AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ದಾರುಣ ಅಂತ್ಯ

ರಂಜಾನ್​ ಹಬ್ಬಕ್ಕೆ ತನ್ನ ಮಗಳನ್ನು ಕರೆತರಲು ಪೋಷಕರು ಯೋಚಿಸುತ್ತಿದ್ದರು. ಆದರೆ ಇತ್ತ ಪತ್ನಿಯನ್ನು ಕೊಂದ ಪತಿ ಮೃತದೇಹ ಆಸ್ಪತ್ರೆಯಲ್ಲಿಟ್ಟು ತನ್ನ ಕುಟುಂಬದೊಂದಿಗೆ ಪರಾರಿಯಾಗಿದ್ದಾನೆ. ಗದಗದಲ್ಲಿ ನಡೆದ ಈ ಕೃತ್ಯದ ಮಾಹಿತಿ ಇಲ್ಲಿದೆ.

ಗದಗ: ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ದಾರುಣ ಅಂತ್ಯ
ಪತ್ನಿಯನ್ನು ಕೊಂದ ಪತಿ (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on:Apr 21, 2023 | 3:38 PM

Share

ಗದಗ: ರಂಜಾನ್​ ಹಬ್ಬಕ್ಕೆ ತನ್ನ ಮಗಳನ್ನು ಕರೆತರಲು ಪೋಷಕರು ಪ್ಲನ್ ಮಾಡಿಕೊಂಡಿದ್ದರು. ಇದಕ್ಕಾಗಿ ಎಲ್ಲಾ ತಯಾರಿಗಳನ್ನು ಮನೆಯವರು ನಡೆಸುತ್ತಿದ್ದರು. ಇಷ್ಟೊಂದು ಸಂತೋಷದಲ್ಲಿದ್ದ ತವರು ಮನೆಯಲ್ಲಿ ನೀರವ ಮೌನ ಆವರಿಸಿದೆ. ಪೋಷಕರು, ಸಂಬಂಧಿಗಳು ಕಣ್ಣಿರಿನಲ್ಲಿ ಕೈತೊಳೆಯುತ್ತಿದ್ದಾರೆ. ಹೌದು, ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾದವಾಗಿದ್ದ ನವವಿವಾಹಿತೆಯನ್ನು ಪತಿಯೇ ಕೊಲೆ ಮಾಡಿ ತನ್ನ ಕುಟುಂಬದೊಂದಿಗೆ ಪರಾರಿಯಾದ ಘಟನೆ ಗದಗದ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ನವವಿವಾಹಿತೆ ಶಹನಾಜ್ ಬೇಗಂ (24) ಒಂದೂವರೆ ತಿಂಗಳ ಹಿಂದೆಯಷ್ಟೇ ಧಾರವಾಡ ಜಿಲ್ಲೆ ಅಣ್ಣಿಗೇರಿ ಮೂಲದ ಶಹಬಾಜ್ ಮುಳಗುಂದ ಎಂಬಾತನನ್ನು ವಿವಾಹವಾಗಿದ್ದಳು. ಒಂದೆಡೆ ಶಹನಾಜ್ ಬೇಗಂ ತವರು ಮನೆಯಲ್ಲಿ ಮಗಳ ಮದುವೆಯಾದ ಸಂತಸವಿದ್ದರೆ, ಇನ್ನೊಂದೆಡೆ ರಂಜಾನ್ ಹಬ್ಬದ ಸಂಭ್ರಮ ಸಡಗರ. ಈ ಹಬ್ಬಕ್ಕೆ ನವವಿವಾಹಿತೆ ಶಹನಾಜ್​ ಬೇಗಂಳನ್ನು ಕರೆತರುವ ಪ್ಲಾನ್ ಕೂಡ ಪೋಷಕರು ಹಾಕಿಕೊಂಡಿದ್ದರು.

ಇದನ್ನೂ ಓದಿ: Hassan: ಮೊದಲು ಮಿಸ್ಸಿಂಗ್, ಆ ಮೇಲೆ ಕಿಡ್ನಾಪ್, ಕೊನೆಗೆ ಕೊಲೆ ಕೇಸ್: ಇದು ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಗೆಳೆಯರಿಂದಲೇ ನವವಿವಾಹಿತ ಹತ್ಯೆಯಾದ ಕತೆ

ಗಂಡನ ಮನೆಯಿಂದ ಶಹನಾಜ್ ಬೇಗಂಳ ತವರಿಗೆ ಬರುತ್ತಿರುವ ಹಿನ್ನೆಲೆ ಹಬ್ಬವನ್ನು ಪ್ರತಿ ವರ್ಷಕ್ಕಿಂತ ಅದ್ದೂರಿಯಾಗಿ ನಡೆಸಲು ಬೇಕಾದ ಎಲ್ಲಾ ತಯಾರಿಗಳನ್ನು ನಡೆಸಲಾಗುತ್ತಿತ್ತು. ಆಕೆಗೆ ನೀಡಲೆಂದೇ ಹೊಸ ಬಟ್ಟೆ, ಚಿನ್ನವನ್ನು ಖರೀದಿಸಿಟ್ಟಿದ್ದರು. ಆದರೆ, ಇತ್ತ ಕೆಟ್ಟ ಪಿಡುಗಿನ ಹಿಂದೆ ಬಿದ್ದ ಬೇಗಂ ಪತಿ ಶಹಬಾಜ್ ಮುಳಗುಂದ ಮತ್ತು ಆತನ ಕುಟುಂಬದ ಸದಸ್ಯರು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರಂಜಾನ್ ಹಬ್ಬದಂದು ಮಗಳು ಬೇಗಂ ಬರುತ್ತಿದ್ದಾಳೆ ಎಂದು ಕಾಯುತ್ತಿದ್ದ ಪೋಷಕರಿಗೆ ತನ್ನ ಮಗಳ ಮೃತದೇಹ ಆಸ್ಪತ್ರೆಯಲ್ಲಿರುವ ಮಾಹಿತಿ ತಿಳಿದುಬಂದು ಬರ ಸಿಡಿಲು ಬಡಿದಂತಾಗಿದೆ. ಕೊಲೆ ನಂತರ ಶಹಬಾಜ್ ಮುಳಗುಂದ ಮತ್ತು ಕುಟುಂಬ ಪರಾರಿಯಾಗಿದ್ದು, ಇತ್ತ ಮೃತಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಬೇಗಂ ಕುಟುಂಬಸ್ಥರು ಆರೋಪಿಸಿದ್ದಾರೆ.

ಕ್ರೈಂ ನ್ಯೂಸ್​ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Fri, 21 April 23

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!