AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತ ಸಾಗರದಲ್ಲಿ ಹಾಲಕೆರೆ ರಥೋತ್ಸವ: ಬೆಳ್ಳಿ ರಥ ಎಳೆದು ಸಂಭ್ರಮಿಸಿದ ಮಹಿಳೆಯರು

Gadag News: ಗಜೇಂದ್ರಗಡ ತಾಲೂಕಿನ ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನಮಠದ ಲಿಂಗೈಕ್ಯ ಗುರು ಅನ್ನದಾನ ಸ್ವಾಮಿಯ 46ನೇ ಪುಣ್ಯಸ್ಮರಣೋತ್ಸವ, ಮಹಿಳಾ ಸಂಘಟನೆಗಳ ಸಮಾವೇಶ ಹಾಗೂ ಬೆಳ್ಳಿ ರಥೋತ್ಸವ ಇಂದು ವೈಭವಯುತವಾಗಿ ನೆರವೇರಿದೆ. ವಿಶೇಷ ಅಂದರೆ ಈ ಜಾತ್ರೆಯಲ್ಲಿ ಬೆಳ್ಳಿ ರಥೋತ್ಸವ ಮಹಿಳೆಯರೇ ಎಳೆಯುತ್ತಾರೆ.

ಭಕ್ತ ಸಾಗರದಲ್ಲಿ ಹಾಲಕೆರೆ ರಥೋತ್ಸವ: ಬೆಳ್ಳಿ ರಥ ಎಳೆದು ಸಂಭ್ರಮಿಸಿದ ಮಹಿಳೆಯರು
ಬೆಳ್ಳಿ ರಥ ಎಳೆದ ಮಹಿಳೆಯರು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Aug 28, 2023 | 7:40 PM

Share

ಗದಗ, ಆಗಸ್ಟ್​ 28: ಗಜೇಂದ್ರಗಡ ತಾಲೂಕಿನ ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನಮಠದ ಲಿಂಗೈಕ್ಯ ಗುರು ಅನ್ನದಾನ ಸ್ವಾಮಿಗಳ 46ನೇ ಪುಣ್ಯಸ್ಮರಣೋತ್ಸವ (Rathotsava), ಮಹಿಳಾ ಸಂಘಟನೆಗಳ ಸಮಾವೇಶ ಹಾಗೂ ಬೆಳ್ಳಿ ರಥೋತ್ಸವ ಕಾರ್ಯಕ್ರಮವು ಇಂದು ಸಂಜೆ ವೈಭವಯುತವಾಗಿ ನೆರವೇರಿದೆ. ಹಾಲಕೆರೆ ಕ್ಷೇತ್ರಕ್ಕೆ ಆಗಮಿಸಿದ್ದ ಎಲ್ಲ ಹಿರಿ-ಕಿರಿಯ ಸ್ವಾಮೀಜಿಗಳು ಹಾಗೂ ಹಾಲಕೆರೆ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಬೆಳ್ಳಿ ರಥೋತ್ಸವಕ್ಕೆ ಪೂಜೆಗೈದರು. ನಂತರ ಸಂಜೆ 6:30ಕ್ಕೆ ಬೆಳ್ಳಿ ರಥೋತ್ಸವ ಅದ್ಧೂರಿಯಾಗಿ ನಡೆಯಿತು.

ವಿಶೇಷ ಅಂದರೆ ಈ ಜಾತ್ರೆಯಲ್ಲಿ ಬೆಳ್ಳಿ ರಥೋತ್ಸವ ಮಹಿಳೆಯರೇ ಎಳೆಯುತ್ತಾರೆ. ಬೆಳ್ಳಿ ರಥೋತ್ಸವಕ್ಕೆ ಹಗರಿಬೊಮ್ಮನ ಹಳ್ಳಿಯ ಶಾಸಕಿ ಲತಾ ಮಲ್ಲಿಕಾರ್ಜುನ ಚಾಲನೆ ನೀಡಿದರು. ನಂತರ ಮಹಿಳೆಯರು, ವಿದ್ಯಾರ್ಥಿನಿಯರು ಬೆಳ್ಳಿ ತೇರನ್ನು ಎಳೆದು ಸಂಭ್ರಮಿಸಿದರು.

ಇದನ್ನೂ ಓದಿ: ಗದಗ: ಸೆ 3 ರಂದು ಟರ್ಫ ಹಾಕಿ ಕ್ರೀಡಾಂಗಣ ಲೋಕಾರ್ಪಣೆ: ಸಚಿವ ಎಚ್​ಕೆ ಪಾಟೀಲ

ಭಕ್ತರು ಅನ್ನದಾನೇಶ್ವರ ಮಹಾರಾಜ್ ಕೀ ಜೈ, ಗುರು ಕುಮಾರೇಶ್ವರ ಮಹಾರಾಜ್ ಕೀ ಜೈ, ಲಿಂಗೈಕ್ಯ ಗುರು ಅನ್ನದಾನ ಸ್ವಾಮೀಜಿ ಕೀ ಜೈ, ಅಭಿನವ ಅನ್ನದಾನ ಸ್ವಾಮೀಜಿ ಕೀ ಜೈ, ಮುಪ್ಪಿನ ಬಸವಲಿಂಗ ಸ್ವಾಮೀಜಿ ಕೀ ಜೈ ಎಂದು ಜಯ ಘೋಷಣೆಗಳೊಂದಿಗೆ ತೇರು ಎಳೆದರು. ರಥವು ಯಶಸ್ವಿಯಾಗಿ ಮರಳಿ ಸ್ವಸ್ಥಳಕ್ಕೆ ಬಂದು ನಿಂತಾಗ ಚಪ್ಪಾಳೆ ತಟ್ಟಿದ ಭಕ್ತರು ಭಕ್ತಿಭಾವ ಮೆರೆದರು. ಮಹಿಳೆಯರು ಭಕ್ತಿ, ಶ್ರದ್ಧೆಯಿಂದ ತೇರಿಗೆ ಪುಷ್ಪ ಎರಚುವ ಮೂಲಕ ಸಂಭ್ರಮದಿಂದ ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ಇದನ್ನೂ ಓದಿ: ಗದಗ: ಸರ್ಕಾರಿ ಶಾಲೆಯ ಮೈದಾನದಲ್ಲಿ ತೆಲೆ ಎತ್ತಿದ ಅಕ್ರಮ ಮನೆಗಳು; ನಮ್ಮ ಶಾಲೆ ಉಳಿಸಿ ಎಂದು ವಿದ್ಯಾರ್ಥಿಗಳ ಆಕ್ರೋಶ!

ಈ ಸಂದರ್ಭದಲ್ಲಿ ಗದಗ, ಧಾರವಾಡ, ಕೊಪ್ಪಳ, ಬಾಗಲಕೋಟ, ವಿಜಯನಗರ, ಬಳ್ಳಾರಿ, ರಾಯಚೂರು, ದಾವಣಗೇರಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಅದರಲ್ಲೂ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಸೇರಿದ್ದರು.

ನರೇಗಲ್ ಸಮೀಪದ ಹಾಲಕೆರೆ ಗ್ರಾಮದಲ್ಲಿ ಅನ್ನದಾನೇಶ್ವರ ಸಂಸ್ಥಾನಮಠದ ಲಿಂಗೈಕ್ಯ ಗುರು ಅನ್ನದಾನ ಸ್ವಾಮಿಗಳ 46ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಜರುಗಿದ ಬೆಳ್ಳಿ ತೇರನ್ನು ಮಹಿಳೆಯರು ಎಳೆದು ಸಂಭ್ರಮಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ