AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಮೂರು ವರ್ಷ ಹಳೆಯ ಪ್ರಕರಣದ ದ್ವೇಷ; ಅಪ್ರಾಪ್ತೆಯ ಮೇಲೆ ನಾಲ್ವರಿಂದ ದೌರ್ಜನ್ಯ ಆರೋಪ

ಅದು ಮೂರು ವರ್ಷಗಳ ಹಿಂದಿನ ಹಳೇ ಕೇಸ್. ಯುವತಿ ಮೇಲೆ ನಡೆದಿದ್ದ ಅತ್ಯಾಚಾರ, ಬ್ಲಾಕ್ ಮೇಲ್ ಪ್ರಕರಣ. ಇದೇ ಕೇಸ್ ಈಗ ದ್ವೇಷ ಬೆಳಸಿ ಸೇಡು ತೀರಿಸಿಕೊಳ್ಳುವ ಮಟ್ಟಿಗೆ ಬೆಳೆದು ನಿಂತಿದೆ. ಅಂದು ಅಕ್ಕನ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಯೇ ಇಂದು ತಂಗಿಯ ಮೇಲೆಯೂ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಗದಗ: ಮೂರು ವರ್ಷ ಹಳೆಯ ಪ್ರಕರಣದ ದ್ವೇಷ; ಅಪ್ರಾಪ್ತೆಯ ಮೇಲೆ ನಾಲ್ವರಿಂದ ದೌರ್ಜನ್ಯ ಆರೋಪ
ಸಂತ್ರಸ್ಥ ಬಾಲಕಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 10, 2024 | 8:41 PM

Share

ಗದಗ, ಫೆ.10: ಜಿಲ್ಲೆಯ ಮುಂಡರಗಿ(Mundaragi) ಪೊಲೀಸ್ ಠಾಣೆ ವ್ಯಾಪ್ತಿಯ ಅಂತಾರಾಷ್ಟ್ರೀಯ ಯೋಗಪಟು ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ದುರುಳರು ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಮುಂಡರಗಿ ನಿವಾಸಿಗಳಾದ ಮೌಲಾಹುಸೇನ್ ಬಾಬುಸಾಬ್ ಕರಣಿ ಹಾಗೂ ಈತನ ಸಹೋದರ ಖಾಜಾಹುಸೇನ್ ಬಾಬುಸಾಬ್ ಕರಣಿ ಇನ್ನೂ ಇಬ್ಬರು ಸಹಚರರಿಂದ ದಾಳಿ ನಡೆದಿದೆ ಎಂದು ಬಾಲಕಿ ಆರೋಪ ಮಾಡಿದ್ದಾಳೆ.

ಪ್ರಕರಣ ದಾಖಲಾದರೂ ಆರೋಪಿಗಳನ್ನ ಬಂಧಿಸಿದ ಪೊಲೀಸರು

2023 ನವೆಂಬರ್​ 20 ರಂದು ಮಧ್ಯಾಹ್ನ ಬಾಲಕಿ ಒಬ್ಬಳೇ ಮನೆಯಲ್ಲಿ ಇದ್ದಾಗ ಪ್ರಮುಖ ಆರೋಪಿ ಮೌಲಾಹುಸೇನ್ ಬಾಬುಸಾಬ್ ಕರಣಿ ಹಾಗೂ ಆತನ ಸಹೋದರ ಮತ್ತು ಇನ್ನಿಬ್ಬರು ಸಹಚರರು ಸೇರಿ ಮನಬಂದಂತೆ ಮಾರಣಾಂತಿಕ ಹಲ್ಲೆ ನಡೆಸಿ ದೌರ್ಜನ್ಯ ಎಸಗಿ ಮೂರ್ಚೆ ಬಂದ ಬಳಿಕ ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಬಗ್ಗೆ ಮುಂಡರಗಿ ಪೊಲೀಸರಿಗೆ ದೂರು ದಾಖಲಾದರೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದ್ದಾರೆ. ಮುಂಡರಗಿ ಠಾಣೆಯ ಸಿಪಿಐ ಮಂಜುನಾಥ ಕುಸುಗಲ್ ಹಾಗೂ ಪಿಎಸ್ಐ ಸುಮಾ ಗೊರ್ಬಾಳ ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿಯಿಂದ ಲೈಂಗಿಕ‌ ದೌರ್ಜನ್ಯ ಆರೋಪ: ದೂರು ದಾಖಲು

ಮೂರು ವರ್ಷದ ಹಿಂದಿನ ಪ್ರಕರಣದ ದ್ವೇಷ

ಅಂದಹಾಗೆ ಮೂರು ವರ್ಷಗಳ ಹಿಂದೆ ಆರೋಪಿ ಮೌಲಾಹುಸೇನ್ ಅಪ್ರಾಪ್ತೆ ಬಾಲಕಿಯ ಅಕ್ಕನನ್ನು ಅತ್ಯಾಚಾರ ಮಾಡಿದ್ದಲ್ಲದೆ, ಅತ್ಯಾಚಾರದ ವಿಡಿಯೋ ತುಣುಕುಗಳನ್ನ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದನಂತೆ. ಹಲವು ಬಾರಿ ಹಣಕ್ಕೂ ಬೇಡಿಕೆ ಇಟ್ಟು ಆಕೆಯನ್ನ ಮನಬಂದಂತೆ ಬಳಸಿಕೊಂಡಿದ್ದಾನಂತೆ. ಆತನ ಕಿರುಕುಳಕ್ಕೆ ಬೇಸತ್ತು ಸೇತುವೆ ಮೇಲಿಂದ ಮೂರ್ಚೆ ಬಂದು ಬಿದ್ದು ಗಾಯಗೊಂಡು ಆಸ್ಪತ್ರೆಗೆ ಅಲೆದಾಟ ನಡೆಸಿದ್ದಾಳೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ ಮೂರು ತಿಂಗಳು ಜೈಲು ವಾಸ ಅನುಭವಿಸಿ ಬೇಲ್ ಮೇಲೆ ಹೊರಗಡೆ ಬಂದಿದ್ದಾನೆ. ಆದರೆ, ಇನ್ನೂ ಕೇಸ್ ವಿಚಾರಣೆ ಹಂತದಲ್ಲಿದೆ.

ಈ ಹಿನ್ನಲೆ ಆತ ಕೇಸ್ ವಾಪಸ್ ಪಡೆಯಲು ಒತ್ತಡ ಹಾಕುತ್ತಿದ್ದಾರಂತೆ. ಹೀಗಾಗಿ ಕೇಸ್ ಸಾಕ್ಷಿ ನಾಶಕ್ಕೆ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ಥೆ ಬಾಲಕಿ ತಾಯಿ ಆರೋಪಿಸಿದ್ದಾಳೆ. ಈ ಕುರಿತು ಡಿಸಿ, ಎಸ್ಪಿ, ಉಸ್ತುವಾರಿ ಸಚಿವರ ಗಮನಕ್ಕೆ ತಂದರೂ ನ್ಯಾಯ ಸಿಕ್ಕಿಲ್ಲ ಎಂದು ಬಾಲಕಿಯ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಕೇಸ್ ಸಂಬಂಧ ಮುಂಡರಗಿ ಪೊಲೀಸರು ಬಿ. ರಿಪೋರ್ಟ್ ಹಾಕಲು ಮುಂದಾಗಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಹೇಳ್ತಿರೋದು ಸುಳ್ಳು ಎಂದು ಪೋಲೀಸರೇ ಬಾಲಕಿಗೆ ಬೆದರಿಕೆ ಹಾಕಿದ್ದಾರಂತೆ. ಜೊತೆಗೆ ನಮ್ಮ ಯೋಗ ಗುರುಗಳನ್ನೂ ಸಹ ಠಾಣೆಗೆ ಕರೆಸಿ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ. ನ್ಯಾಯಕ್ಕಾಗಿ ಎಸ್ಪಿ ಡಿಸಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಸೇರಿ ಇಡೀ ಸರ್ಕಾರಕ್ಕೂ ಸಹ ಅಂಗಲಾಚಿ ಬೇಡಿಕೊಂಡಿದ್ದಾರೆ. ಆದರೂ, ಅವರಿಗೆ ಯಾರೂ ನ್ಯಾಯ ಕೊಡಿಸುವ ಭರವಸೆ ನೀಡಿಲ್ಲ. ಹೀಗಾಗಿ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್