AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heavy Rain: ರಾತ್ರೋರಾತ್ರಿ ಸುರಿದ ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಮಳೆಗೆ ಜನರು ಹೈರಾಣು

ಕೇರಳದ ವಯನಾಡು, ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಕೊಂಚ ಹೆಚ್ಚಾಗಿದ್ದು, ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಸ್ವಲ್ಪ ಏರಿಕೆಯಾಗಿದೆ.

Heavy Rain: ರಾತ್ರೋರಾತ್ರಿ ಸುರಿದ ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಮಳೆಗೆ ಜನರು ಹೈರಾಣು
ಭಾರೀ ಮಳೆಯಿಂದಾಗಿ ಜಲಾವೃತವಾಗಿರುವ ರಸ್ತೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 28, 2022 | 8:31 AM

Share

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ರಾತ್ರಿಯಿಡೀ ಭಾರಿ ಮಳೆ (Heavy Rain) ಸುರಿದಿದ್ದು, ರಾಜಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಮನೆಗಳಿಗೆ ನುಗ್ಗಿದೆ. ಬೆಟಗೇರಿಯ ವಾರ್ಡ್ ನಂಬರ್ 4ರ ಮಂಜುನಾಥ್ ನಗರ, ವಾಲ್ಮೀಕಿ ಅಂಬೇಡ್ಕರ್ ಬಡಾವಣೆಯಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿ, ನೂರಾರು ಮನೆಗಳಿಗೆ ನೀರು ನುಗ್ಗಿದೆ. ನಿದ್ರೆಯಲ್ಲಿ ಇದ್ದಾಗ ಏಕಾಏಕಿ ಮನೆಗಳಿಗೆ ನೀರು ನುಗ್ಗಿದ್ದು, ಜನರು ಕಂಗಾಲಾಗಿದ್ದಾರೆ. ಇನ್ನೂ ಕೂಡ ಮಳೆಯ ಅಬ್ಬರ ಮುಂದುವರೆದಿದ್ದು, ನಿರಂತರ ಮಳೆಯಿಂದ ನೂರಾರು ಕುಟುಂಬಗಳ ಬದುಕು ಅಯೋಮಯವಾಗಿದೆ. ಅಷ್ಟಾದರೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡದ ಹಿನ್ನೆಲೆ ಬಡಾವಣೆಯ ಜನರು ಆಕ್ರೋಶಗೊಂಡಿದ್ದಾರೆ.

ಇದನ್ನೂ ಓದಿ: ಜಪಾನ್: ಸಮುದ್ರ ತೀರವೊಂದರಲ್ಲಿರುವ ಡಾಲ್ಫಿನ್ ಜನರನ್ನು ಕಚ್ಚುತ್ತಿರುವುದರಿಂದ ಹತ್ತಿರ ಹೋಗದಂತೆ ಬೀಚ್ ಸಿಬ್ಬಂದಿ ಎಚ್ಚರಿಸಿದೆ

ಮನೆಗಳಿಗೆ ನುಗ್ಗಿದ ಮಳೆ ನೀರು:

ಶಿವಮೊಗ್ಗ: ನಗರದಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಬಾಪೂಜಿ ನಗರದ ಅನೇಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ. ಬಡಾವಣೆಯ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ಜನರು ಪರದಾಟುವಂತ್ತಾಗಿದೆ. ಅವೈಜ್ಞಾನಿಕ ಮತ್ತು ಕಳಪೆ ಸ್ಮಾರ್ಟ್ ಸಿಟಿ ಕಾಮಗಾರಿ ಯಡವಟ್ಟಿಂದ್ದಾಗಿ ಮಳೆ ನೀರು ಹರಿದು ಹೋಗದ ಹಿನ್ನಲೆ ಬಡಾವಣೆಯಲ್ಲಿ ಮಳೆ ನೀರು ನಿಂತುಕೊಂಡಿದ್ದೆ.

ವರುಣನ ಅಬ್ಬರ ಜೋರು; ಜನ ಹೈರಾಣು

ಹಾಸನ: ಜಿಲ್ಲೆಯ ವಿವಿಧೆಡೆ ವರುಣನ ಅಬ್ಬರ ಜೋರಾಗಿದ್ದು, ರಾತ್ರಿ ಸುರಿದ ಧಾರಾಕಾರ ಮಳೆಗೆ ಜನ ಹೈರಾಣಾಗಿದ್ದಾರೆ. ಅರಸೀಕೆರೆ ಪಟ್ಟಣದಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದು, ಪೇಟೆ ಬೀದಿಯಲ್ಲಿರುವ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ನೀರಿನಲ್ಲಿ ತೇಲಾಡಿವೆ. ಆಹಾರ ಸಾಮಾಗ್ರಿ, ದವಸ ಧಾನ್ಯಗಳು ನೀರುಪಾಲಾಗಿದ್ದು, ನೀರು ಹೊರಹಾಕಲು ನಿವಾಸಿಗಳು ಪರದಾಡುತ್ತಿದ್ದಾರೆ. ದಿಡೀರ್ ಬಂದ ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ; ಹದಿನೇಳು ವರ್ಷಗಳ ಹಿಂದೆ ಗರ್ಲ್​ಫ್ರೆಂಡ್​ಳನ್ನು ಕೊಂದ ಆರೋಪದಲ್ಲಿ ಆಸ್ಟ್ರೇಲಿಯನ್ ವ್ಯಕ್ತಿಯ ಬಂಧನ

ಕೇರಳದ ವಯನಾಡು, ಕಬಿನಿ ಜಲಾನಯನ ಪ್ರದೇಶದಲ್ಲಿ ಕೊಂಚ ಹೆಚ್ಚಾದ ಮಳೆ

ಮೈಸೂರು: ಕೇರಳದ ವಯನಾಡು, ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಕೊಂಚ ಹೆಚ್ಚಾಗಿದ್ದು, ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಸ್ವಲ್ಪ ಏರಿಕೆಯಾಗಿದೆ. ಜಿಲ್ಲೆಯ ಹೆಚ್​ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯದ ಇಂದಿನ ಒಳಹರಿವು 5,746 ಕ್ಯೂಸೆಕ್ ಇದ್ದು, ಹೊರಹರಿವು 6000 ಕ್ಯೂಸೆಕ್ ಇದೆ. 84 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಕಬಿನಿ ಜಲಾಶಯ, ಇಂದಿನ ನೀರಿನ ಮಟ್ಟ 83.66 ಅಡಿಯಷ್ಟಿದೆ. ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಜಲಾಶಯದಲ್ಲಿ ಇಂದು 19.29 ಟಿಎಂಸಿ ನೀರು ಸಂಗ್ರಹವಾಗಿದೆ. 12 ಎಂಎಂ ಮಳೆ ದಾಖಲಾಗಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ