AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವೈಕ್ಯತೆಗೆ ಸಾಕ್ಷಿಯಾದ ಗದಗನ ಈ ಗ್ರಾಮ: ನೂರಾರು ವರ್ಷಗಳಿಂದ ಹನುಮನ ದೇವರಿಗೆ ಆರಾಧಿಸುವ ಮುಸ್ಲಿಂರು

ಕೋಮು ಸೌಹಾರ್ದತೆಯನ್ನು ಉತ್ತೇಜಿಸಲು ದೇವಸ್ಥಾನದಲ್ಲಿ ಪೂಜೆ ಮತ್ತು ಇತರ ಆಚರಣೆಗಳನ್ನು ನಡೆಸಲು ಮುಸ್ಲಿಮರಿಗೆ ಅವಕಾಶ ನೀಡಲಾಗಿದೆ. ಕೋರಿಕೊಪ್ಪದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಯಾವಾಗಲೂ ಶಾಂತಿಯುತವಾಗಿ ಸಹಬಾಳ್ವೆದಿಂದ ಜೀವನ ನಡೆಸುತ್ತಿದ್ದಾರೆ. ಇಲ್ಲಿ ಎಂದಿಗೂ ಯಾವುದೇ ಕೋಮು ಘರ್ಷಣೆಗೆ ಸಾಕ್ಷಿಯಾಗಲಿಲ್ಲ ಎಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಕೋರಿಕೊಪ್ಪ ಗ್ರಾಮಸ್ಥರು ಹೇಳಿದರು.

ಭಾವೈಕ್ಯತೆಗೆ ಸಾಕ್ಷಿಯಾದ ಗದಗನ ಈ ಗ್ರಾಮ: ನೂರಾರು ವರ್ಷಗಳಿಂದ ಹನುಮನ ದೇವರಿಗೆ ಆರಾಧಿಸುವ ಮುಸ್ಲಿಂರು
ಭಾವೈಕ್ಯತೆಗೆ ಸಾಕ್ಷಿಯಾದ ಹನುಮಾನ ದೇವಸ್ಥಾನ
ವಿವೇಕ ಬಿರಾದಾರ
|

Updated on:Sep 02, 2023 | 11:41 AM

Share

ಗದಗ: ಉತ್ತರ ಕರ್ನಾಟಕ (North Karnataka) ಭಾವೈಕ್ಯತೆಗೆ ಹೆಸರುವಾಸಿಯಾಗಿದೆ. ಇಲ್ಲಿನ ಅನೇಕ ಮಠಗಳು ಭಾವೈಕ್ಯತೆಯ ಸಾರವನ್ನು ಜಗತ್ತಿಗೆ ಸಾರಿ ಸಾರಿ ಹೇಳುತ್ತಿವೆ. ಹೀಗೆ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwara) ಸಮೀಪದ ಕೋರಿಕೊಪ್ಪ ಗ್ರಾಮದಲ್ಲಿರುವ ಹನುಮಾನ ದೇವಸ್ಥಾನಕ್ಕೆ (Hanuman Temple) ಕಳೆದ 150 ವರ್ಷಗಳಿಂದ ಮುಸ್ಲಿಮರು ಕೂಡ ಬರುತ್ತಿದ್ದಾರೆ. ಹೌದು ನೀವು ಓದಿರುವುದು ಸತ್ಯ. ಮುಸ್ಲಿಮರು ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಹನುಮಂನ ದೇವಸ್ಥಾನಕ್ಕೆ ಮುಸ್ಲಿಂರು ಕೂಡ ನಡೆದುಕೊಳ್ಳುತ್ತಿದ್ದಾರೆ.

ಕೋರಿಕೊಪ್ಪ ಗ್ರಾಮದ ಪ್ರವೇಶ ದ್ವಾರದಲ್ಲಿ ಚಿಕ್ಕ ಹನುಮಾನ ದೇವಸ್ಥಾನದೆ. ಸುಮಾರು ವರ್ಷಗಳ ಹಿಂದೆ ಕೋರಿಕೊಪ್ಪ ಗ್ರಾಮಕ್ಕೆ ಪ್ಲೇಗ್ ಮತ್ತು ಕಾಲರಾ ರೋಗ ಒಕ್ಕರಿಸಿದ್ದರಿಂದ ಜನರು ಗ್ರಾಮವನ್ನು ತೊರೆದು ಬೇರೆಡೆ ವಲಸೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಪೂಜೆ ಮಾಡಲು ಯಾರು ಇಲ್ಲದಂತಾಯಿತು. ಆಗ ಬದ್ನಿ ಗ್ರಾಮದ ಕೆಲವು ಮುಸ್ಲಿಂ ಕುಟುಂಬಗಳು ಹನುಮ ದೇವಸ್ಥಾನಕ್ಕೆ ನಡೆದುಕೊಂಡರು. ಇದು ಹೀಗೆ ಮುಂದುವರೆದುಕೊಂಡು ಬಂದಿದೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರು ಎಲ್ಲರೂ ಸೇರಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿದರು.

ಶ್ರಾವಣ ಮಾಸದಲ್ಲಿ ಜಾತಿ, ಮತ ಭೇದವಿಲ್ಲದೆ ಗ್ರಾಮಸ್ಥರೆಲ್ಲರೂ ಸೇರಿ ದೇವಸ್ಥಾನದಲ್ಲಿ ಹೋಮ, ಹವನ, ಭಜನೆ ಮಾಡುತ್ತಾರೆ. ದೇವಾಲಯದ ಆವರಣದಲ್ಲಿ ಪುರಾತನ ಕಾಲದ ಮಣ್ಣಿನ ಮಡಕೆಗಳು, ಶಾಸನಗಳು ಲಭ್ಯವಾಗಿದ್ದು, ಇವುಗಳ ಕುರಿತು ಅಧ್ಯಯನ ನಡೆಸುವಂತೆ ಗ್ರಾಮಸ್ಥರು ಪುರಾತತ್ವ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಈ ಅಧ್ಯಯನವು ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾಗಲಿದೆ.

ಇದನ್ನೂ ಓದಿ: ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮೀ ಯೋಜನೆಗೆ ರಾಹುಲ್​ ಗಾಂಧಿ ಚಾಲನೆ

ಮುಸ್ಲಿಂರು ಹನುಮನ ದೇವೆ ಆರಾಧನೆ  ಮಾಡುತ್ತಿರುವುದೇ ಈ ದೇವಾಲಯದ ವೈಶಿಷ್ಟ್ಯವಾಗಿದೆ. ಬದ್ನಿ ಗ್ರಾಮದ  ಈ ದೇವಸ್ಥಾನಕ್ಕೆ ಹಿಂದೂಗಳು ಮತ್ತು ಜೈನರು ಬರುತ್ತಾರೆ ಎಂದು ಲಕ್ಷ್ಮೇಶ್ವರ ತಾಲೂಕಿನ ಮೊಹಮ್ಮದ್ ಲಕ್ಷ್ಮೇಶ್ವರ್ ಮತ್ತು ಜಿನೇಶ್ ಜೈನ್ ಹೇಳಿದರು.

ಲಕ್ಷ್ಮೇಶ್ವರದ ಪಿ.ಕೆ.ಪೂಜಾರ್ ಮಾತನಾಡಿ, ಅದರಕಟ್ಟಿ-ಕೊಂಡಿಕೊಪ್ಪ ರಸ್ತೆಯಲ್ಲಿರುವ ಕೋರಿಕೊಪ್ಪ ಗ್ರಾಮ ಕೋಮು ಸೌಹಾರ್ದಕ್ಕೆ ಹೆಸರಾಗಿದೆ. ಶನಿವಾರ ಮತ್ತು ಮಂಗಳವಾರದಂದು ಸುತ್ತಮುತ್ತಲಿನ ಗ್ರಾಮಗಳು ಮತ್ತು ಇತರೆಡೆಗಳಿಂದ ನೂರಾರು ಜನರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ ಎಂದರು.

ಕೋರಿಕೊಪ್ಪದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಯಾವಾಗಲೂ ಶಾಂತಿಯುತವಾಗಿ ಸಹಬಾಳ್ವೆದಿಂದ ಜೀವನ ನಡೆಸುತ್ತಿದ್ದಾರೆ. ಇಲ್ಲಿ ಎಂದಿಗೂ ಯಾವುದೇ ಕೋಮು ಘರ್ಷಣೆಗೆ ಸಾಕ್ಷಿಯಾಗಲಿಲ್ಲ ಎಂದು ಗ್ರಾಮಸ್ಥರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:03 pm, Wed, 30 August 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ