AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾದಿ ಪೈಗಂಬರ್ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದ ಗದಗ ಜಿಲ್ಲೆಯ ಮುಖ್ಯ ಶಿಕ್ಷಕ ಅಮಾನತು

ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಬಿಜಾಪೂರ ಅವರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತ ಶ್ರೀಶೈಲ ಬಿರಾದಾರ ಆದೇಶ ಹೊರಡಿಸಿದ್ದಾರೆ.

ಪ್ರವಾದಿ ಪೈಗಂಬರ್ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದ ಗದಗ ಜಿಲ್ಲೆಯ ಮುಖ್ಯ ಶಿಕ್ಷಕ ಅಮಾನತು
ಗದಗ ತಾಲ್ಲೂಕಿನ ನಾಗಾವಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
TV9 Web
| Edited By: |

Updated on:Sep 29, 2022 | 9:14 AM

Share

ಗದಗ: ಇಸ್ಲಾಂ ಧರ್ಮ ಪ್ರವರ್ತಕ ಪ್ರವಾದಿ ಮೊಹಮದ್ ಪೈಗಂಬರ್ (Prophet Mohammad Paigambar) ಅವರ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದ ಜಿಲ್ಲೆಯ ನಾಗಾವಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಬಿಜಾಪೂರ ಅವರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತ ಶ್ರೀಶೈಲ ಬಿರಾದಾರ ಆದೇಶ ಹೊರಡಿಸಿದ್ದಾರೆ. ಸಮಾಜದ ಸ್ವಾಸ್ಥ್ಯ ಕದಡುವ ಹಾಗೂ ಮುಸ್ಲಿಂ ಧರ್ಮದ ಬಗ್ಗೆ ಅಭಿಮಾನ ಹುಟ್ಟಿಸುವ ಪ್ರಯತ್ನ ಇದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಗದಗ ತಾಲ್ಲೂಕಿನ ನಾಗಾವಿ ಶಾಲೆಯಲ್ಲಿ ಇಸ್ಲಾಮೀಕರಣ ಪ್ರಯತ್ನ ನಡೆಯುತ್ತಿದೆ ಎಂದು ಸೆ 27ರಂದು ಶ್ರೀರಾಮಸೇನೆ ಕಾರ್ಯಕರ್ತರು ಶಾಲೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಶಾಂತಿ ಪ್ರಕಾಶನ ಪ್ರಕಟಿಸಿರುವ ಮೊಹಮದ್ ಪೈಗಂಬರ್ ಅವರ ಜೀವನ ಮತ್ತು ಬೋಧನೆ ಕುರಿತ ಪುಸ್ತಕವನ್ನು ಮಕ್ಕಳಿಗೆ ಕೊಟ್ಟಿದ್ದ ಮುಖ್ಯ ಶಿಕ್ಷಕರು ಪ್ರಬಂಧ ಬರೆಯಲು ಸೂಚಿಸಿದ್ದರು.

ಶಾಲೆಗೆ ನುಗ್ಗಿದ್ದ ಶ್ರೀರಾಮಸೇನೆ ಕಾರ್ಯಕರ್ತರು

ಪೈಗಂಬರ್ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದು ಶ್ರೀರಾಮಸೇನೆ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿತ್ತು. ‘ಪಠ್ಯದಲ್ಲಿ ಇಲ್ಲದ ವಿಷಯದ ಬಗ್ಗೆ ಪ್ರಬಂಧ ಬರೆಯಲು ಸೂಚಿಸಿದ್ದು ಏಕೆ’ ಎಂದು ಕಾರ್ಯಕರ್ತರು ಪ್ರಶ್ನಿಸಿದ್ದರು. ‘ಶಾಲೆಯ ಮುಖ್ಯ ಶಿಕ್ಷಕರಾಗಿರುವ ಎ.ಎಲ್.ಬಿಜಾಪುರ ಅವರು ಪೈಗಂಬರ್ ಅವರಿಗೆ ಸಂಬಂಧಿಸಿದ ಪುಸ್ತಕವೊಂದನ್ನು 8ನೇ ತರಗತಿ ಮಕ್ಕಳಿಗೆ ಕೊಟ್ಟು ಓದಲು ಪ್ರೇರೇಪಿಸಿದ್ದರು. ನಂತರ ಪ್ರಬಂಧ ಬರೆಯುವಂತೆ ಮಕ್ಕಳಿಗೆ ಸೂಚಿಸಿದ್ದರು. ಉತ್ತಮ ಪ್ರಬಂಧಕ್ಕೆ ₹ 8 ಸಾವಿರ ಬಹುಮಾನ ನೀಡುವುದಾಗಿ ಹೇಳಿದ್ದರು. ಇಂಥ ಪ್ರಯತ್ನಗಳ ಮೂಲಕ ಮಕ್ಕಳನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ’ ಎಂದು ಕಾರ್ಯಕರ್ತರು ದೂರಿದ್ದರು. ಸ್ಥಳಕ್ಕೆ ಜಿಪಂ ಸಿಇಒ ಹಾಗೂ ಡಿಡಿಪಿಐ ಬರಬೇಕು ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದರು.

Published On - 9:14 am, Thu, 29 September 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?