AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ; ರೈತರು ಕಂಗಾಲು

ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್​ಗಳು ಹಾರಿ ಹೋಗಿವೆ. ಶೆಡ್​ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ಸೇರಿದಂತೆ ತೋಟಗಾರಿಕೆಯ ಬೆಳೆ ನಾಶವಾಗಿದೆ.

ಗದಗದಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ; ರೈತರು ಕಂಗಾಲು
ಮಳೆಯಿಂದ ನೆಲಕ್ಕೆ ಉರುಳಿದ ವಿದ್ಯುತ್ ಕಂಬ
sandhya thejappa
|

Updated on: Apr 20, 2021 | 10:47 AM

Share

ಗದಗ: ರೈತ ಮಾಡಿರುವ ತಪ್ಪಾದರೂ ಏನು? ಈ ಭೂಮಿ ಮೇಲೆ ಎಂತಹಾ ದುರಂತಗಳು ನಡೆದರು ಅದರ ಕೆಟ್ಟ ಪರಿಣಾಮ ರೈತರ ಬದುಕಿನ ಮೇಲೆ ಬೀರುತ್ತದೆ. ರೈತರು ಬೆಳೆಗಾಗಿ ವರ್ಷಪೂರ್ತಿ ದುಡಿಯುತ್ತಾರೆ. ಬಂದ ಆದಾಯದ ಅರ್ಧದಷ್ಟು ಭಾಗವನ್ನು ಗೊಬ್ಬರ, ಬಿತ್ತನೆ ಬೀಜಗಳು ಸೇರಿದಂತೆ ಬೆಳೆಗಾಗಿ ಎತ್ತಿಡುತ್ತಾರೆ. ಆದರೆ ಅಕಾಲಿಕ ಮಳೆಯಿಂದ ರೈತರ ಶ್ರಮಕ್ಕೆ ಕೊಳ್ಳಿ ಇಟ್ಟಂತಾಗುತ್ತದೆ. ಗದಗ ಜಿಲ್ಲೆಯಲ್ಲೂ ನಿನ್ನೆ ಸಂಜೆ ಹೊತ್ತಿಗೆ ಹಲವೆಡೆ ಗಾಳಿ ಸಹಿತ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ನಾಶವಾದ ಬೆಳೆಯನ್ನು ಕಂಡು ರೈತರು ಕಂಗಾಲಾಗಿದ್ದಾರೆ.

ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್​ಗಳು ಹಾರಿ ಹೋಗಿವೆ. ಶೆಡ್​ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ಸೇರಿದಂತೆ ತೋಟಗಾರಿಕೆಯ ಬೆಳೆ ನಾಶವಾಗಿದೆ. ಇನ್ನು ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗೆ ಉರುಳಿವೆ.

ಇನ್ನು ಇಂದು ಬೆಳ್ಳಂಬೆಳಗ್ಗೆಯೇ ತುಮಕೂರಿನಲ್ಲಿ ಮಳೆಯಾಗಿದೆ. ತುಮಕೂರು ನಗರ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗಿದ್ದು, ಬಿಸಿಲಿಗೆ ಬೇಗೆಗೆ ತಂಪೆರೆದಂತಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ತೊಂದರೆಯಾಗಿರುವುದು ಕಂಡುಬಂದಿಲ್ಲ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಬೆಟ್ಟಿಂಗ್ ದಂಧೆ ಮೇಲೆ ಸಿಸಿಬಿ ದಾಳಿ; ಐವರು ಬಂಧನ, 12 ಲಕ್ಷ ರೂಪಾಯಿ ವಶ

ಸೋಂಕು ಧೃಡವಾದ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಸೇರುವೆ ಎಂದಿದ್ದ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ಬೆಂಗಳೂರಿಗೆ ಶಿಫ್ಟ್

(Heavy Rain at gadag and Rain has destroyed an enormous amount of crop)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ