ಪ್ರಕರಣವೊಂದರಲ್ಲಿ ನಿರ್ಲಕ್ಷ್ಯ ತೋರಿದ ನರೇಗಲ್ ಠಾಣೆಯ ಪಿಎಸ್​ಐಯನ್ನು ಅಮಾನತುಗೊಳಿಸಿ ಗದಗ ಎಸ್​ಪಿ ಆದೇಶ ಹೊರಡಿಸಿದ್ದಾರೆ. ಅದೇ ರೀತಿ, ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ ಚಂದ್ರಶೇಖರ್​ ಅವರನ್ನು ಅಮಾನತುಗೊಳಿಸಿ ಚಿಕ್ಕಮಗಳೂರು ಎಸ್​ಪಿ ಆದೇಶ ಹೊರಡಿಸಿದ್ದಾರೆ.

ಗದಗ: ಲವ್ ಪ್ರಕರಣದಲ್ಲಿ ನಿರ್ಲಕ್ಷ್ಯ, ಪಿಎಸ್​ಐ ಅಮಾನತು
ಅಮಾನತುಗೊಂಡ ನರೇಗಲ್ ಠಾಣೆಯ ಪಿಎಸ್​ಐ ನಿಖೀಲ್
Edited By: Rakesh Nayak Manchi

Updated on: Aug 28, 2023 | 9:54 PM

ಗದಗ, ಆಗಸ್ಟ್ 28: ಪ್ರೇಮ ಪ್ರಕರಣವೊಂದರಲ್ಲಿ ನಿರ್ಲಕ್ಷ್ಯ ತೋರಿದ ನರೇಗಲ್ ಠಾಣೆಯ ಪಿಎಸ್​ಐಯನ್ನು ಅಮಾನತುಗೊಳಿಸಿ ಗದಗ (Gadag) ಎಸ್​ಪಿ ಆದೇಶ ಹೊರಡಿಸಿದ್ದಾರೆ. ಅದೇ ರೀತಿ, ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ ಚಂದ್ರಶೇಖರ್​ ಅವರನ್ನು ಅಮಾನತುಗೊಳಿಸಿ ಚಿಕ್ಕಮಗಳೂರು (Chikkamagaluru) ಎಸ್​ಪಿ ಆದೇಶ ಹೊರಡಿಸಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣ ಪೊಲೀಸ್ ಠಾಣೆಯ ಪಿಎಸ್​ಐ ನಿಖೀಲ್ ಅವರು ಪ್ರೇಮ ಪ್ರಕರಣವೊಂದರಲ್ಲಿ ಮೇಲಾಧಿಕಾರಿಗಳ ಜೊತೆ ಸರಿಯಾದ ವರ್ತನೆ ತೋರಿಲ್ಲ. ಆದೇಶ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಗದಗ ಎಸ್​ಪಿ ಬಿ.ಎಸ್. ನೇಮಗೌಡ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟಿವಿ9ಗೆ ನೇಮಗೌಡ ಅವರು ಮಾಹಿತಿ ನೀಡಿದ್ದಾರೆ.

ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

ಚಿಕ್ಕಮಗಳೂರು: ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಚಂದ್ರಶೇಖರ್ ಬಣಕಲ್ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಚಂದ್ರಶೇಖರ್ ಅವರನ್ನು ಅಮಾನತುಗೊಳಿಸಿ ಎಸ್​ಪಿ ವಿಕ್ರಂ ಅಮಾಟೆ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್: ಗ್ಯಾಂಗ್ ​​ಸ್ಟರ್​​ ಆಯೋಜಿಸಿದ ಪಾರ್ಟಿಯಲ್ಲಿ ಭಾಗಿಯಾದ 7 ಪೊಲೀಸರು ಅಮಾನತು

ಚಿಕ್ಕಮಗಳೂರು ತಾಲೂಕಿನ ಕಾಡುಮಲ್ಲಿಗೆ ಎಸ್ಟೇಟ್​ನಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಸೆನ್ ಪೊಲೀಸ್ ಠಾಣೆಯ ಪೊಲೀಸರು ಭಾನುವಾರ ರಾತ್ರಿ ದಾಳಿ ನಡೆಸಲಾಗಿತ್ತು. ಈ ವೇಳೆ ಕಾನ್​ಸ್ಟೇಬಲ್ ಚಂದ್ರಶೇಖರ್ ಸಿಕ್ಕಿಬಿದ್ದಿದ್ದಾರೆ. ಸದ್ಯ ಚಂದ್ರಶೇಖರ್ ಸೇರಿದಂತೆ ದಾಳಿ ವೇಳೆ ಸಿಕ್ಕಿಬಿದ್ದ 13 ಜನರ ಮೇಲೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us