AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ವಸತಿ ನಿಲಯದಲ್ಲಿ ಹಸಿವು ತಾಳದೆ ಪರದಾಟ; ರಾತ್ರೋರಾತ್ರಿ ಜಿಲ್ಲಾಡಳಿತದ ಮೊರೆ ಹೋದ ವಿದ್ಯಾರ್ಥಿಗಳು

120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಪರದಾಟ ನಡೆಸುತ್ತಿದ್ದು, ರಾತ್ರಿ ಊಟ ಸಿಗದಿದಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಹಾಸ್ಟೆಲ್ ವಾರ್ಡನ್​ ಹಾಗೂ ಸಿಬ್ಬಂದಿಗಳ ಮೇಲೆ‌ ಸೂಕ್ತವಾದ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ.

ಗದಗ: ವಸತಿ ನಿಲಯದಲ್ಲಿ ಹಸಿವು ತಾಳದೆ ಪರದಾಟ; ರಾತ್ರೋರಾತ್ರಿ ಜಿಲ್ಲಾಡಳಿತದ ಮೊರೆ ಹೋದ ವಿದ್ಯಾರ್ಥಿಗಳು
ಹಾಸ್ಟೆಲ್ ವಿದ್ಯಾರ್ಥಿಗಳು
TV9 Web
| Updated By: preethi shettigar|

Updated on:Dec 18, 2021 | 9:04 AM

Share

ಗದಗ: ಹಸಿವು ತಾಳಲಾರದೆ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಗದಗ ಜಿಲ್ಲೆಯ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ನಡೆದಿದೆ. ಸಮರ್ಪಕವಾಗಿ ಹಾಸ್ಟೆಲ್ (Hostel) ಸಿಬ್ಬಂದಿಗಳು ಊಟ ನೀಡದೆ ಇರುವುದು ವಿದ್ಯಾರ್ಥಿಗಳ (Students) ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಹಾಸ್ಟೆಲ್ ಸಿಬ್ಬಂದಿಗಳ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿಗಳು ರಾತ್ರೋರಾತ್ರಿ ಜಿಲ್ಲಾಡಳಿತದ ಮೊರೆ ಹೋಗಿದ್ದಾರೆ.

120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಪರದಾಟ ನಡೆಸುತ್ತಿದ್ದು, ರಾತ್ರಿ ಊಟ ಸಿಗದಿದಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಹಾಸ್ಟೆಲ್ ವಾರ್ಡನ್​ ಹಾಗೂ ಸಿಬ್ಬಂದಿಗಳ ಮೇಲೆ‌ ಸೂಕ್ತವಾದ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ಜತೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ: ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು ಅಸ್ವಸ್ಥ ಪ್ರಕರಣ; ಬಹುತೇಕ ವಿದ್ಯಾರ್ಥಿಗಳು ಚೇತರಿಕೆ ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿರುವ ಮುರಾರ್ಜಿ ವಸತಿ ಶಾಲೆಯಲ್ಲಿ ಊಟ ಸೇವಿಸಿ 107 ಮಕ್ಕಳು ಅಸ್ವಸ್ಥರಾಗಿದ್ದರು. ಈ ಸಂಬಂಧ ಸದ್ಯ ಬಹುತೇಕ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ. ಮೊನ್ನೆ ರಾತ್ರಿ ಅನ್ನ ಸಾಂಬಾರ್, ಬೆಳಗ್ಗೆ ಚಿತ್ರಾನ್ನ ಸೇವಿಸಿದ್ದರು. ನಂತರ ವಾಂತಿ, ಹೊಟ್ಟೆ ನೋವಿನಿಂದ ಬಳಲುತ್ತಿದ್ದ 107 ವಿದ್ಯಾರ್ಥಿಗಳನ್ನು ಜಗಳೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದ ಬಳಿಕ 95 ವಿದ್ಯಾರ್ಥಿಗಳು ಚೆತರಿಸಿಕೊಂಡಿದ್ದಾರೆ. ವಸತಿ ಶಾಲೆಗೆ ತಹಶೀಲ್ದಾರ್, ಟಿಹೆಚ್​ಒ, ಮಕ್ಕಳ ತಜ್ಞರು ಭೇಟಿ ನೀಡಿದ್ದರು. ಅಲ್ಲದೇ ಮಕ್ಕಳು ಸೇವಿಸಿದ್ದ ಆಹಾರವನ್ನು ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ.

ಸ್ಥಳಕ್ಕೆ ತಾಲೂಕು ವೈಧ್ಯಾಧಿಕಾರಿ ಡಾ. ನಾಗರಾಜ್, ಮಕ್ಕಳ ತಜ್ಞ ಜಯಕುಮಾರ್, ತಹಶೀಲ್ದಾರ್ ಶಶಿಧರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇನ್ನೂ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಜಗಳೂರು ತಾಲೂಕಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಕೊಪ್ಪಳ: ಕಳಪೆ ಧಾನ್ಯಗಳ ಊಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಲಗೇಜ್ ಸಮೇತ ಹಾಸ್ಟೆಲ್​ನಿಂದ ಹೊರ ಬಿದ್ದಿರುವ ವಿದ್ಯಾರ್ಥಿಗಳು; ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಒತ್ತಾಯ

Published On - 8:50 am, Sat, 18 December 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ