Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತ ಸಾಗರದಲ್ಲಿ ಹಾಲಕೆರೆ ರಥೋತ್ಸವ: ಬೆಳ್ಳಿ ರಥ ಎಳೆದು ಸಂಭ್ರಮಿಸಿದ ಮಹಿಳೆಯರು

Gadag News: ಗಜೇಂದ್ರಗಡ ತಾಲೂಕಿನ ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನಮಠದ ಲಿಂಗೈಕ್ಯ ಗುರು ಅನ್ನದಾನ ಸ್ವಾಮಿಯ 46ನೇ ಪುಣ್ಯಸ್ಮರಣೋತ್ಸವ, ಮಹಿಳಾ ಸಂಘಟನೆಗಳ ಸಮಾವೇಶ ಹಾಗೂ ಬೆಳ್ಳಿ ರಥೋತ್ಸವ ಇಂದು ವೈಭವಯುತವಾಗಿ ನೆರವೇರಿದೆ. ವಿಶೇಷ ಅಂದರೆ ಈ ಜಾತ್ರೆಯಲ್ಲಿ ಬೆಳ್ಳಿ ರಥೋತ್ಸವ ಮಹಿಳೆಯರೇ ಎಳೆಯುತ್ತಾರೆ.

ಭಕ್ತ ಸಾಗರದಲ್ಲಿ ಹಾಲಕೆರೆ ರಥೋತ್ಸವ: ಬೆಳ್ಳಿ ರಥ ಎಳೆದು ಸಂಭ್ರಮಿಸಿದ ಮಹಿಳೆಯರು
ಬೆಳ್ಳಿ ರಥ ಎಳೆದ ಮಹಿಳೆಯರು
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 28, 2023 | 7:40 PM

ಗದಗ, ಆಗಸ್ಟ್​ 28: ಗಜೇಂದ್ರಗಡ ತಾಲೂಕಿನ ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನಮಠದ ಲಿಂಗೈಕ್ಯ ಗುರು ಅನ್ನದಾನ ಸ್ವಾಮಿಗಳ 46ನೇ ಪುಣ್ಯಸ್ಮರಣೋತ್ಸವ (Rathotsava), ಮಹಿಳಾ ಸಂಘಟನೆಗಳ ಸಮಾವೇಶ ಹಾಗೂ ಬೆಳ್ಳಿ ರಥೋತ್ಸವ ಕಾರ್ಯಕ್ರಮವು ಇಂದು ಸಂಜೆ ವೈಭವಯುತವಾಗಿ ನೆರವೇರಿದೆ. ಹಾಲಕೆರೆ ಕ್ಷೇತ್ರಕ್ಕೆ ಆಗಮಿಸಿದ್ದ ಎಲ್ಲ ಹಿರಿ-ಕಿರಿಯ ಸ್ವಾಮೀಜಿಗಳು ಹಾಗೂ ಹಾಲಕೆರೆ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಬೆಳ್ಳಿ ರಥೋತ್ಸವಕ್ಕೆ ಪೂಜೆಗೈದರು. ನಂತರ ಸಂಜೆ 6:30ಕ್ಕೆ ಬೆಳ್ಳಿ ರಥೋತ್ಸವ ಅದ್ಧೂರಿಯಾಗಿ ನಡೆಯಿತು.

ವಿಶೇಷ ಅಂದರೆ ಈ ಜಾತ್ರೆಯಲ್ಲಿ ಬೆಳ್ಳಿ ರಥೋತ್ಸವ ಮಹಿಳೆಯರೇ ಎಳೆಯುತ್ತಾರೆ. ಬೆಳ್ಳಿ ರಥೋತ್ಸವಕ್ಕೆ ಹಗರಿಬೊಮ್ಮನ ಹಳ್ಳಿಯ ಶಾಸಕಿ ಲತಾ ಮಲ್ಲಿಕಾರ್ಜುನ ಚಾಲನೆ ನೀಡಿದರು. ನಂತರ ಮಹಿಳೆಯರು, ವಿದ್ಯಾರ್ಥಿನಿಯರು ಬೆಳ್ಳಿ ತೇರನ್ನು ಎಳೆದು ಸಂಭ್ರಮಿಸಿದರು.

ಇದನ್ನೂ ಓದಿ: ಗದಗ: ಸೆ 3 ರಂದು ಟರ್ಫ ಹಾಕಿ ಕ್ರೀಡಾಂಗಣ ಲೋಕಾರ್ಪಣೆ: ಸಚಿವ ಎಚ್​ಕೆ ಪಾಟೀಲ

ಭಕ್ತರು ಅನ್ನದಾನೇಶ್ವರ ಮಹಾರಾಜ್ ಕೀ ಜೈ, ಗುರು ಕುಮಾರೇಶ್ವರ ಮಹಾರಾಜ್ ಕೀ ಜೈ, ಲಿಂಗೈಕ್ಯ ಗುರು ಅನ್ನದಾನ ಸ್ವಾಮೀಜಿ ಕೀ ಜೈ, ಅಭಿನವ ಅನ್ನದಾನ ಸ್ವಾಮೀಜಿ ಕೀ ಜೈ, ಮುಪ್ಪಿನ ಬಸವಲಿಂಗ ಸ್ವಾಮೀಜಿ ಕೀ ಜೈ ಎಂದು ಜಯ ಘೋಷಣೆಗಳೊಂದಿಗೆ ತೇರು ಎಳೆದರು. ರಥವು ಯಶಸ್ವಿಯಾಗಿ ಮರಳಿ ಸ್ವಸ್ಥಳಕ್ಕೆ ಬಂದು ನಿಂತಾಗ ಚಪ್ಪಾಳೆ ತಟ್ಟಿದ ಭಕ್ತರು ಭಕ್ತಿಭಾವ ಮೆರೆದರು. ಮಹಿಳೆಯರು ಭಕ್ತಿ, ಶ್ರದ್ಧೆಯಿಂದ ತೇರಿಗೆ ಪುಷ್ಪ ಎರಚುವ ಮೂಲಕ ಸಂಭ್ರಮದಿಂದ ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ಇದನ್ನೂ ಓದಿ: ಗದಗ: ಸರ್ಕಾರಿ ಶಾಲೆಯ ಮೈದಾನದಲ್ಲಿ ತೆಲೆ ಎತ್ತಿದ ಅಕ್ರಮ ಮನೆಗಳು; ನಮ್ಮ ಶಾಲೆ ಉಳಿಸಿ ಎಂದು ವಿದ್ಯಾರ್ಥಿಗಳ ಆಕ್ರೋಶ!

ಈ ಸಂದರ್ಭದಲ್ಲಿ ಗದಗ, ಧಾರವಾಡ, ಕೊಪ್ಪಳ, ಬಾಗಲಕೋಟ, ವಿಜಯನಗರ, ಬಳ್ಳಾರಿ, ರಾಯಚೂರು, ದಾವಣಗೇರಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಅದರಲ್ಲೂ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಸೇರಿದ್ದರು.

ನರೇಗಲ್ ಸಮೀಪದ ಹಾಲಕೆರೆ ಗ್ರಾಮದಲ್ಲಿ ಅನ್ನದಾನೇಶ್ವರ ಸಂಸ್ಥಾನಮಠದ ಲಿಂಗೈಕ್ಯ ಗುರು ಅನ್ನದಾನ ಸ್ವಾಮಿಗಳ 46ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಜರುಗಿದ ಬೆಳ್ಳಿ ತೇರನ್ನು ಮಹಿಳೆಯರು ಎಳೆದು ಸಂಭ್ರಮಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ