AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು; ಸತತ ಎರಡು ವರ್ಷದಿಂದ ಬೆಳೆ ನಾಶ

karnataka monsoon: ಮಲಪ್ರಭಾ ನದಿ ತೀರದ ನೂರಾರು ಎಕರೆಯಲ್ಲಿನ ಹೆಸರು, ಗೋವಿನ ಜೋಳ, ಕಬ್ಬು, ಸೂರ್ಯಕಾಂತಿ ಸೇರಿ ಹಲವು ಬೆಳೆ ಹಾನಿಯಾಗಿದೆ. ಸೌಜನ್ಯಕ್ಕೂ ರೋಣ ತಾಲೂಕಿನ ತಹಶಿಲ್ದಾರ್ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಇತ್ತ ಭೇಟಿ ನೀಡಿಲ್ಲ. ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ್ ತವರು ಕ್ಷೇತ್ರದಲ್ಲೇ ನಿರ್ಲಕ್ಷ್ಯ ವಹಿಸಿದ್ದಾರೆ.

ಗದಗ: ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು; ಸತತ ಎರಡು ವರ್ಷದಿಂದ ಬೆಳೆ ನಾಶ
ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು
TV9 Web
| Edited By: |

Updated on: Aug 06, 2021 | 1:10 PM

Share

ಗದಗ: ಜುಲೈ ತಿಂಗಳಲ್ಲಿ ಕರ್ನಾಟಕದಾದ್ಯಂತ ಅಬ್ಬರಿಸಿದ ಮಳೆಯಿಂದಾಗಿ ಜನಜೀವನ ದುಸ್ತರಗೊಂಡಿದೆ. ಕಳೆದ ಕೆಲ ದಿನಗಳಿಂದ ಮಳೆ ಆರ್ಭಟ (Karnataka Rain) ಕೊಂಚ ತಗ್ಗಿದಂತೆ ಕಾಣುತ್ತಿತ್ತಾದರೂ ಇದೀಗ ಆರಂಭವಾಗಿರುವ ಆಶ್ಲೇಷಾ ಮಳೆ ಮತ್ತೆ ಜೋರಾಗಿ ಸುರಿಯಲಾರಂಭಿಸಿದೆ. ಈ ಬಾರಿಯಂತೂ ಮೇ ತಿಂಗಳಿನಿಂದಲೇ ಮಳೆಗಾಲದ ವಾತಾವರಣವಿತ್ತಾದ್ದರಿಂದ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಭಾಗದಲ್ಲಿ ಭೂಮಿ ಒಣಗಲು ಅವಕಾಶವೇ ಸಿಕ್ಕಿಲ್ಲ ಎಂಬಂತಾಗಿ ಕೃಷಿಕರು ಅತಿಯಾದ ಮಳೆಯಿಂದ (Heavy Rain) ಕಂಗಾಲಾಗಿದ್ದಾರೆ. ಅದರಂತೆ ಮಳೆಯ ಆರ್ಭಟಕ್ಕೆ ಮಲಪ್ರಭಾ ನದಿ ಪಾತ್ರದ ಜನರು ಪ್ರವಾಹಕ್ಕೆ ತುತ್ತಾಗಿದ್ದು, ರೈತರಂತು ತಾವು ಬೆಳೆದ ಬೆಳೆಯನ್ನು ಕಳೆದುಕೊಂಡಿದ್ದಾರೆ. ಸತತ ಎರಡು ವರ್ಷ ಭೀಕರ ಪ್ರವಾಹ ಬಂಗಾರದಂಥ ಬೆಳೆ ಸರ್ವನಾಶ ಮಾಡಿದ್ದು, ರೈತರನ್ನು ಸಂಕಷ್ಟಕ್ಕೆ ದೂಡಿದೆ.

ಗದಗ ಜಿಲ್ಲೆಯ ರೋಣ, ಗಾಡಗೋಳಿ, ಹೊಳೆಮಣ್ಣೂರ ತಾಲೂಕಿನ ರೈತರು ಬೆಳೆ ಕಳೆದುಕೊಂಡಿದ್ದು, ಕಳೆದ ವರ್ಷ ಪರಿಹಾರ ನೀಡುವುದಾಗಿ ಅಧಿಕಾರಿಗಳು ನೂರಾರು ರೂಪಾಯಿ ಖರ್ಚು ಮಾಡಿಸಿ ನೈಯಾಪೈಸೆ ಪರಿಹಾರ ನೀಡಿಲ್ಲ. ಈ ವರ್ಷವೂ ಇತ್ತ ನಮ್ಮ ಗೋಳು ಕೇಳಲು ಯಾರು ಬಂದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲಪ್ರಭಾ ನದಿ ತೀರದ ನೂರಾರು ಎಕರೆಯಲ್ಲಿನ ಹೆಸರು, ಗೋವಿನ ಜೋಳ, ಕಬ್ಬು, ಸೂರ್ಯಕಾಂತಿ ಸೇರಿ ಹಲವು ಬೆಳೆ ಹಾನಿಯಾಗಿದೆ. ಸೌಜನ್ಯಕ್ಕೂ ರೋಣ ತಾಲೂಕಿನ ತಹಶಿಲ್ದಾರ್ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಇತ್ತ ಭೇಟಿ ನೀಡಿಲ್ಲ. ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ್ ತವರು ಕ್ಷೇತ್ರದಲ್ಲೇ ನಿರ್ಲಕ್ಷ್ಯ ವಹಿಸಿದ್ದಾರೆ. ಅವರು ತಮ್ಮ ಸ್ಥಾನದ ಭದ್ರತೆಗಾಗಿ ಬೆಂಗಳೂರು, ದೆಹಲಿಗೆ ಹೋಗಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಳೆ-ಪ್ರವಾಹದಿಂದ ಪಶ್ಚಿಮ ಬಂಗಾಳದಲ್ಲಿ 23 ಜನರು ಸಾವು; ಡಿವಿಸಿ ವಿರುದ್ಧ ಪ್ರಧಾನಿಗೆ ದೂರು ನೀಡಿದ ಮಮತಾ ಬ್ಯಾನರ್ಜಿ

ಮಳೆ ಅಬ್ಬರ ತಗ್ಗಿದರೂ ಬೆಳಗಾವಿಯಲ್ಲಿ ನಿಲ್ಲದ ಭೀತಿ; ಬೆಳೆ ಹಾನಿಗೆ ಪರಿಹಾರ ನೀಡುವಂತೆ ರೈತರ ಆಗ್ರಹ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ