AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು; ಸತತ ಎರಡು ವರ್ಷದಿಂದ ಬೆಳೆ ನಾಶ

karnataka monsoon: ಮಲಪ್ರಭಾ ನದಿ ತೀರದ ನೂರಾರು ಎಕರೆಯಲ್ಲಿನ ಹೆಸರು, ಗೋವಿನ ಜೋಳ, ಕಬ್ಬು, ಸೂರ್ಯಕಾಂತಿ ಸೇರಿ ಹಲವು ಬೆಳೆ ಹಾನಿಯಾಗಿದೆ. ಸೌಜನ್ಯಕ್ಕೂ ರೋಣ ತಾಲೂಕಿನ ತಹಶಿಲ್ದಾರ್ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಇತ್ತ ಭೇಟಿ ನೀಡಿಲ್ಲ. ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ್ ತವರು ಕ್ಷೇತ್ರದಲ್ಲೇ ನಿರ್ಲಕ್ಷ್ಯ ವಹಿಸಿದ್ದಾರೆ.

ಗದಗ: ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು; ಸತತ ಎರಡು ವರ್ಷದಿಂದ ಬೆಳೆ ನಾಶ
ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು
TV9 Web
| Edited By: |

Updated on: Aug 06, 2021 | 1:10 PM

Share

ಗದಗ: ಜುಲೈ ತಿಂಗಳಲ್ಲಿ ಕರ್ನಾಟಕದಾದ್ಯಂತ ಅಬ್ಬರಿಸಿದ ಮಳೆಯಿಂದಾಗಿ ಜನಜೀವನ ದುಸ್ತರಗೊಂಡಿದೆ. ಕಳೆದ ಕೆಲ ದಿನಗಳಿಂದ ಮಳೆ ಆರ್ಭಟ (Karnataka Rain) ಕೊಂಚ ತಗ್ಗಿದಂತೆ ಕಾಣುತ್ತಿತ್ತಾದರೂ ಇದೀಗ ಆರಂಭವಾಗಿರುವ ಆಶ್ಲೇಷಾ ಮಳೆ ಮತ್ತೆ ಜೋರಾಗಿ ಸುರಿಯಲಾರಂಭಿಸಿದೆ. ಈ ಬಾರಿಯಂತೂ ಮೇ ತಿಂಗಳಿನಿಂದಲೇ ಮಳೆಗಾಲದ ವಾತಾವರಣವಿತ್ತಾದ್ದರಿಂದ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಭಾಗದಲ್ಲಿ ಭೂಮಿ ಒಣಗಲು ಅವಕಾಶವೇ ಸಿಕ್ಕಿಲ್ಲ ಎಂಬಂತಾಗಿ ಕೃಷಿಕರು ಅತಿಯಾದ ಮಳೆಯಿಂದ (Heavy Rain) ಕಂಗಾಲಾಗಿದ್ದಾರೆ. ಅದರಂತೆ ಮಳೆಯ ಆರ್ಭಟಕ್ಕೆ ಮಲಪ್ರಭಾ ನದಿ ಪಾತ್ರದ ಜನರು ಪ್ರವಾಹಕ್ಕೆ ತುತ್ತಾಗಿದ್ದು, ರೈತರಂತು ತಾವು ಬೆಳೆದ ಬೆಳೆಯನ್ನು ಕಳೆದುಕೊಂಡಿದ್ದಾರೆ. ಸತತ ಎರಡು ವರ್ಷ ಭೀಕರ ಪ್ರವಾಹ ಬಂಗಾರದಂಥ ಬೆಳೆ ಸರ್ವನಾಶ ಮಾಡಿದ್ದು, ರೈತರನ್ನು ಸಂಕಷ್ಟಕ್ಕೆ ದೂಡಿದೆ.

ಗದಗ ಜಿಲ್ಲೆಯ ರೋಣ, ಗಾಡಗೋಳಿ, ಹೊಳೆಮಣ್ಣೂರ ತಾಲೂಕಿನ ರೈತರು ಬೆಳೆ ಕಳೆದುಕೊಂಡಿದ್ದು, ಕಳೆದ ವರ್ಷ ಪರಿಹಾರ ನೀಡುವುದಾಗಿ ಅಧಿಕಾರಿಗಳು ನೂರಾರು ರೂಪಾಯಿ ಖರ್ಚು ಮಾಡಿಸಿ ನೈಯಾಪೈಸೆ ಪರಿಹಾರ ನೀಡಿಲ್ಲ. ಈ ವರ್ಷವೂ ಇತ್ತ ನಮ್ಮ ಗೋಳು ಕೇಳಲು ಯಾರು ಬಂದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲಪ್ರಭಾ ನದಿ ತೀರದ ನೂರಾರು ಎಕರೆಯಲ್ಲಿನ ಹೆಸರು, ಗೋವಿನ ಜೋಳ, ಕಬ್ಬು, ಸೂರ್ಯಕಾಂತಿ ಸೇರಿ ಹಲವು ಬೆಳೆ ಹಾನಿಯಾಗಿದೆ. ಸೌಜನ್ಯಕ್ಕೂ ರೋಣ ತಾಲೂಕಿನ ತಹಶಿಲ್ದಾರ್ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಇತ್ತ ಭೇಟಿ ನೀಡಿಲ್ಲ. ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ್ ತವರು ಕ್ಷೇತ್ರದಲ್ಲೇ ನಿರ್ಲಕ್ಷ್ಯ ವಹಿಸಿದ್ದಾರೆ. ಅವರು ತಮ್ಮ ಸ್ಥಾನದ ಭದ್ರತೆಗಾಗಿ ಬೆಂಗಳೂರು, ದೆಹಲಿಗೆ ಹೋಗಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಳೆ-ಪ್ರವಾಹದಿಂದ ಪಶ್ಚಿಮ ಬಂಗಾಳದಲ್ಲಿ 23 ಜನರು ಸಾವು; ಡಿವಿಸಿ ವಿರುದ್ಧ ಪ್ರಧಾನಿಗೆ ದೂರು ನೀಡಿದ ಮಮತಾ ಬ್ಯಾನರ್ಜಿ

ಮಳೆ ಅಬ್ಬರ ತಗ್ಗಿದರೂ ಬೆಳಗಾವಿಯಲ್ಲಿ ನಿಲ್ಲದ ಭೀತಿ; ಬೆಳೆ ಹಾನಿಗೆ ಪರಿಹಾರ ನೀಡುವಂತೆ ರೈತರ ಆಗ್ರಹ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು