AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಪಾಲನಾ ಕೇಂದ್ರದಲ್ಲಿದ್ದ ಸಂತ್ರಸ್ತ ಬಾಲಕಿ ಗರ್ಭಿಣಿ, 3 ಮಕ್ಕಳ ತಂದೆಯಿಂದ ನೀಚ ಕೃತ್ಯ -ಅರೆಸ್ಟ್​

ಪರಿಚಯಸ್ಥ ವ್ಯಕ್ತಿಯಿಂದಲೇ ಸಂತ್ರಸ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ತಿಳಿದುಬಂದಿದೆ. 35 ವರ್ಷದ ಮೂರು ಮಕ್ಕಳ ತಂದೆಯಿಂದ ಕುಕೃತ್ಯ ನಡೆದಿದೆ. ಬಾಲಕಿ ಗರ್ಭಿಣಿಯಾದ ಮೇಲೆ ಅತ್ಯಾಚಾರವಾದ ಬಗ್ಗೆ ಮಾಹಿತಿ ಬಹಿರಂಗವಾಗಿದೆ. ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಮಕ್ಕಳ ಪಾಲನಾ ಕೇಂದ್ರದಲ್ಲಿದ್ದ ಸಂತ್ರಸ್ತ ಬಾಲಕಿ ಗರ್ಭಿಣಿ, 3 ಮಕ್ಕಳ ತಂದೆಯಿಂದ ನೀಚ ಕೃತ್ಯ -ಅರೆಸ್ಟ್​
ಗದಗ ಮಕ್ಕಳ ಪಾಲನಾ ಕೇಂದ್ರದಲ್ಲಿದ್ದ ಬಾಲಕಿ ಗರ್ಭಿಣಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಸಾಧು ಶ್ರೀನಾಥ್​|

Updated on:Sep 04, 2023 | 10:16 AM

Share

ದಗ, ಸೆಪ್ಟೆಂಬರ್​​ 4: ಮಕ್ಕಳ ಪಾಲನಾ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ (pregnant). ಗದಗ (gadag) ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. 2019ರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಹಿನ್ನೆಲೆ ಕೇಂದ್ರಕ್ಕೆ ಶಿಫ್ಟ್ ಮಾಡಿಸಲಾಗಿತ್ತು. ಆಧಾರ್ ಕಾರ್ಡ್ ಮಾಡಿಸಲು ಮನೆಗೆ ಹೋಗಿದ್ದು, ವಾಪಸ್ ಬರುವಾಗ ಬಾಲಕಿಯ ಮೇಲೆ ಅತ್ಯಾಚಾರ (rape) ನಡೆದಿದೆ. ತಂದೆಯೊಂದಿಗೆ (father) ಮನೆಗೆ ಹೋಗಿ ಪರಿಚಯಸ್ಥ ವ್ಯಕ್ತಿಯೊಂದಿಗೆ ಬಾಲಕಿ ವಾಪಸಾಗುತ್ತಿದ್ದಳು.

ಪರಿಚಯಸ್ಥ ವ್ಯಕ್ತಿ ನಾರಾಯಣಸಿಂಗ್​ನಿಂದಲೇ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ತಿಳಿದುಬಂದಿದೆ. 35 ವರ್ಷದ ಮೂರು ಮಕ್ಕಳ ತಂದೆಯಿಂದಲೇ ಈ ನೀಚ ಕೃತ್ಯ ನಡೆದಿದೆ. ಬಾಲಕಿ ಗರ್ಭಿಣಿಯಾದ ಮೇಲೆ ಅತ್ಯಾಚಾರವಾದ ಬಗ್ಗೆ ಮಾಹಿತಿ ಬಹಿರಂಗವಾಗಿದೆ.

ಇದನ್ನೂ ಓದಿ: ಗದಗ: ಲವ್ ಪ್ರಕರಣದಲ್ಲಿ ನಿರ್ಲಕ್ಷ್ಯ, ಪಿಎಸ್​ಐ ಅಮಾನತು

ಕಂಗಾಲಾದ ಪಾಲನಾ ಕೇಂದ್ರದ ಸಿಬ್ಬಂದಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್ 26 ನೇ ತಾರೀಖು ಮಹಿಳಾ ಠಾಣೆ ಪೊಲೀಸರಿಗೆ ಸಿಬ್ಬಂದಿ ದೂರು ನೀಡಿದ್ದಾರೆ. ಮಹಿಳಾ ಠಾಣೆ ಪೊಲೀಸರು ಆರೋಪಿ ನಾರಾಯಣಸಿಂಗ್​ನನ್ನು ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ತಿಳಿಸಿದ್ದಾರೆ.

ಗಂಗಾವತಿ ಬಾಲಕಿಯ ನಗ್ನ ವಿಡಿಯೋದಿಂದ ಬ್ಲ್ಯಾಕ್​ ಮೇಲ್: ಯುವಕ ಅರೆಸ್ಟ್

ಕೊಪ್ಪಳ: ಅಪ್ರಾಪ್ತ ಬಾಲಕಿಯ ಬೆತ್ತಲೆ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್    ಮಾಡುತ್ತಿದ್ದ ಯುವಕನೋರ್ವನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು ಪ್ರೀತಿ-ಪ್ರೇಮ (Love) ನಾಟಕವಾಡಿ ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ರೆಕಾರ್ಡ್​ ಮಾಡಿಟ್ಟುಕೊಂಡು ಬಳಿಕ ಬ್ಲ್ಯಾಕ್​ ಮೇಲ್​ ಮಾಡುತ್ತಿದ್ದ ಮುಸ್ತಾಫಾ ಎನ್ನುವಾತನ್ನನ್ನು ಗಂಗಾವತಿ ಪೊಲೀಸರು ಬಂಧಿಸಿದ್ದಾರೆ.

ಘಟನೆ ಹಿನ್ನೆಲೆ:

ಇನ್ಸ್ಟಾಗ್ರಾಮ್ ಮೂಲಕ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡು ಬಳಿಕ ಪ್ರೀತಿ ಪ್ರೇಮ ನಾಟಕವಾಡಿದ್ದಾನೆ. ಹೀಗೆ ಒಂದು ದಿನ ಪ್ರೀತಿ ನಾಟಕದೊಂದಿಗೆ ನಂಬಿಸಿ ವಿಡಿಯೋ ಕಾಲ್​ನಲ್ಲಿ ವಿದ್ಯಾರ್ಥಿನಿಯನ್ನು ಬೆತ್ತಲಾಗುವಂತೆ ಹೇಳಿ ಅದನ್ನು ಸ್ಕ್ರೀನ್ ರೆಕಾರ್ಡ್​ ಮಾಡಿಕೊಂಡಿದ್ದಾನೆ. ನಂತರ ಹೀಗೆ ಪ್ರತಿ ಬಾರಿಯೂ ಸಹ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸುತ್ತಿದ್ದ. ಆದ್ರೆ, ಇದಕ್ಕೆ ವಿದ್ಯಾರ್ಥಿನಿ ನಿರಾಕರಿಸಿದಾಗ ಆ ವಿಡಿಯೋವನ್ನು ತೋರಿಸಿ ಬ್ಲ್ಯಾಕ್​ ಮೇಲ್​ ಮಾಡಲು ಶುರು ಮಾಡಿದ್ದಾನೆ. ಇದರಿಂದ ಬೇಸತ್ತು ವಿದ್ಯಾರ್ಥಿನಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ದೂರಿನಂತೆ ಪೊಲೀಸರು ಇದೀಗ ಆರೋಪಿ ಮುಸ್ತಾಫನನ್ನು ಪೋಕ್ಸೊ ಕಾಯ್ದೆ ಅಡಿಯಲ್ಲಿ ಬಂಧಿಸಿದ್ದಾರೆ.

ಗದಗ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:36 am, Mon, 4 September 23

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ