AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು; ಸತತ ಎರಡು ವರ್ಷದಿಂದ ಬೆಳೆ ನಾಶ

karnataka monsoon: ಮಲಪ್ರಭಾ ನದಿ ತೀರದ ನೂರಾರು ಎಕರೆಯಲ್ಲಿನ ಹೆಸರು, ಗೋವಿನ ಜೋಳ, ಕಬ್ಬು, ಸೂರ್ಯಕಾಂತಿ ಸೇರಿ ಹಲವು ಬೆಳೆ ಹಾನಿಯಾಗಿದೆ. ಸೌಜನ್ಯಕ್ಕೂ ರೋಣ ತಾಲೂಕಿನ ತಹಶಿಲ್ದಾರ್ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಇತ್ತ ಭೇಟಿ ನೀಡಿಲ್ಲ. ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ್ ತವರು ಕ್ಷೇತ್ರದಲ್ಲೇ ನಿರ್ಲಕ್ಷ್ಯ ವಹಿಸಿದ್ದಾರೆ.

ಗದಗ: ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು; ಸತತ ಎರಡು ವರ್ಷದಿಂದ ಬೆಳೆ ನಾಶ
ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು
TV9 Web
| Updated By: preethi shettigar|

Updated on: Aug 06, 2021 | 1:10 PM

Share

ಗದಗ: ಜುಲೈ ತಿಂಗಳಲ್ಲಿ ಕರ್ನಾಟಕದಾದ್ಯಂತ ಅಬ್ಬರಿಸಿದ ಮಳೆಯಿಂದಾಗಿ ಜನಜೀವನ ದುಸ್ತರಗೊಂಡಿದೆ. ಕಳೆದ ಕೆಲ ದಿನಗಳಿಂದ ಮಳೆ ಆರ್ಭಟ (Karnataka Rain) ಕೊಂಚ ತಗ್ಗಿದಂತೆ ಕಾಣುತ್ತಿತ್ತಾದರೂ ಇದೀಗ ಆರಂಭವಾಗಿರುವ ಆಶ್ಲೇಷಾ ಮಳೆ ಮತ್ತೆ ಜೋರಾಗಿ ಸುರಿಯಲಾರಂಭಿಸಿದೆ. ಈ ಬಾರಿಯಂತೂ ಮೇ ತಿಂಗಳಿನಿಂದಲೇ ಮಳೆಗಾಲದ ವಾತಾವರಣವಿತ್ತಾದ್ದರಿಂದ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಭಾಗದಲ್ಲಿ ಭೂಮಿ ಒಣಗಲು ಅವಕಾಶವೇ ಸಿಕ್ಕಿಲ್ಲ ಎಂಬಂತಾಗಿ ಕೃಷಿಕರು ಅತಿಯಾದ ಮಳೆಯಿಂದ (Heavy Rain) ಕಂಗಾಲಾಗಿದ್ದಾರೆ. ಅದರಂತೆ ಮಳೆಯ ಆರ್ಭಟಕ್ಕೆ ಮಲಪ್ರಭಾ ನದಿ ಪಾತ್ರದ ಜನರು ಪ್ರವಾಹಕ್ಕೆ ತುತ್ತಾಗಿದ್ದು, ರೈತರಂತು ತಾವು ಬೆಳೆದ ಬೆಳೆಯನ್ನು ಕಳೆದುಕೊಂಡಿದ್ದಾರೆ. ಸತತ ಎರಡು ವರ್ಷ ಭೀಕರ ಪ್ರವಾಹ ಬಂಗಾರದಂಥ ಬೆಳೆ ಸರ್ವನಾಶ ಮಾಡಿದ್ದು, ರೈತರನ್ನು ಸಂಕಷ್ಟಕ್ಕೆ ದೂಡಿದೆ.

ಗದಗ ಜಿಲ್ಲೆಯ ರೋಣ, ಗಾಡಗೋಳಿ, ಹೊಳೆಮಣ್ಣೂರ ತಾಲೂಕಿನ ರೈತರು ಬೆಳೆ ಕಳೆದುಕೊಂಡಿದ್ದು, ಕಳೆದ ವರ್ಷ ಪರಿಹಾರ ನೀಡುವುದಾಗಿ ಅಧಿಕಾರಿಗಳು ನೂರಾರು ರೂಪಾಯಿ ಖರ್ಚು ಮಾಡಿಸಿ ನೈಯಾಪೈಸೆ ಪರಿಹಾರ ನೀಡಿಲ್ಲ. ಈ ವರ್ಷವೂ ಇತ್ತ ನಮ್ಮ ಗೋಳು ಕೇಳಲು ಯಾರು ಬಂದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲಪ್ರಭಾ ನದಿ ತೀರದ ನೂರಾರು ಎಕರೆಯಲ್ಲಿನ ಹೆಸರು, ಗೋವಿನ ಜೋಳ, ಕಬ್ಬು, ಸೂರ್ಯಕಾಂತಿ ಸೇರಿ ಹಲವು ಬೆಳೆ ಹಾನಿಯಾಗಿದೆ. ಸೌಜನ್ಯಕ್ಕೂ ರೋಣ ತಾಲೂಕಿನ ತಹಶಿಲ್ದಾರ್ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಇತ್ತ ಭೇಟಿ ನೀಡಿಲ್ಲ. ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ್ ತವರು ಕ್ಷೇತ್ರದಲ್ಲೇ ನಿರ್ಲಕ್ಷ್ಯ ವಹಿಸಿದ್ದಾರೆ. ಅವರು ತಮ್ಮ ಸ್ಥಾನದ ಭದ್ರತೆಗಾಗಿ ಬೆಂಗಳೂರು, ದೆಹಲಿಗೆ ಹೋಗಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಳೆ-ಪ್ರವಾಹದಿಂದ ಪಶ್ಚಿಮ ಬಂಗಾಳದಲ್ಲಿ 23 ಜನರು ಸಾವು; ಡಿವಿಸಿ ವಿರುದ್ಧ ಪ್ರಧಾನಿಗೆ ದೂರು ನೀಡಿದ ಮಮತಾ ಬ್ಯಾನರ್ಜಿ

ಮಳೆ ಅಬ್ಬರ ತಗ್ಗಿದರೂ ಬೆಳಗಾವಿಯಲ್ಲಿ ನಿಲ್ಲದ ಭೀತಿ; ಬೆಳೆ ಹಾನಿಗೆ ಪರಿಹಾರ ನೀಡುವಂತೆ ರೈತರ ಆಗ್ರಹ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!