AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ:ಕಬ್ಬು ಕಟಾವು ವಿಳಂಬ ಆರೋಪ; ವಿಜಯನಗರ ಶುಗರ್ಸ್ ವಿರುದ್ಧ ರೈತರ ಆಕ್ರೋಶ!

ಕಬ್ಬು ಬೆಳೆದು ಬದುಕು ಸಿಹಿ ಮಾಡಿಕೊಳ್ಳಬೇಕು ಎಂದುಕೊಂಡಿದ್ದ ರೈತರ ಬಾಳು ಕಹಿಯಾಗಿದೆ. ಸಕ್ಕರೆ ಕಾರ್ಖನೆ ಅಧಿಕಾರಿಗಳು ಆಡುವ ಆಟಕ್ಕೆ ಅನದಾತರು ಅಕ್ಷರಶಃ ಕಂಗಾಲಾಗಿದ್ದಾರೆ. ನೂರಾರು ಎಕರೆ ಜಮೀನಿನಲ್ಲಿ ಕಬ್ಬು ಒಣಗುತ್ತಿದ್ರು ಕಾಟಾವು ಮಾಡುತ್ತಿಲ್ಲ. ಈ ವಿಷಯ ಅಧಿಕಾರಿಗಳ ಗಮನಕ್ಕೆ ತಂದರೂ ನೆರವಿಗೆ ಬರ್ತಾಯಿಲ್ಲ ಎಂದು ಗದಗ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ:ಕಬ್ಬು ಕಟಾವು ವಿಳಂಬ ಆರೋಪ; ವಿಜಯನಗರ ಶುಗರ್ಸ್ ವಿರುದ್ಧ ರೈತರ ಆಕ್ರೋಶ!
ಗದಗ ಕಬ್ಬು ಬೆಳೆಗಾರರ ಸಂಕಷ್ಟ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jan 07, 2024 | 5:32 PM

Share

ಗದಗ, ಜ.07: ಜಿಲ್ಲೆಯ ಮುಂಡರಗಿ ತಾಲೂಕಿನ ಗಂಗಾಪೂರ ಬಳಿಯ ವಿಜಯನಗರ ಸಕ್ಕರೆ ಕಾರ್ಖಾನೆ(Vijayanagara Sugar Factory)ಯು ಶಿರಹಟ್ಟಿ ತಾಲೂಕಿನ ಕಬ್ಬು ಬೆಳೆಗಾರರ(sugar cane growers) ಜೀವ ಹಿಂಡುತ್ತಿದೆ. ಶಿರಹಟ್ಟಿ ತಾಲೂಕಿನ ರೈತರ(Farmers) ಕಬ್ಬನ್ನು, ಕಾರ್ಖಾನೆ ಕಟಾವು ಮಾಡದೇ ಸತಾಯಿಸುತ್ತಿದೆ. ಕಬ್ಬು ಕಡಿಯುವ ಗ್ಯಾಂಗ್​ಗಳಿಗೆ ಕಟಾವು ಕೂಲಿ ಮೊತ್ತ ಮುಗಿಸಿದರೂ ರೈತರ ಜಮೀನುಗಳಿಗೆ ಕಟಾವು ಗ್ಯಾಂಗ್ ಕಾರ್ಖಾನೆ ಕಳಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಕಬ್ಬು ಕಟಾವು ಗ್ಯಾಂಗ್ ಇವತ್ತು ಬರುತ್ತೆ, ನಾಳೆ ಬರುತ್ತದೆ ಎಂದು ರೈತರ ಜೊತೆ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಅಷ್ಟೇ ಅಲ್ಲ ಗ್ಯಾಂಗ್​ಗಳ ಮೂಲಕ ಮತ್ತೆ ಹೆಚ್ಚುವರಿಯಾಗಿ 1 ಟನ್​ಗೆ 500 ರಿಂದ 700ರೂಪಾಯಿ ವಸೂಲಿಗೆ ಕಾರ್ಖಾನೆ ಅಧಿಕಾರಿಗಳು ಬೇಡಿಕೆ ಇಡುತ್ತಿದ್ದಾರೆ ಎಂದು ರೈತರು ಗಂಭೀರ ಆರೋಪ ಮಾಡಿದ್ದಾರೆ.

ಜಮೀನಿನಲ್ಲೇ ಒಣಗುತ್ತಿದೆ ನೂರಾರು ಎಕರೆ ಕಬ್ಬು

ಇನ್ನು ಎರಡು ತಿಂಗಳು ಕಳೆದರೂ ಕಟಾವು ಮಾಡುತ್ತಿಲ್ಲ. ಹೀಗಾಗಿ ಶಿರಹಟ್ಟಿ ತಾಲೂಕಿನ ಸಾಸರವಾಡ, ಕಲ್ಲಾಗನೂರ, ತೊಳಲಿ, ಇಟಗಿ ಗ್ರಾಮದ ರೈತರ ನೂರಾರು ಎಕರೆ ಕಬ್ಬು ಜಮೀನಿನಲ್ಲೇ ಒಣಗುತ್ತಿದ್ದು, ಇದು ರೈತರನ್ನು ಕಂಗಾಲಾಗುವಂತೆ ಮಾಡಿದೆ. ಈಗಾಗಲೇ ಕಬ್ಬಿನ ತೋಟಕ್ಕೆ ನೀರು ಹರಿಸುವುದು ರೈತರು ನಿಲ್ಲಿಸಿದ್ದಾರೆ. ಹೀಗಾಗಿ ಕಬ್ಬು ಒಣಗುತ್ತಿದೆ. ಹೀಗೆ ಕಬ್ಬು ಒಣಗಿದ್ರೆ ತೂಕದಲ್ಲಿ ಸಾಕಷ್ಟು ಕಡಿಮೆಯಾಗುತ್ತದೆ. ಇದರಿಂದ ಕಾರ್ಖಾನೆಗೆ ಲಾಭವಾಗುತ್ತದೆ. ಆದರೆ, ನಮಗೆ ಹಾನಿಯಾಗುತ್ತದೆ ಎಂದು ರೈತರು ಗೋಳಾಡುತ್ತಿದ್ದಾರೆ.

ಇದನ್ನೂ ಓದಿ:ಬೆಳಗಾವಿ: ಭೀಕರ ಬರಗಾಲದಿಂದ ತತ್ತರಿಸಿದ ಕಬ್ಬು ಬೆಳೆಗಾರರು: ಸಕ್ಕರೆ ಉದ್ಯಮಕ್ಕೂ ಸಂಕಷ್ಟ?

ಒಂದುವರೆ ತಿಂಗಳಿಂದ ವಿಜಯನಗರ ಶುಗರ್ಸ್ ಅಧಿಕಾರಿಗಳು ಕಟಾವು ಮಾಡುವುದಾಗಿ ಆಡವಾಡುತ್ತಿದ್ದಾರೆ. ಹೀಗಾಗಿ ಅರ್ಧದಷ್ಟು ಇಳುವರಿಯಲ್ಲಿ ಕುಂಠಿತವಾಗುತ್ತದೆ.  ರೈತರ ಅಸಾಯಕತೆ ದುರ್ಬಳಕೆ ಮಾಡಿಕೊಂಡು ರೈತರಿಂದ ಹಣ ಸುಲಿಗೆಗೆ ಕಾರ್ಖಾನೆ ನಿಂತಿದೆ. ಜಿಲ್ಲಾಧಿಕಾರಿಗಳು ರೈತರು ಕಾರ್ಖಾನೆ ಸಭೆಯಲ್ಲಿ ರೈತರಿಂದ ಹೆಚ್ಚುವರಿ ಹಣ ವಸೂಲಿ ಮಾಡದಂತೆ ಕಾರ್ಖಾನೆಗೆ ತಾಕೀತ್ತು ಮಾಡಿದೆ. ಆದರೂ ವಿಜಯನಗರ ಶುಗರ್ಸ್ ಕಂಪನಿ ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ ಈ ವಿಷಯ ಜಿಲ್ಲಾಡಳಿತ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೂ ಕೂಡ ರೈತರ ನೆರವಿಗೆ ಬರುತ್ತಿಲ್ಲ ಎಂದು ರೈತರು ಕಿಡಿಕಾರಿದ್ದಾರೆ.

ಈ ಬಗ್ಗೆ ವಿಜಯನಗರ ಸಕ್ಕರೆ ಕಾರ್ಖಾನೆ ಎಜಿಎಂ ಮಂಜುನಾಥ್ ರೈತರ ಆರೋಪಗಳೆಲ್ಲ ಅಲ್ಲಗಳೆದಿದ್ದಾರೆ. ಸರ್ಕಾರದ ಆದೇಶದಂತೆ ಈ ವರ್ಷ ಕಾರ್ಖಾನೆ ಒಂದು ತಿಂಗಳ ತಡವಾಗಿ ಆರಂಭವಾಗಿದೆ. ಹೀಗಾಗಿ ಕಟಾವು ವಿಳಂಬವಾಗಿದೆ. ಯಾವ ರೈತರಿಂದಲೂ ಹೆಚ್ಚಿನ ಹಣ ವಸೂಲಿ ಮಾಡಿಲ್ಲ ಎಂದಿದ್ದಾರೆ. ಗದಗ ಜಿಲ್ಲೆಯ ಕಬ್ಬು ಬೆಳೆದ ರೈತರಿಗೆ ಅನ್ಯಾಯ, ಸಕ್ಕರೆ ಕಾರ್ಖನೆ ಕಬ್ಬು ಕಟಾವಿಗೆ ವಿಳಂಬ ಮಾಡಿದ್ರೆ ತಕ್ಷಣ ಸ್ಪಂದಿಸಲು ಮೂರು ತಂಡ ಜಿಲ್ಲಾಧಿಕಾರಿಗಳು ರಚನೆ ಮಾಡಿದ್ದಾರೆ. ಆದ್ರೆ, ಈ ತಂಡಗಳು ಎಸಿ ಕಚೇರಿಯಲ್ಲೇ ಕುಳಿತಿವೆ. ಯಾವೊಬ್ಬ ಅಧಿಕಾರಿಗಳು ತಾಲೂಕುಗಳಲ್ಲಿ ಸಂಚಾರ ಮಾಡಿ ಕಬ್ಬು ಬೆಳೆಗಾರರಿಗೆ ಆಗುತ್ತಿರೋ ಅನ್ಯಾಯ ಸರಿಪಡಿಸುವ ಗೋಜಿಗೆ ಹೋಗುತ್ತಿಲ್ಲ. ಹೀಗಾಗಿ ರೈತರಿಗೆ ಬಂಡವಾಳ ಶಾಹಿಗಳಿಂದ ನಿರಂತರ ಶೋಷಣೆಯಾಗುತ್ತಿದೆ. ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಕಬ್ಬು ಬೆಳೆಗಾರರಿಗೆ ಕಾರ್ಖಾನೆಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ