ಗದಗ: ತೋಂಟದಾರ್ಯ ಮಠದ ಜಾತ್ರೆಯಲ್ಲಿ ಅನ್ಯಧರ್ಮದ ವ್ಯಾಪಾರಸ್ಥರಿಗೆ ನಿರ್ಬಂಧಿಸಲು ಒತ್ತಾಯ

ಹಿಜಾಬ್ ವಿಚಾರದ ಹೈಕೋರ್ಟ್ ತೀರ್ಪು ಪಾಲಿಸದ ಕಾರಣ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶ ಬೇಡ ಎಂದು ತೋಂಟದಾರ್ಯ ಜಾತ್ರಾ ಕಮಿಟಿಗೆ ಶ್ರೀರಾಮಸೇನೆ ಸಂಘಟನೆ ಒತ್ತಾಯಿಸಿದ್ದಾರೆ.

ಗದಗ: ತೋಂಟದಾರ್ಯ ಮಠದ ಜಾತ್ರೆಯಲ್ಲಿ ಅನ್ಯಧರ್ಮದ ವ್ಯಾಪಾರಸ್ಥರಿಗೆ ನಿರ್ಬಂಧಿಸಲು ಒತ್ತಾಯ
ಉತ್ತರ ಕರ್ನಾಟಕಕ್ಕೂ ಕಾಲಿಟ್ಟ ಧರ್ಮ ಅಸಹಕಾರ ಚಳುವಳಿ
Follow us
| Updated By: preethi shettigar

Updated on:Mar 28, 2022 | 2:25 PM

ಗದಗ: ಧರ್ಮ ಅಸಹಕಾರ ಚಳುವಳಿ ಉತ್ತರ ಕರ್ನಾಟಕಕ್ಕೂ ಕಾಲಿಟ್ಟಿದೆ. ತೋಂಟದಾರ್ಯ ಮಠದ ಜಾತ್ರೆಯಲ್ಲಿ(Fair) ಅನ್ಯಧರ್ಮದ ವ್ಯಾಪಾರಸ್ಥರಿಗೆ ನಿರ್ಬಂಧಕ್ಕೆ ಒತ್ತಾಯಿಸಿದ್ದಾರೆ. ಜಾತ್ರೆಯಲ್ಲಿ ಮುಸ್ಲಿಂ (Muslim) ವ್ಯಾಪಾರಸ್ಥರಿಗೆ ಅವಕಾಶ ನೀಡದಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್ ಮಾಡುವ ಮೂಲಕ ಒತ್ತಾಯಯಿಸಿದ್ದಾರೆ.

ಏಪ್ರಿಲ್ 15 ರಿಂದ ಆರಂಭವಾಗಲಿರೋ ತೋಂಟರ್ಯ ಮಠದ ಜಾತ್ರೆ ಒಂದು ತಿಂಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ. ಜಾತ್ರೆಯಲ್ಲಿ ನೂರಾರು ವ್ಯಾಪಾರಸ್ಥರು ಭಾಗಿಯಾಗಲಿದ್ದಾರೆ. ಹಿಜಾಬ್ ವಿಚಾರದ ಹೈಕೋರ್ಟ್ ತೀರ್ಪು ಪಾಲಿಸದ ಕಾರಣ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶ ಬೇಡ ಎಂದು ತೋಂಟದಾರ್ಯ ಜಾತ್ರಾ ಕಮಿಟಿಗೆ ಶ್ರೀರಾಮಸೇನೆ ಸಂಘಟನೆ ಒತ್ತಾಯಿಸಿದ್ದಾರೆ.

ಹಾಸನ: ಬೇಲೂರು ಐತಿಹಾಸಿಕ ದೇಗುಲದಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ನಿರ್ಬಂಧಕ್ಕೆ ಮನವಿ

ಬೇಲೂರು ಐತಿಹಾಸಿಕ ದೇಗುಲದಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ನಿರ್ಬಂಧಕ್ಕೆ ಮನವಿ ವಿಚಾರಕ್ಕೆ ಸಂಬಂಧಪಟ್ಟಂತೆ ಬೀದಿ ಬದಿ ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ. ತಮಗೆ ವ್ಯಾಪಾರಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಬೀದಿ ಬದಿ ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ನಾಲ್ಕು ದಶಕದಿಂದ ವ್ಯಾಪಾರ ಮಾಡುತ್ತಿದ್ದೆವು. ಈಗ ಏಕಾ ಏಕಿ ವ್ಯಾಪಾರ ಮಾಡದಂತೆ ತಾಕೀತು ಮಾಡಿದ್ದಾರೆ ವ್ಯಾಪಾರ ನಡೆಯದಿದ್ದರೆ ನಮಗೆ ಬದುಕೇ ಇಲ್ಲ. ನಮಗೆ ವ್ಯಾಪಾರಕ್ಕೆ ಅವಕಾಶ ನೀಡಿ ಎಂದು ಕೊಳಲು ಊದಿ ಗಿಟಾರ್ ಭಾರಿಸಿ ಡಿಸಿ ಕಛೇರಿ ಎದುರು ವರ್ತಕರು ಹೋರಾಟ ಮಾಡಿದ್ದಾರೆ.

ದೇಗುಲ ವ್ಯಾಪ್ತಿಯಲ್ಲಿ ಹಿಂದುಯೇತರರಿಗೆ ನಿರ್ಬಂಧಕ್ಕೆ ವಿರೋಧ

ಹಾಸನದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ದೇಗುಲ ವ್ಯಾಪ್ತಿಯಲ್ಲಿ ಹಿಂದುಯೇತರರಿಗೆ ನಿರ್ಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಹಿಂದಿನಂತೆ ಜಾತ್ರೆ ನಡೆಸಿಕೊಂಡು ಹೋಗಲು ಹಾಸನ ಡಿಸಿ ಆರ್.ಗಿರೀಶ್‌ಗೆ ಮನವಿ ಧರಣಿ ನಿರತರು ಸಲ್ಲಿಸಿದ್ದಾರೆ.

ವಿಜಯನಗರ: ಹಿಂದೂಯೇತರರ ವ್ಯಾಪಾರಕ್ಕೆ ಅನುಮತಿ ನೀಡದಂತೆ ಮನವಿ

ದೇಗುಲ ವ್ಯಾಪ್ತಿಯಲ್ಲಿ ಹಿಂದುಯೇತರರ ವ್ಯಾಪಾರ ವಿಚಾರಕ್ಕೆ ಸಂಬಂಧಪಟ್ಟಂತೆ ವಿಜಯನಗರ ಜಿಲ್ಲೆಯ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶ ನೀಡದಂತೆ ಹಿಂದು ಸಂಘಟನೆಗಳ ಪಟ್ಟು ಹಿಡಿದ್ದಾರೆ. ಭಜರಂಗದಳ ಹಾಗೂ ವಿಶ್ವ ಹಿಂದು ಪರಿಷತ್​ ಪಟ್ಟು ಹಿಡಿದಿದೆ. ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶ ನೀಡದಂತೆ ಡಿಸಿ ಮನವಿ ಸಲ್ಲಿಸಲು ಹಿಂದು ಸಂಘಟನೆಗಳು ಮುಂದಾಗಿವೆ. ಹಂಪಿ ಜಾತ್ರೆ. ಒಡಕರಾಯನ ಜಾತ್ರೆ. ಸಣ್ಣಕ್ಕಿ ವೀರಭದ್ರೇಶ್ವರ ಜಾತ್ರೆ ಸೇರಿದಂತೆ ಹಲವು ಜಾತ್ರೆಗಳಲ್ಲಿ ಅವಕಾಶ ನೀಡದಂತೆ ಕೂಡ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:

ಅರ್ಜೆಂಟ್ ಆಗಿ ಚುನಾವಣೆ ನಿಗದಿಪಡಿಸಿ; ಪೆಟ್ರೋಲ್ ​ಬೆಲೆ ಏರಿಕೆ ಬೆನ್ನಲ್ಲೇ ಚುನಾವಣಾ ಆಯೋಗಕ್ಕೆ ಒತ್ತಾಯ ಮಾಡಿದ ಪ್ರಿಯಾಂಕಾ ಚತುರ್ವೇದಿ

ಸ್ವಾಮೀಜಿಗಳ ಬಟ್ಟೆ ಹಿಜಾಬ್​​ಗೆ ಹೋಲಿಸಿ ಹೇಳಿಕೆ ವಿಚಾರ: ಟ್ವೀಟ್​ ಮಾಡಿ, ಅಪಪ್ರಚಾರವೆಂದ ವಿಪಕ್ಷ ನಾಯಕ ಸಿದ್ದರಾಮಯ್ಯ!

Published On - 2:07 pm, Mon, 28 March 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು