AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ದಾರುಣ ಅಂತ್ಯ

ರಂಜಾನ್​ ಹಬ್ಬಕ್ಕೆ ತನ್ನ ಮಗಳನ್ನು ಕರೆತರಲು ಪೋಷಕರು ಯೋಚಿಸುತ್ತಿದ್ದರು. ಆದರೆ ಇತ್ತ ಪತ್ನಿಯನ್ನು ಕೊಂದ ಪತಿ ಮೃತದೇಹ ಆಸ್ಪತ್ರೆಯಲ್ಲಿಟ್ಟು ತನ್ನ ಕುಟುಂಬದೊಂದಿಗೆ ಪರಾರಿಯಾಗಿದ್ದಾನೆ. ಗದಗದಲ್ಲಿ ನಡೆದ ಈ ಕೃತ್ಯದ ಮಾಹಿತಿ ಇಲ್ಲಿದೆ.

ಗದಗ: ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ದಾರುಣ ಅಂತ್ಯ
ಪತ್ನಿಯನ್ನು ಕೊಂದ ಪತಿ (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on:Apr 21, 2023 | 3:38 PM

Share

ಗದಗ: ರಂಜಾನ್​ ಹಬ್ಬಕ್ಕೆ ತನ್ನ ಮಗಳನ್ನು ಕರೆತರಲು ಪೋಷಕರು ಪ್ಲನ್ ಮಾಡಿಕೊಂಡಿದ್ದರು. ಇದಕ್ಕಾಗಿ ಎಲ್ಲಾ ತಯಾರಿಗಳನ್ನು ಮನೆಯವರು ನಡೆಸುತ್ತಿದ್ದರು. ಇಷ್ಟೊಂದು ಸಂತೋಷದಲ್ಲಿದ್ದ ತವರು ಮನೆಯಲ್ಲಿ ನೀರವ ಮೌನ ಆವರಿಸಿದೆ. ಪೋಷಕರು, ಸಂಬಂಧಿಗಳು ಕಣ್ಣಿರಿನಲ್ಲಿ ಕೈತೊಳೆಯುತ್ತಿದ್ದಾರೆ. ಹೌದು, ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾದವಾಗಿದ್ದ ನವವಿವಾಹಿತೆಯನ್ನು ಪತಿಯೇ ಕೊಲೆ ಮಾಡಿ ತನ್ನ ಕುಟುಂಬದೊಂದಿಗೆ ಪರಾರಿಯಾದ ಘಟನೆ ಗದಗದ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ನವವಿವಾಹಿತೆ ಶಹನಾಜ್ ಬೇಗಂ (24) ಒಂದೂವರೆ ತಿಂಗಳ ಹಿಂದೆಯಷ್ಟೇ ಧಾರವಾಡ ಜಿಲ್ಲೆ ಅಣ್ಣಿಗೇರಿ ಮೂಲದ ಶಹಬಾಜ್ ಮುಳಗುಂದ ಎಂಬಾತನನ್ನು ವಿವಾಹವಾಗಿದ್ದಳು. ಒಂದೆಡೆ ಶಹನಾಜ್ ಬೇಗಂ ತವರು ಮನೆಯಲ್ಲಿ ಮಗಳ ಮದುವೆಯಾದ ಸಂತಸವಿದ್ದರೆ, ಇನ್ನೊಂದೆಡೆ ರಂಜಾನ್ ಹಬ್ಬದ ಸಂಭ್ರಮ ಸಡಗರ. ಈ ಹಬ್ಬಕ್ಕೆ ನವವಿವಾಹಿತೆ ಶಹನಾಜ್​ ಬೇಗಂಳನ್ನು ಕರೆತರುವ ಪ್ಲಾನ್ ಕೂಡ ಪೋಷಕರು ಹಾಕಿಕೊಂಡಿದ್ದರು.

ಇದನ್ನೂ ಓದಿ: Hassan: ಮೊದಲು ಮಿಸ್ಸಿಂಗ್, ಆ ಮೇಲೆ ಕಿಡ್ನಾಪ್, ಕೊನೆಗೆ ಕೊಲೆ ಕೇಸ್: ಇದು ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಗೆಳೆಯರಿಂದಲೇ ನವವಿವಾಹಿತ ಹತ್ಯೆಯಾದ ಕತೆ

ಗಂಡನ ಮನೆಯಿಂದ ಶಹನಾಜ್ ಬೇಗಂಳ ತವರಿಗೆ ಬರುತ್ತಿರುವ ಹಿನ್ನೆಲೆ ಹಬ್ಬವನ್ನು ಪ್ರತಿ ವರ್ಷಕ್ಕಿಂತ ಅದ್ದೂರಿಯಾಗಿ ನಡೆಸಲು ಬೇಕಾದ ಎಲ್ಲಾ ತಯಾರಿಗಳನ್ನು ನಡೆಸಲಾಗುತ್ತಿತ್ತು. ಆಕೆಗೆ ನೀಡಲೆಂದೇ ಹೊಸ ಬಟ್ಟೆ, ಚಿನ್ನವನ್ನು ಖರೀದಿಸಿಟ್ಟಿದ್ದರು. ಆದರೆ, ಇತ್ತ ಕೆಟ್ಟ ಪಿಡುಗಿನ ಹಿಂದೆ ಬಿದ್ದ ಬೇಗಂ ಪತಿ ಶಹಬಾಜ್ ಮುಳಗುಂದ ಮತ್ತು ಆತನ ಕುಟುಂಬದ ಸದಸ್ಯರು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರಂಜಾನ್ ಹಬ್ಬದಂದು ಮಗಳು ಬೇಗಂ ಬರುತ್ತಿದ್ದಾಳೆ ಎಂದು ಕಾಯುತ್ತಿದ್ದ ಪೋಷಕರಿಗೆ ತನ್ನ ಮಗಳ ಮೃತದೇಹ ಆಸ್ಪತ್ರೆಯಲ್ಲಿರುವ ಮಾಹಿತಿ ತಿಳಿದುಬಂದು ಬರ ಸಿಡಿಲು ಬಡಿದಂತಾಗಿದೆ. ಕೊಲೆ ನಂತರ ಶಹಬಾಜ್ ಮುಳಗುಂದ ಮತ್ತು ಕುಟುಂಬ ಪರಾರಿಯಾಗಿದ್ದು, ಇತ್ತ ಮೃತಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಬೇಗಂ ಕುಟುಂಬಸ್ಥರು ಆರೋಪಿಸಿದ್ದಾರೆ.

ಕ್ರೈಂ ನ್ಯೂಸ್​ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Fri, 21 April 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್