AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಜಾನುವಾರು ತೊಳೆಯಲು ಹೋಗಿ ಹೊಂಡದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಶವ ಪತ್ತೆ

ಗದಗ ನಗರದ ರಹಮತ್ ಬಡಾವಣೆ ಬಳಿಯ ಹೊಂಡದಲ್ಲಿ ನಿನ್ನೆ(ಆ.15) ಮಧ್ಯಾಹ್ನ ಆಕಳು ಮತ್ತು ಕರುವನ್ನು ಸ್ನಾನ ಮಾಡಿಸಲು ತೆರಳಿದ್ದ ಮಹಿಳೆ ಸೇರಿ ನಾಲ್ವರು ನೀರಿನಲ್ಲಿ ಮುಳುಗಿದ್ದರು. ಈ ವೇಳೆ ಸ್ಥಳೀಯರು ಇಬ್ಬರನ್ನು ಬಚಾವ್​ ಮಾಡಿದ್ದು, ಇಬ್ಬರು ಬಾಲಕರು ಪತ್ತೆಯಾಗಿರಲಿಲ್ಲ. ಇದೀಗ ಇಬ್ಬರ ಮೃತದೇಹವನ್ನು ಹೊರತೆಗೆದಿದ್ದಾರೆ.

ಗದಗ: ಜಾನುವಾರು ತೊಳೆಯಲು ಹೋಗಿ ಹೊಂಡದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಶವ ಪತ್ತೆ
ಮೃತ ಬಾಲಕರು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Aug 16, 2023 | 9:59 AM

Share

ಗದಗ, ಆ.16: ಜಾನುವಾರು ತೊಳೆಯಲು ಹೋಗಿ ಹೊಂಡದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸಂತೋಷ್ ಕುಂಬಾರ್ (14), ಹಾಗೂ ಇಂದು ಬೆಳಗ್ಗೆ ಮೊಹಮ್ಮದ್ ಅಮನ್ (12) ಎಂಬುವವನ ಶವ ಪತ್ತೆಯಾಗಿದೆ. ನಿನ್ನೆ(ಆ.15) ಮಧ್ಯಾಹ್ನ ಗದಗ(Gadag) ನಗರದ ರಹಮತ್ ಬಡಾವಣೆ ಬಳಿಯ ಹೊಂಡದಲ್ಲಿ ಆಕಳು ಮತ್ತು ಕರುವನ್ನು ಸ್ನಾನ ಮಾಡಿಸಲು ಮಹಿಳೆ ಸೇರಿ ನಾಲ್ವರು ತೆರಳಿದ್ದರು. ಈ ವೇಳೆ ನಾಲ್ವರೂ ನೀರಿನಲ್ಲಿ ಮುಳುಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಮಹಿಳೆ ಶಾಹೀನ್ ಹುಬ್ಬಳ್ಳಿ ಹಾಗೂ ಆಕೆಯ ಮಗ ಮೊಹಮ್ಮದ್ ಆದಿಲ್​ನನ್ನು ಬಚಾವ್ ಮಾಡಿದ್ದರು. ಇನ್ನು ನಾಪತ್ತೆಯಾಗಿದ್ದ ಇಬ್ಬರು ಬಾಲಕರಿಗಾಗಿ ನಿನ್ನೆಯಿಂದ ಶೋಧ ಕಾರ್ಯ ನಡೆದಿತ್ತು. ಇದೀಗ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ.

ಘಟನೆ ವಿವರ

ಅಕ್ರಮವಾಗಿ ಮಣ್ಣಿನ ಗಣಿಗಾರಿಗೆ ನಡೆಸಿದ ಹೊಂಡದಲ್ಲಿ ನೀರು ತುಂಬಿತ್ತು. ನಿನ್ನೆ ಆಕಳು ಕರುವನ್ನು ಸ್ನಾನ ಮಾಡಿಸಲೆಂದು ಮಹಿಳೆ ಶಾಹಿನ್ ತನ್ನ ಮಗನೊಂದಿಗೆ ಹೊಂಡದ ಬಳಿ ಬಂದಿದ್ದರು. ಈ ವೇಳೆ ಶಾಹಿನ್ ಮಗನ ಮೇಲೆ ಆಕಳು ಎರಗಿದೆ. ಇದರಿಂದ ಬಾಲಕ ನೀರಿನಲ್ಲಿ ಮುಳುಗಿದ್ದಾನೆ. ಕೂಡಲೇ ಶಾಹಿನ್, ಮಗನ ರಕ್ಷಣೆಗೆ ದಾವಿಸಿದ್ದಳು. ಈಕೆಯೊಂದಿಗೆ 14 ವರ್ಷದ ಸಂತೋಷ್ ಕುಂಬಾರ, 12 ಮಹ್ಮದ್ ಅಮನ್ ಹುಬ್ಬಳ್ಳಿ ಕೂಡ ಹೊಂಡಕ್ಕೆ ಹಾರಿದ್ದರು. ಇವರ್ಯಾರಿಗೂ ಈಜು ಬಾರದ ಹಿನ್ನಲೆ ನಾಲ್ವರೂ ನೀರಿನಲ್ಲಿ ಮುಳುಗುತ್ತಿರುವುದನ್ನು ನೋಡಿದ ರಾಜಾ ಸಿಂಗ್ ಎಂಬವರು ಕೂಡಲೇ ಹೊಂಡಕ್ಕೆ ಹಾರಿ ಮಹಿಳೆ ಮತ್ತು ಆಕೆಯ ಮಗನನ್ನು ರಕ್ಷಿಸಿದ್ದರು.

ಇದನ್ನೂ ಓದಿ:Karnataka Breaking Kannada News Live: ಕುಣಿಗಲ್ ತಾಲೂಕಿನ ಸಂತೆ ಮಾವತ್ತೂರು ಬಳಿ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮದ ದಳದ ಸಿಬ್ಬಂದಿಗಳು ಇಬ್ಬರು ಬಾಲಕರಿಗಾಗಿ ಹುಡುಕಾಟ ನಡೆಸಿದ್ದರು. ಜೊತೆಗೆ ಗದಗ ಎಸ್​ಪಿ ಬಿ.ಎಸ್.ನೇಮಗೌಡ ಆಗಮಿಸಿ ಪರಿಶೀಲನೆ ನಡೆಸಿದ್ದರು. ಮಣ್ಣು ಗಣಿಗಾರಿಕೆ ಮಾಡಿ ಹೊಂಡವನ್ನು ಹಾಗೇ ಬಿಟ್ಟಿದ್ದಾರೆ ಎನ್ನುವ ಮಾಹಿತಿ ಇದೆ. ಈ ಜಾಗ ಯಾರ ಹೆಸರಿನಲ್ಲಿದೆ ಎಂದು ನೋಡಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು. ಇನ್ನು ಗದಗ ತಾಲೂಕಿನ ಹುಲಕೋಟಿ, ಕುರ್ತಕೋಟಿ, ಕಳಸಾಪೂರ, ಲಕ್ಕುಂಡಿ ಸೇರಿದಂತೆ ಹಲವು ಗ್ರಾಮಗಳ ಸುತ್ತಮುತ್ತ ಇಂತಹ 50ಕ್ಕೂ ಅಧಿಕ ಸಾವಿನ ಹೊಂಡಗಳಿವೆ. ಈಗಾಗಲೇ ಗದಗ ತಾಲೂಕಿನಲ್ಲಿ ಇಂತಹ ಅಕ್ರಮ ಹೊಂಡಕ್ಕೆ ನಾಲ್ಕು ಮಕ್ಕಳು ಬಲಿಯಾಗಿದ್ದು, ಈಗ ಮತ್ತೆ ಬಾಳಿ ಬದುಕಬೇಕಾದ ಇಬ್ಬರು ಮಕ್ಕಳು ನೀರು ಪಾಲಾಗಿರುವುದು ದುರಂತ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 am, Wed, 16 August 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ